ಮೀನುಗಾರರ ಮನೆ ನಿರ್ಮಾಣ ಯೋಜನೆ ಇಲಾಖೆ ವ್ಯಾಪ್ತಿಗೆ: ಕೋಟ
Team Udayavani, Mar 29, 2020, 5:30 AM IST
ಮಂಗಳೂರು: “ಮತ್ಸ್ಯಾಶ್ರಯ’ ಯೋಜನೆಯಡಿ ಮೀನುಗಾರರ ಮನೆ ನಿರ್ಮಾಣ ಯೋಜನೆಯನ್ನು ಮೀನುಗಾರಿಕಾ ಇಲಾಖೆಗೆ ನೀಡುವ ತೀರ್ಮಾನವನ್ನು ಸಚಿವ ಸಂಪುಟ ಮೂಲಕ ಕೈಗೊಂಡಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕ್ರಮ ಅಭಿನಂದನೀಯ ಎಂದು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಇಲ್ಲಿವರೆಗೆ ನನೆಗುದಿಗೆ ಬಿದ್ದಿದ್ದ “ಮತ್ಸ್ಯಾಶ್ರಯ’ ಯೋಜನೆಯಡಿ ಮೀನುಗಾರರ ಮನೆ ಮಂಜೂರಾತಿ ಪ್ರಕರಣ ಇತ್ಯರ್ಥವಾಗಿದೆ. ಇನ್ನು ಮುಂದೆ ರಾಜೀವ್ ಗಾಂಧಿ ವಸತಿ ನಿಗಮದ ಬದಲು ಮೀನುಗಾರಿಕಾ ಇಲಾಖೆ ವ್ಯಾಪ್ತಿಗೆ ಈ ಯೋಜನೆ ಬರಲಿದೆ. ಇದರಿಂದ ಸುಮಾರು 4 ವರ್ಷಕ್ಕೂ ಹೆಚ್ಚು ಕಾಲ ಇದ್ದ ಗೊಂದಲ ಪರಿಹಾರವಾಗಲಿದೆ.
“ಮತ್ಸ್ಯಾಶ್ರಯ’ ಯೋಜನೆಯಡಿ 3 ಸಾವಿರ ಮೀನುಗಾರರ ಮನೆಗಳು ಮಂಜೂರಾಗಿದ್ದರೂ 2970ಕ್ಕೂ ಹೆಚ್ಚು ಮನೆಗಳು ಆರಂಭವಾಗದೆ ಉಳಿದಿದ್ದು, ಮೀನುಗಾರರು ಮನೆ ಕಟ್ಟಲಾಗದೆ ಸಂಕಷ್ಟ ಪಡುತ್ತಿದ್ದರು. ಇದೀಗ ಯೋಜನೆ ಅನುಷ್ಠಾನವು ಇಲಾಖೆಗೆ ಹಸ್ತಾಂತರವಾಗಿರುವುದರಿಂದ ಇಲಾಖೆ ನೇರವಾಗಿ ಮೀನುಗಾರಿಕಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸಿ ಮೀನುಗಾರರಿಗೆ ಹಂತ ಹಂತವಾಗಿ ಹಣ ಪಾವತಿ ಮಾಡುವ ಅವಕಾಶವಿದ್ದು, ಶೀಘ್ರ ಮನೆ ನಿರ್ಮಾಣ ಸಾಧ್ಯವಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾರವಾರ ಬಂದರಿಗೆ 19.5 ಕೋಟಿ ರೂ. ವೆಚ್ಚದಲ್ಲಿ ಅಗ್ನಿಶಾಮಕ ಘಟಕವನ್ನು ಸಚಿವ ಸಂಪುಟ ಮಂಜೂರು ಮಾಡಿರುವುದು ಶ್ಲಾಘನೀಯ ಎಂದು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ