2 ವರ್ಷಗಳಿಂದ 1,700 ಕೋ.ರೂ. “ನರೇಗಾ ಬಾಕಿ’

ಕೇಂದ್ರದಿಂದ ಬಾರದ ಬಾಕಿ ಹಣ ಕಾರ್ಮಿಕರಿಗೆ ಸಿಗದ ಕೂಲಿ ಸಂಕಷ್ಟದಲ್ಲಿ ಕಾರ್ಮಿಕರು

Team Udayavani, Mar 30, 2020, 6:45 AM IST

2 ವರ್ಷಗಳಿಂದ 1,700 ಕೋ.ರೂ. “ನರೇಗಾ ಬಾಕಿ’

ಬೆಂಗಳೂರು: ಕೋವಿಡ್-19 ವೈರಸ್‌ ನಿಯಂತ್ರಿಸಲು ಕೇಂದ್ರ ಸರಕಾರ ದೇಶದ ಜನತೆಗೆ ಪ್ರೋತ್ಸಾಹ ಧನಗಳನ್ನು ಘೋಷಣೆ ಮಾಡುತ್ತಿದೆ. ಆದರೆ ಕಳೆದ ಎರಡು ವರ್ಷಗಳಿಂದ ರಾಜ್ಯದ ನರೇಗಾ ಕಾರ್ಮಿಕರಿಗೆ ನೀಡಬೇಕಿರುವ ಕೂಲಿ ಹಣ 1,744 ಕೋ. ರೂ. ನೀಡದೆ ಬಾಕಿ ಉಳಿಸಿಕೊಂಡಿದೆ. ಈಗ ರಾಜ್ಯಾದ್ಯಂತ ಲಾಕ್‌ಡೌನ್‌ ಜಾರಿಯಾಗಿರುವುದರಿಂದ ಇತ್ತ ಕೆಲಸವೂ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇಂಥ ಸಂದರ್ಭದಲ್ಲಿ ನರೇಗಾ ಕಾರ್ಮಿಕರು ಹಳೆಯ ಬಾಕಿಯ ನಿರೀಕ್ಷೆಯಲ್ಲಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಕಳೆದ ಎರಡು ದಿನಗಳ ಹಿಂದೆ ನರೇಗಾ ಕೂಲಿ ಕಾರ್ಮಿಕರಿಗೆ ಎರಡು ತಿಂಗಳುಗಳ ಕೂಲಿಯನ್ನು ಮುಂಗಡವಾಗಿಯೇ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಈಗಾಗಲೇ ದುಡಿದ ಕೂಲಿಯೂ ಬರದಿರುವುದರಿಂದ ಹಳೆಯ ಬಾಕಿಯನ್ನಾದರೂ ಸರಕಾರ ಮೊದಲು ನೀಡಲಿ ಎಂಬ ಬೇಡಿಕೆ ಕೂಲಿ ಕಾರ್ಮಿಕರದ್ದಾಗಿದೆ.
ರಾಜ್ಯ ಸರಕಾರವೂ ಕೂಡ ನರೇಗಾ ಕಾರ್ಮಿಕರ 755 ಕೋ. ರೂ. ಕೂಲಿ ಹಣ ಬಾಕಿ ಉಳಿಸಿಕೊಂಡಿದೆ. 2018-19 ನೇ ಸಾಲಿನ 32.81 ಕೋ.ರೂ. ಕೂಲಿ ಮತ್ತು 119.17 ಕೋ. ರೂ. ಸಾಮಗ್ರಿ ಖರೀದಿ ಹಣ, 2019-20 ನೇ ಸಾಲಿನ 53.61 ಕೋ. ರೂ. ಕೂಲಿ ಹಣ ಮತ್ತು 549.81 ಕೋ.ರೂ. ಸಾಮಗ್ರಿ ಹಣವನ್ನು ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿದೆ.

ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ 2005 ರ ಸೆಕ್ಸೆನ್‌ 3(3)ರ ಪ್ರಕಾರ ವಾರಕ್ಕೊಮ್ಮೆ ಅಥವಾ ಹಾಜರಾತಿ ಮುಕ್ತಾಯಗೊಳಿಸಿದ 15 ದಿನಗಳಲ್ಲಿ ಕೂಲಿ ನೀಡಬೇಕೆಂಬ ನಿಯಮ ಇದೆ. ಆದರೂ ಕೇಂದ್ರ ಸರಕಾರ ನಿಗದಿತ ಸಮಯದಲ್ಲಿ ಕೂಲಿ ಹಣ ಬಿಡುಗಡೆ ಮಾಡದಿರುವುದರಿಂದ ಕಾರ್ಮಿಕರು ಸಂಕಷ್ಟ ಎದುರಿಸುವಂತಾಗಿದೆ.

ನರೇಗಾ ಯೋಜನೆ ಅಡಿಯಲ್ಲಿ 2015-16 ನಿಂದ ಇಲ್ಲಿಯವರೆಗೆ ರಾಜ್ಯ ಸರಕಾರ 3,513 ಕೋ.ರೂ. ಪಾವತಿಸಿದ್ದು, ಅದರಲ್ಲಿ ಕೇಂದ್ರ ಸರಕಾರ 3,097.10 ಕೋ. ರೂ. ಮರು ಪಾವತಿ ಮಾಡಿದೆ. ಇನ್ನೂ 416 .12 ಕೋ.ರೂ. ಗಳನ್ನು ಕೇಂದ್ರ ಸರಕಾರ ಮರು ಪಾವತಿ ಮಾಡಬೇಕಿದೆ.

ಗೊಂದಲದ ಆದೇಶ
ರಾಜ್ಯ ಸರಕಾರ ಈಗ ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ವೈಯಕ್ತಿಕವಾಗಿ ಯಾವುದೇ ಆ್ಯಕ್ಷನ್‌ ಪ್ಲಾನ್‌ ಇಲ್ಲದೇ ಕಾಮಗಾರಿ ಕೈಗೆತ್ತಿಕೊಳ್ಳಲು ಸರಕಾರ ಅವಕಾಶ ಕಲ್ಪಿಸಿ ಆದೇಶಿಸಿದೆ. ಇದು ಪಿಡಿಒ ಮತ್ತು ಪಂಚಾಯತ್‌ ಸದಸ್ಯರು ಬೇಕಾದವರಿಗೆ ಮಾತ್ರ ಅನುಕೂಲ ಕಲ್ಪಿಸಲು ಮಾಡಿಕೊಟ್ಟಂತಾಗುತ್ತದೆ ಎಂಬ ಆರೋಪ ಕೇಳಿ ಬರುತ್ತಿದೆ.

ಕೋವಿಡ್-19 ಭೀತಿ: ಕೂಲಿಗೆ ಕತ್ತರಿ
ನರೇಗಾ ಯೋಜನೆ ಅಡಿ ನೋಂದಾಯಿತ ಕೂಲಿ ಕಾರ್ಮಿಕರಿಗೆ ವಾರ್ಷಿಕ ನೂರು ದಿನಗಳ ಕೂಲಿ ಒದಗಿಸಲಾಗುತ್ತದೆ. ಈ ವರ್ಷ ರಾಜ್ಯದಲ್ಲಿ ಪ್ರವಾಹ ಉಂಟಾಗಿರುವುದರಿಂದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ 150 ದಿನಗಳ ಕೂಲಿ ಕೊಡಲು ರಾಜ್ಯ ಸರಕಾರ ಕೇಂದ್ರದಿಂದ ಅನುಮತಿ ಪಡೆದಿದೆ. ಆದರೆ ಈಗ ರಾಜ್ಯಾದ್ಯಂತ ಕೋವಿಡ್-19 ವೈರಸ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ನರೇಗಾ ಯೋಜನೆ ಅಡಿಯಲ್ಲಿ ಸಾರ್ವಜನಿಕ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ಹಳೆಯ ಕೂಲಿಯ ಹಣವೂ ಬಾರದೆ ಈಗಲೂ ಕೂಲಿ ಸಿಗದೆ ನರೇಗಾ ಕಾರ್ಮಿಕರು ಕಂಗಾಲಾಗಿದ್ದಾರೆ. ಅಲ್ಲದೆ ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಿದ್ದ ಕಾರ್ಮಿಕರೂ ಈಗ ಕೋವಿಡ್-19 ಭೀತಿಯಿಂದ ಹಳ್ಳಿಗಳಿಗೆ ತೆರಳಿದ್ದು, ಅವರಿಗೂ ಉದ್ಯೋಗ ಒದಗಿಸುವ ಸವಾಲು ರಾಜ್ಯ ಸರಕಾರದ ಮುಂದಿದೆ.

-ಶಂಕರ ಪಾಗೋಜಿ

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.