ಲಾಕ್ ಡೌನ್ ಪರಿಸ್ಥಿತಿಯ ಬಗ್ಗೆ ಅವಲೋಕನಕ್ಕೆ ರಮೇಶ ಜಾರಕಿಹೊಳಿ ಬೈಕ್ ರೈಡ್
Team Udayavani, Mar 29, 2020, 3:07 PM IST
ಬೆಳಗಾವಿ: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಹೇರಲಾಗಿರುವ ಲಾಕ್ ಡೌನ್ ಪರಿಸ್ಥಿತಿ ಅವಲೋಕನಕ್ಕೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ತಮ್ಮ ವಿಧಾನಸಭಾ ಕ್ಷೇತ್ರ ಗೋಕಾಕ್ ನಗರದಲ್ಲಿ ರವಿವಾರ ದ್ವಿಚಕ್ರ ವಾಹನದಲ್ಲಿ ಸಂಚರಿಸಿದರು.
ಮಾಸ್ಕ್ ಧರಿಸಿ ಬೈಕ್ ನಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಸುತ್ತಾಡಿದ ಸಚಿವರು ನಗರದ ಲಾಕ್ ಡೌನ್ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದರು.
ಅಲ್ಲಲ್ಲಿ ಪೊಲೀಸರಿಂದಲೂ ಮಾಹಿತಿ ಪಡೆದುಕೊಂಡ ಸಚಿವರು ಲಾಕ್ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.