ಪಾಕ್‌ ಆಕ್ರಮಿತ ಪ್ರದೇಶಗಳಲ್ಲಿ ಕ್ವಾರಂಟೈನ್ ಶಿಬಿರ


Team Udayavani, Mar 29, 2020, 1:00 PM IST

ಪಾಕ್‌ ಆಕ್ರಮಿತ ಪ್ರದೇಶಗಳಲ್ಲಿ ಕ್ವಾರಂಟೈನ್ ಶಿಬಿರ

ಇಸ್ಲಾಮಾಬಾದ್‌, ಮಾ. 28: ಮಾರಣಾಂತಿಕ ಕೋವಿಡ್‌ 19 ವೈರಸ್‌ ಹರಡುವಿಕೆಗೆ ಸಂಬಂಧಿಸಿದಂತೆ ಚೀನಾ, ಅಮೆರಿಕ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದರೆ, ಮತ್ತೂಂದೆಡೆ ಪಾಕಿಸ್ತಾನ ಸೇನೆ ನೂರಾರು ಕೋವಿಡ್‌ 19 ಪೀಡಿತರನ್ನು ಪಂಜಾಬ್‌ ಪ್ರಾಂತ್ಯದಿಂದ ಪಾಕ್‌ ಆಕ್ರಮಿತ ಕಾಶ್ಮೀರ(ಪಿಒಕೆ) ಮತ್ತು ಗಿಲ್ಗಿಟ್‌ ಬಾಲ್ಟಿಸ್ಥಾನ್‌ ಪ್ರದೇಶಕ್ಕೆ ತಂದು ಕೂಡಿ ಹಾಕತೊಡಗಿದೆ.

ಪಿಒಕೆ ಮೂಲಗಳ ಪ್ರಕಾರ, ಸೇನಾ ನೆಲೆಗಳ ಹಾಗೂ ಸೇನಾ ಕುಟುಂಬದ ನಿವಾಸಗಳ ಸುತ್ತಮುತ್ತ ಕೋವಿಡ್‌ 19 ರೋಗಿಗಳು ಇರಬಾರದು. ಪಂಜಾಬ್‌ ಪ್ರಾಂತ್ಯದಲ್ಲಿರುವ ಎಲ್ಲ ಕೋವಿಡ್‌ ಸೋಂಕಿತರಿಗೆ ಪಾಕ್‌ ಆಕ್ರಮಿತ ಪ್ರದೇಶಗಳಲ್ಲಿ ಕ್ವಾರಂಟೈನ್‌ ಶಿಬಿರ ನಿರ್ಮಿಸಿ ಕೂಡಿ ಹಾಕುವಂತೆ ಸೇನೆ ಆದೇಶ ನೀಡಿದೆಯಂತೆ. ಸೇನೆಯ ವಾಹನಗಳಲ್ಲಿ ಅಪಾರ ಪ್ರಮಾಣದ ಕೋವಿಡ್‌ 19 ಸೋಂಕು ಪೀಡಿತರನ್ನು ತುಂಬಿಕೊಂಡು ಮೀರ್‌ಪುರ್‌ ನಗರ ಮತ್ತು ಪಿಒಕೆ, ಗಿಲ್ಗಿಟ್‌ ಬಾಲ್ಟಿಸ್ತಾನ್‌ ಪ್ರದೇಶಗಳಲ್ಲಿ ತಂದು ಬಿಡುತ್ತಿರುವುದಾಗಿ ವರದಿ ತಿಳಿಸಿದೆ.

ಇದರಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಪಾಕಿಸ್ತಾನದ ಕೋವಿಡ್‌ 19 ರೋಗಿಗಳು ಹಾಗೂ ಕ್ವಾರಂಟೈನ್‌ ಸೆಂಟರ್‌ಗಳನ್ನು ನಿರ್ಮಿಸುತ್ತಿರುವುದರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾಗಿ ಪಾಕ್‌ ಸೇನೆಗೆ ಪಂಜಾಬ್‌ ಪ್ರಾಂತ್ಯ ಮುಖ್ಯ ವಿನಃ ಪಿಒಕೆ ಅಲ್ಲ ಎಂದು ವರದಿ ವಿಶ್ಲೇಷಿಸಿದೆ. ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪಿಒಕೆ ಹಾಗೂ ಗಿಲ್ಗಿಟ್‌ ಬಾಲ್ಟಿಸ್ತಾನ್‌ ಪ್ರದೇಶಗಳಲ್ಲಿಯಾವುದೇ ಮೂಲ ಸೌಕರ್ಯಗಳಿಲ್ಲ. ಆಸ್ಪತ್ರೆಯಾಗಲೀ, ವೈದ್ಯಕೀಯ ಸಿಬಂದಿಯಾಗಲೀ ಇಲ್ಲ. ಪಂಜಾಬ್‌ ಪ್ರಾಂತ್ಯದ ಕೋವಿಡ್‌ 19 ಸೋಂಕಿತರನ್ನು ತಂದು ಇಲ್ಲಿ ಕೂಡಿಹಾಕಿದರೆ ಇಡೀ ಪ್ರದೇಶವೇ ಸೋಂಕಿಗೀಡಾಗಲಿದೆ ಎಂಬುದು ಸ್ಥಳೀಯರ ಆತಂಕ. ಇದು ಕಾಶ್ಮೀರಿ ಜನರಿಗೆ ಅಪಾಯದ ಕರೆಗಂಟೆಯಾಗಿದೆ ಎಂದು ಎಚ್ಚರಿಸಿದ್ದಾರೆ. ಸಣ್ಣ ಖಾಯಿಲೆಗೂ ಚಿಕಿತ್ಸೆ ನೀಡುವ ಪ್ರಾಥಮಿಕ ಆರೋಗ್ಯ ಕೇಂದ್ರವೂ ಪಿಒಕೆ, ಗಿಲಿYಟ್‌ ಪ್ರದೇಶದಲ್ಲಿ ಕಷ್ಟ. ಇಂತಹ ಪ್ರದೇಶದಲ್ಲಿ ಕೋವಿಡ್‌ 19 ಸೋಂಕು ಹರಡಿದರೆ ಮುಂದೆ ನಮ್ಮ ಕಥೆ ಏನು ಎಂದು ಮುಜಾಫ‌ರ್‌ ಬಾದ್‌ ನಿವಾಸಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.