ತಲಪಾಡಿ ಗಡಿ ಬಂದ್; ವಾರ್ ರೂಂ ಮೂಲಕ ಸ್ಪಂದನೆ: ನಳಿನ್
Team Udayavani, Mar 30, 2020, 11:46 AM IST
ಮಂಗಳೂರು: ತಲಪಾಡಿಯಿಂದ ಕಾಸರಗೋಡಿನ ಯಾವುದೇ ಅಂತಾರಾಜ್ಯ ವಾಹನವು ದ.ಕ. ಜಿಲ್ಲೆಯನ್ನು ಪ್ರವೇಶಿಸದಂತೆ ಬಂದ್ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಯ ಜತೆ ಮಾತುಕತೆ ನಡೆಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಆ್ಯಂಬುಲೆನ್ಸ್ ಸಹಿತ ಯಾವುದೇ ವಾಹನವನ್ನೂ ಜಿಲ್ಲೆಗೆ ಬಿಡದಂತೆ ಸೂಚನೆ ನೀಡಲಾಗಿದೆ. ಕೇಂದ್ರ ಸರಕಾರ ಅಥವಾ ಕೇಂದ್ರ ಸಚಿವರು ಕೂಡ ವಾಹನ ಬಿಡುವಂತೆ ಸೂಚನೆ ನೀಡಿಲ್ಲ. ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಂಸದರ ಕಚೇರಿಯಲ್ಲಿ ತೆರೆದಿರುವ “ವಾರ್ ರೂಂ’ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದೆ. ಬೆಳಗ್ಗೆ 7ರಿಂದ ರಾತ್ರಿ 10 ಗಂಟೆಯ ತನಕ ದೂರು ಸ್ವೀಕರಿಸಿ, ಪರಿಹರಿಸುತ್ತಿದ್ದೇವೆ. ಕರೆ ಮಾಡಿದವರಿಗೆ ಊಟದ ವ್ಯವಸ್ಥೆ, ಆರ್ಥಿಕವಾಗಿ ಹಿಂದುಳಿದವರಿಗೆ 1ತಿಂಗಳ ಆಹಾರ ಸಾಮಗ್ರಿ ವಿತರಣೆ, ಅನಾರೋಗ್ಯ ಇದ್ದವರಿಗೆ ಔಷಧ ಮತ್ತು ಆ್ಯಂಬುಲೆನ್ಸ್, ಮೃತರ ಶವ ಸಂಸ್ಕಾರಕ್ಕೆ ನೆರವು ನೀಡಲು ಈ ವಾರ್ ರೂಂ ತೆರೆಯಲಾಗಿದೆ. ಇದು ಮಾಹಿತಿ ಕೇಂದ್ರವಾಗಿಯೂ ಕಾರ್ಯಾಚರಿಸುತ್ತಿದೆ. ಈವರೆಗೆ 3,200 ಮಂದಿಗೆ ಊಟ, 1,120 ಮಂದಿಗೆ ಆಹಾರ ವಸ್ತುಗಳ ಕಿಟ್, 110 ಮಂದಿಗೆ ಆ್ಯಂಬುಲೆನ್ಸ್, 28 ಮಂದಿಗೆ ಔಷಧ ಮತ್ತು 44 ಮಂದಿಗೆ ಇತರ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ