ಸೋಂಕಿತರಿಗೆ ಏಕರೂಪ ಚಿಕಿತ್ಸೆ: ಆನ್‌ಲೈನ್‌ ತರಬೇತಿ

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ವಿನೂತನ ಉಪಕ್ರಮ

Team Udayavani, Mar 29, 2020, 6:15 AM IST

ಸೋಂಕಿತರಿಗೆ ಏಕರೂಪ ಚಿಕಿತ್ಸೆ: ಆನ್‌ಲೈನ್‌ ತರಬೇತಿ

ಬೆಂಗಳೂರು: ಕೋವಿಡ್‌ 19 ಸೋಂಕಿತರಿಗೆ ರಾಜ್ಯವ್ಯಾಪಿ ಏಕರೂಪ ಚಿಕಿತ್ಸೆ ನೀಡಲು ಮತ್ತು ಅವರ ಆರೈಕೆಗೆ ಅನುಕೂಲ ಆಗುವಂತೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ವೈದ್ಯರಿಗೆ, ನರ್ಸ್‌ಗಳಿಗೆ ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಆನ್‌ಲೈನ್‌ ಮೂಲಕ ತರಬೇತಿ ನೀಡಲು ನಿರ್ಧರಿಸಿದೆ.

ಕೋವಿಡ್‌ 19 ಸೋಂಕಿತರಿಗೆ ಏಕರೂಪದ ಚಿಕಿತ್ಸೆ ಇರಬೇಕು ಮತ್ತು ಅದನ್ನು ಎಲ್ಲರೂ ಪಾಲಿಸಲೇಬೇಕಾಗಿರುತ್ತದೆ. ಅತ್ಯಂತ ಸೂಕ್ಷ್ಮ ರೀತಿಯಲ್ಲಿ ಚಿಕಿತ್ಸಾ ವಿಧಾನ ಮತ್ತು ಆರೈಕೆಗಳು ಅಗತ್ಯ ಇರುವುದರಿಂದ ಎಲ್ಲ ಜಿಲ್ಲೆಗಳ ವೈದ್ಯರಿಗೆ, ನರ್ಸ್‌ಗಳಿಗೆ ಮಾತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಆನ್‌ಲೈನ್‌ ಮೂಲಕ ತರಬೇತಿ ನೀಡಲು ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ. ಆಯಾ ಜಿಲ್ಲೆಗಳಲ್ಲಿಯೇ ವೈದ್ಯರು, ನರ್ಸ್‌ಗಳು ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ಲಭ್ಯತೆಯ ಆಧಾರದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ವಿವಿಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಖಚಿತಪಡಿಸಿದ್ದಾರೆ.

ತಜ್ಞರ ಮೂಲಕ ತರಬೇತಿ
ಈ ವಿಚಾರದಲ್ಲಿ ವೈದ್ಯರಿಗೆ ಅಥವಾ ನರ್ಸ್‌ಗಳಿಗೆ ತರಬೇತಿ ನೀಡುವವರೂ ಕೂಡ ತುಂಬ ವಿಚಾರವನ್ನು ತಿಳಿದವರಾಗಿರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ವಿವಿಯು ವೈದ್ಯಕೀಯ ತಜ್ಞರ ಮೂಲಕ ತರಬೇತಿ ನೀಡಲಿದೆ. ಸರಕಾರದ ಒಪ್ಪಿಗೆಯಲ್ಲೇ ಈ ತರಬೇತಿ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.

ಏನೇನು ತರಬೇತಿ?
ಕೋವಿಡ್‌ 19 ವೈರಸ್‌ ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಸರಕಾರ ಈಗಾಗಲೇ ಜಾರಿಗೊಳಿಸಿದೆ. ಆದರೆ ಸೋಂಕಿತರನ್ನು ಮಾತ್ರ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದವರು ಮಾತ್ರ ನೋಡಿಕೊಳ್ಳಬೇಕು. ಹೀಗಾಗಿ ವೈದ್ಯರಿಗೆ, ನರ್ಸ್‌ ಗಳಿಗೆ ಮತ್ತು ಪ್ಯಾರಾಮೆಡಿಕಲ್‌ ಸಿಬಂದಿ ವರ್ಗಕ್ಕೆ ಅತ್ಯಾಧುನಿಕ ಸೌಲಭ್ಯವನ್ನು ವೈದ್ಯಕೀಯ ಸೌಲಭ್ಯ ಬಳಸಿ, ಯಾವುದೇ ರೀತಿಯಲ್ಲೂ ಅಪಾಯವಿಲ್ಲದ ರೀತಿಯಲ್ಲಿ ಆರೈಕೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ. ತರಬೇತಿ ಆನ್‌ಲೈನ್‌ ಮೂಲಕ ಇರುವುದರಿಂದ ವೈದ್ಯರು ಅಥವಾ ವೈದ್ಯಕೀಯ ಸಿಬಂದಿ ತಾವು ಇರುವ ಜಾಗಳಿಂದಲೇ ತರಬೇತಿ ಪಡೆಯಬಹುದಾಗಿದೆ ಎಂದು ವಿವಿಯ ಹಿರಿಯ ಅಧಿಕಾರಿ ಮಾಹಿತಿ ನೀಡಿದರು.

ಕೋವಿಡ್‌ 19 ಚಿಕಿತ್ಸೆ ಮತ್ತು ಆರೈಕೆ ಸಂಬಂಧಿಸಿದಂತೆ ಇಡೀ ದೇಶದಲ್ಲೇ ಏಕರೂಪ ಕ್ರಮ ಅಳವಡಿಸಿಕೊಳ್ಳಬೇಕು. ಹೀಗಾಗಿ ರಾಜ್ಯದ ಎಲ್ಲಡೇ ಏಕರೂಪ ಚಿಕಿತ್ಸೆ ಮತ್ತು ಆರೈಕೆ ಕ್ರಮಕ್ಕಾಗಿ ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರದ ಸಿಬಂದಿಗೆ ತರಬೇತಿ ನೀಡಲಿದ್ದೇವೆ. ಇದು ಚಿಕಿತ್ಸೆಗೆ ಅನುಕೂಲ ಆಗುವ ಜತೆಗೆ ಆಧುನಿಕ ಉಪ ಕರಣಗಳ ಸರಳ ಬಳಕೆಗೆ ಉಪಯೋಗ ಆಗಲಿದೆ.
-ಡಾ|ಎಸ್‌.ಸಚ್ಚಿದಾನಂದ, ಕುಲಪತಿ,
ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ.

ಸಿಬಂದಿಗೆ ತರಬೇತಿ
ರಾಜ್ಯದಲ್ಲಿರುವ ಬಹುತೇಕ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ನರ್ಸಿಂಗ್‌ ಕಾಲೇಜುಗಳು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಅಧೀನದಲ್ಲಿ ಬರುತ್ತದೆ. ಕೋವಿಡ್‌ 19 ತಡೆಯುವ ನಿಟ್ಟಿನಲ್ಲಿ ವಿವಿಯೂ ಈಗಾಗಲೇ ಕಾರ್ಯೋನ್ಮುಖವಾಗಿದ್ದು ವೈದ್ಯಕೀಯ ವಿದ್ಯಾರ್ಥಿಗಳಿಗೆ ಈ ಸಂಬಂಧ ಅಗತ್ಯ ಸೂಚನೆಯನ್ನು ನೀಡಿದ್ದು, ಈಗ ವೈದ್ಯರು ಮತ್ತು ವೈದ್ಯಕೀಯ ಸೇವೆಯ ಸಿಬಂದಿಗೆ ತರಬೇತಿ ನೀಡಲು ಮುಂದಾಗಿದೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.