ಮತ್ತೆ ನಾಲ್ವರು ಶಂಕಿತರು ಆಸ್ಪತ್ರೆಗೆ ದಾಖಲು


Team Udayavani, Mar 30, 2020, 1:01 PM IST

ಮತ್ತೆ ನಾಲ್ವರು ಶಂಕಿತರು ಆಸ್ಪತ್ರೆಗೆ ದಾಖಲು

ರಾಯಚೂರು: ಜಿಲ್ಲೆಯಲ್ಲಿ ಈವರೆಗೆ ಯಾವುದೇ ಪಾಸಿಟಿವ್‌ ಪ್ರಕರಣ ದಾಖಲಾಗದಿದ್ದರೂ, ರವಿವಾರ ನಾಲ್ವರು ಶಂಕಿತರು ಆಸ್ಪತ್ರೆಗೆ ದಾಖಲಾಗಿರುವುದು ಜನರಲ್ಲಿ ಮತ್ತೆ ಆತಂಕ ಮೂಡಿಸಿದೆ.

ಈವರೆಗೂ ವಿದೇಶಗಳಿಂದ ಒಟ್ಟು 171 ಮಂದಿ ಹಿಂತಿರುಗಿದ್ದಾರೆ. ಅದರಲ್ಲಿ ಏಳು ಜನರ ಗಂಟಲಿನ ದ್ರವ್ಯ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಲ್ಯಾಬ್‌ಗ ಕಳುಹಿಸಲಾಗಿತ್ತು. ಐದು ವರದಿಗಳು ನೆಗೆಟಿವ್‌ ಆಗಿದ್ದು, ರೋಗ ಲಕ್ಷಣಗಳು ಇಲ್ಲದ ಕಾರಣ ಎರಡು ತಿರಸ್ಕೃತಗೊಂಡಿದೆ. ಆದರೆ, ರವಿವಾರ ನಾಲ್ವರು ಶಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದೇಶದಿಂದ ಬಂದವರು, ಶಂಕಿತರು ಸೇರಿ ಅವರ ಕುಟುಂಬದ 715 ಜನರು ಹೋಮ್‌ ಕ್ವಾರಂಟೈನ್‌ನಲ್ಲಿಟ್ಟಿದ್ದು, ಜಿಲ್ಲೆಯಿಂದ ಇದೂವರೆಗೆ ಕಳುಹಿಸಲಾದ ವರದಿಗಳಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ ತಿಳಿಸಿದ್ದಾರೆ.

ಎರಡು ದಿನಗಳಿಂದ ಪೊಲೀಸರು ಲಾಠಿ ಪ್ರಹಾರ ನಡೆಸದ ಕಾರಣ ಜನ ಸಂಚಾರ ಹೆಚ್ಚಾಗಿತ್ತು. ಆದರೆ, ಪರಿಸ್ಥಿತಿ ಹೀಗೆ ಮುಂದುವರಿದರೆ ಸಮಸ್ಯೆಯಾಗಲಿದೆ ಎಂದರಿತ ಪೊಲೀಸರು ರವಿವಾರ ಪುನಃ ಲಾಠಿ ಕೈಗೆತ್ತಿಕೊಂಡಿದ್ದು, ಸವಾರರ ಮೇಲೆ ಪ್ರಹಾರ ನಡೆಸಿದ್ದು, ಕಂಡು ಬಂತು. ಅದರ ಜತೆಗೆ ರವಿವಾರವಾಗಿದ್ದ ಕಾರಣ ನಗರ ಸಂಪೂರ್ಣ ಸ್ತಬ್ಧವಾಗಿತ್ತು.

ಇನ್ನೂ ಬೆಂಗಳೂರು ಸೇರಿದಂತೆ ವಿವಿಧೆಡೆ ಗುಳೆ ಹೋಗಿದ್ದ ಜನರ ನೆರವಿಗೆ ಧಾವಿಸುವಂತೆ ಡಿಸಿ ಮನವಿ ಮಾಡಿದ್ದು, ಈಗಾಗಲೇ ಸಾಕಷ್ಟು ಊಟೋಪಹಾರ, ದವಸ ಧಾನ್ಯಗಳನ್ನು ನೀಡುತ್ತಿದ್ದಾರೆ. ರವಿವಾರ ಕೂಡ ಉದ್ಯಮಿ ಕೇಶವರೆಡ್ಡಿ, ನೀಲೊಗಲ್‌ ಮಠದ ಬಾಲಯೋಗಿ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಅವರಿಂದ ಕರ್ತವ್ಯ ನಿರತ ಪೊಲೀಸರು, ವೈದ್ಯರು, ನಿರ್ಗತಿಕರಿಗೆ ಊಟ, ನೀರಿನ ಬಾಟಲಿಗಳನ್ನು ವಿತರಿಸಿದರು.

ನಗರ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲ ಮಸೀದಿಗಳಲ್ಲಿ ಧ್ವನಿವರ್ಧಕ ಮೂಲಕ ತ್ರಿಭಾಷೆಯಲ್ಲಿ ನಿತ್ಯ ನಾಲ್ಕು ಬಾರಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ರಾಜ್ಯ ವಕ್ಫ್  ಮಂಡಳಿಯು ಆದೇಶ ಹೊರಡಿಸಿದೆ.

ಸಾಮಾಜಿಕ ಅಂತರ ಮರೆ: ಅಗತ್ಯ ವಸ್ತುಗಳ ಖರೀದಿಗೆ ಅನುವು ಮಾಡಿಕೊಟ್ಟಿರುವ ಜಿಲ್ಲಾಡಳಿತ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದೆ. ಆದರೆ, ಅದು ಎಲ್ಲಿಯೂ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಜನ ಗುಂಪು ಗುಂಪಾಗಿ ಓಡಾಡುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ಗುರುತುಗಳನ್ನು ಮಾಡಿದರೂ ಪರಿಣಾಮಕಾರಿಯಾಗಿ ಜಾರಿಯಾಗುತ್ತಿಲ್ಲ.

ವಾಹನಗಳಿಗೆ ಇಂಧನದ ಮಿತಿ: ಕೋವಿಡ್ 19 ಹರಡದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಪೆಟ್ರೋಲ್‌ ಪಂಪ್‌ಗ್ಳಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಪೆಟ್ರೋಲ್‌ ಹಾಕಲು ನಿರ್ಧರಿಸಲಾಗಿದೆ. ಒಂದು ಪೆಟ್ರೋಲ್‌ ವಾಹನಕ್ಕೆ 200 ರೂ. ವರೆಗೆ ಪೆಟ್ರೋಲ್‌ ಮತ್ತು 500 ರೂ. ಡೀಸೆಲ್‌ ಮಾತ್ರ ವಿತರಿಸಲಾಗುವುದು. ಯಾವುದೇ ಕಾರಣಕ್ಕೂ ಬಾಟಲ್‌ ಗಳ ಮೂಲಕ ಇಂಧನ ತುಂಬಿಸಿ ಕೊಡುವುದಿಲ್ಲ. ಡಿಜಿಟಲ್‌, ಆನ್‌ಲೈನ್‌ ಮೂಲಕವೇ ವ್ಯವಹಾರ ಮಾಡುವಂತೆ ಡಿಸಿ ಆದೇಶಿಸಿದ್ದಾರೆ.

ಟಾಪ್ ನ್ಯೂಸ್

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.