ಕೋವಿಡ್ 19 ತಡೆಗೆ ಇನ್ಫೋಸಿಸ್ ಪ್ರತಿಷ್ಠಾನದಿಂದ 20 ಲಕ್ಷ ರೂ.
Team Udayavani, Mar 29, 2020, 12:44 PM IST
ಧಾರವಾಡ : ಕೋವಿಡ್ 19 ಸಂಕಷ್ಟ ನಿಯಂತ್ರಣಕ್ಕಾಗಿ ಮತ್ತು ಅಗತ್ಯ ಸೌಲಭ್ಯ ಒದಗಿಸಲು ಇನ್ಫೋಸಿಸ್ ಫೌಂಡೇಶನ್ ಮುಂದಾಗಿದ್ದು ಧಾರವಾಡ ಜಿಲ್ಲೆ ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿಗೆ ಸೇರಿ ಒಟ್ಟು 20 ಲಕ್ಷ ರೂ. ನೆರವು ನೀಡಿದೆ.
ಪ್ರತಿಷ್ಠಾನದ ಮುಖ್ಯಸ್ಥರಾದ ಸುಧಾಮೂರ್ತಿ ಅವರು ಕೋವಿಡ್ 19 ತಡೆಗೆ ಹರಸಾಹಸ ಪಡುತ್ತಿರುವ ಸಿಬ್ಬಂದಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಹೆಚ್ಚು ಒತ್ತು ನೀಡಲು ಮುಂದಾಗಿದ್ದು, ಧಾರವಾಡದ ಸಾಫಲ್ಯ ಪ್ರತಿಷ್ಠಾನ ಮತ್ತು ಗ್ರಾಮ ವಿಕಾಸ ಸೊಸೈಟಿ ಮೂಲಕ ಪರಿಹಾರ ಸಾಮಗ್ರಿ ವಿತರಿಸಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ಅವಳಿ-ನಗರ ಸೇರಿದಂತೆ ಧಾರವಾಡ ಜಿಲ್ಲೆ ಹಾಗೂ ಶಿಗ್ಗಾವಿ ತಾಲೂಕುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೌರಾಡಳಿತ ಸಂಸ್ಥೆಗಳ ಸ್ವತ್ಛತಾ ಕರ್ಮಿಗಳಿಗೆ 20 ಸಾವಿರ ಮಾಸ್ಕ್ ಮತ್ತು ಪ್ರತಿಯೊಬ್ಬರಿಗೆ ವೈಯಕ್ತಿಕ ಉಪಯೋಗಕ್ಕಾಗಿ ಸ್ಯಾನಿಟೈಜರ್ ಬಾಟಲಿ ಹಂಚಲಾಗುವುದು. ವೈದ್ಯಕೀಯ ಸಿಬ್ಬಂದಿಗೆ ಉನ್ನತ ಮಟ್ಟದ ಎನ್-95 ಮಾಸ್ಕ್ ಮತ್ತು ಸ್ಯಾನಿಟೈಜರ್ ಒದಗಿಸಲಾಗುವುದು. ಧಾರವಾಡ ನಗರ ಹಾಗೂ ಹುಬ್ಬಳ್ಳಿಯ ಗೋಕುಲ ಸುತ್ತಲಿನ ಪ್ರದೇಶದಲ್ಲಿ ವಾಸವಾಗಿರುವ ಗೋಸಾವಿ, ಹರಿಣಶಿಕಾರಿ,ಕೊಂಚಿಕೊರವ ಸಮಾಜದ ಬಡ ಕುಟುಂಬಗಳಿಗೆ 10 ದಿನಗಳಿಗೆ ಆಗುವಷ್ಟು ದಿನಸಿ ಸಾಮಾಗ್ರಿಗಳನ್ನು ಕೂಡ ಒದಗಿಸಲು ಉದ್ದೇಶಿಸಲಾಗಿದೆ.
ಹಿರಿಯ ನ್ಯಾಯವಾದಿ ಅರುಣ ಜೋಶಿ, ಮೃಣಾಲ ಜೋಶಿ, ಜಗದೀಶ ನಾಯ್ಕ ಹಾಗೂ ಶಾಸಕ ಅರವಿಂದ ಬೆಲ್ಲದ ಅವರ ಪ್ರಯತ್ನದಿಂದ ಈ ನೆರವು ದೊರೆತಿದ್ದು, ಶೀಘ್ರವೇ ಈ ಕಾರ್ಯಗಳನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ನೇತೃತ್ವದಲ್ಲಿ ನಿರ್ವಹಿಸಲಾಗುವುದು ಎಂದು ಅರುಣ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್