ತನ್ನ ಗ್ರಾಹಕರಿಗಾಗಿ ವಾಟ್ಸ್ಯಾಪ್ ಸೇವೆ ಪರಿಚಯಿಸಿದ ICICI ಬ್ಯಾಂಕ್; ಈ ಎಲ್ಲಾ ಸೇವೆಗಳು ಲಭ್ಯ


Team Udayavani, Mar 30, 2020, 4:02 PM IST

ತನ್ನ ಗ್ರಾಹಕರಿಗಾಗಿ ವಾಟ್ಸ್ಯಾಪ್ ಸೇವೆ ಪರಿಚಯಿಸಿದ ICICI ಬ್ಯಾಂಕ್; ಈ ಎಲ್ಲಾ ಸೇವೆಗಳು ಲಭ್ಯ

ಮುಂಬಯಿ: ಕೋವಿಡ್ 19 ವೈರಸ್ ಭೀತಿಯಿಂದಾಗಿ ದೇಶಕ್ಕೆ ದೇಶವೇ 21 ದಿನಗಳ ಲಾಕ್ ಡೌನ್ ಸ್ಥಿತಿಗೆ ಒಳಗಾಗಿರುವ ಈ ಸಂದರ್ಭದಲ್ಲಿ ಅವಶ್ಯಕ ಸೇವೆಗಳನ್ನು ಮಾತ್ರವೇ ಮುಂದುವರೆಸಲು ಸರಕಾರ ಅನುಮತಿ ನೀಡಿದೆ. ಅವಶ್ಯಕ ಸೇವೆಗಳಲ್ಲಿ ಬ್ಯಾಂಕಿಂಗ್ ಸೇವೆಗಳೂ ಒಳಗೊಳ್ಳುತ್ತವೆ.

ಆದರೆ ಬ್ಯಾಂಕಿಗೆ ಗ್ರಾಹಕರು ಬಂದಲ್ಲಿ ಆ ಮೂಲಕ ಈ ವೈರಸ್ ಹಬ್ಬುವ ಭೀತಿ ಇಲ್ಲದಿಲ್ಲ. ಹಾಗಾಗಿಯೇ ಹೆಚ್ಚಿನ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಆನ್ ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಹೆಚ್ಚು ಬಳಸುವಂತೆ ವಿನಂತಿ ಮಾಡಿಕೊಂಡಿವೆ. ಈ ನಿಟ್ಟಿನಲ್ಲಿ ಇನ್ನೂ ಒಂದು ಹೆಜ್ಜೆ ಮುಂದಿರಿಸಿರುವ ಐಸಿಐಸಿಐ ಬ್ಯಾಂಕ್ ವಾಟ್ಸ್ಯಾಪ್ ಮೂಲಕ ತನ್ನ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಪ್ರಾರಂಭಿಸಿದೆ.

ಈ ನೂತನ ವಾಟ್ಸ್ಯಾಪ್ ಸೇವೆಗಳ ಮೂಲಕ ಪ್ರತೀನಿತ್ಯ ಬ್ಯಾಂಕಿಂಗ್ ವ್ಯವಹಾರವನ್ನು ನಡೆಸುವ ತನ್ನ ಗ್ರಾಹಕರು ಈ ಲಾಕ್ ಡೌನ್ ಅವಧಿಯಲ್ಲಿ ತಾವಿರುವ ಸ್ಥಳದಿಂದಲೇ ಸುಲಭವಾಗಿ ಬ್ಯಾಂಕ್ ವ್ಯವಹಾರಗಳನ್ನು ನಡೆಸಲು ಅನುಕೂಲವಾಗಲಿದೆ. ಇದರಲ್ಲಿ ಬ್ಯಾಂಕ್ ಬ್ಯಾಲೆನ್ಸ್ ನೋಡುವುದು, ಕೊನೆಯ ಮೂರು ವ್ಯವಹಾರಗಳ ವಿವರಗಳನ್ನು ಪಡೆದುಕೊಳ್ಳುವುದು, ಕ್ರೆಡಿಟ್ ಕಾರ್ಡ್ ಮಿತಿಯ ವಿವರಗಳನ್ನು ಪಡೆದುಕೊಳ್ಳುವುದು, ಈ ಮೊದಲೇ ಜಾರಿಯಾಗಿರುವ ಸಾಲದ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದು ಮತ್ತು ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡ್ ಗಳನ್ನು ಬ್ಲಾಕ್ ಆಥವಾ ಅನ್ ಬ್ಲಾಕ್ ಮಾಡಿಕೊಳ್ಳುವ ಸೇವೆಗಳನ್ನು ಪಡೆದುಕೊಳ್ಳಲು ಅವಕಾಶವಿದೆ.

ಗ್ರಾಹಕರು ಈ ಸೇವೆಗಳನ್ನು ಪಡೆದುಕೊಳ್ಳುವುದು ಹೇಗೆ?
1. ಐಸಿಐಸಿಐ ಬ್ಯಾಂಕಿನ ಅ‍ಧಿಕೃತ ವಾಟ್ಸ್ಯಾಪ್ ನಂಬರನ್ನು (9324953001) ಗ್ರಾಹಕರು ಸೇವ್ ಮಾಡಿಕೊಳ್ಳಬೇಕು. ಬಳಿಕ <Hi> ಎಂಬ ಸಂದೇಶವನ್ನು ಗ್ರಾಹಕರು ತಾವು ಬ್ಯಾಂಕಿಗೆ ನೀಡಿರುವ ಮೊಬೈಲ್ ನಂಬರಿನಿಂದಲೇ ಈ ನಂಬರಿಗೆ ಕಳುಹಿಸಬೇಕು. ಬಳಿಕ ಲಭ್ಯವಿರುವ ಸೇವಾ ವಿವರಗಳೊಂದಿಗೆ ನಿಮ್ಮ ಮೊಬೈಲ್ ಗೆ ಬ್ಯಾಂಕಿನಿಂದ ಪ್ರತಿಕ್ರಿಯೆ ಸಂದೇಶ ಬರುತ್ತದೆ.

2. ಬಳಿಕ ಸೇವಾ ಪಟ್ಟಿಗಳನ್ನು ನೋಡಿಕೊಂಡು ನಿಮಗೆ ಅಗತ್ಯವಿರುವ ಸೇವೆಯನ್ನು ಆರಿಸಿಕೊಳ್ಳಬೇಕು. ಉದಾಹರಣೆಗೆ:, <Balance>, <Block> ಇತ್ಯಾದಿ.

ವಾಟ್ಸ್ಯಾಪ್ ಮೂಲಕ ಲಭ್ಯವಿರುವ ಸೇವೆಗಳು ಮತ್ತು ಅದನ್ನು ಬಳಸಿಕೊಳ್ಳಬಹುದಾದ ವಿಧಾನ ಇಲ್ಲಿದೆ:

ಅಕೌಂಟ್ ಬ್ಯಾಲೆನ್ಸ್ ನೋಡಲು: <transaction>, <bal>, <ac bal> ಗಳಲ್ಲಿ ನಿಮಗೆ ಅಗತ್ಯವಿರುವುದನ್ನು ಆರಿಸಿಕೊಂಡು ಈ ಕೀ ವರ್ಡ್ ಗಳನ್ನು ಟೈಪ್ ಮಾಡಿ ಬ್ಯಾಂಕಿನ ಅಧಿಕೃತ ಮೊಬೈಲ್ ಸಂಖ್ಯೆಗೆ ಕಳುಹಿಸಬೇಕು.

ಕೊನೆಯ ಮೂರು ಟ್ರಾನ್ಸಾಕ್ಷನ್ ಗಳ ವಿವರ ಪಡೆದುಕೊಳ್ಳಲು: <transaction>, <stmt>, <history> ಗಳಲ್ಲಿ ನಿಮಗೆ ಅಗತ್ಯವಿರುವುದನ್ನು ಟೈಪ್ ಮಾಡಿ ಕಳುಹಿಸಿ.

ನಿಮ್ಮ ಕ್ರೆಡಿಟ್ ಕಾರ್ಡ್ ನಲ್ಲಿರುವ ಬ್ಯಾಲೆನ್ಸ್ ಮೊತ್ತ ಹಾಗೂ ಕ್ರೆಡಿಟ್ ಮಿತಿ ತಿಳಿದುಕೊಳ್ಳಲು: <limit>, <cclimit>, <ccbalance> ಗಳಲ್ಲಿ ನಿಮಗೆ ಬೇಕಾಗಿರುವುದನ್ನು ಆಯ್ಕೆ ಮಾಡಿ ಟೈಪ್ ಮಾಡಿ ಮೆಸೇಜ್ ಮಾಡಿ.

ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಗಳನ್ನು ತಕ್ಷಣವೇ ಬ್ಲಾಕ್ ಮಾಡಿಸಿಕೊಳ್ಳಲು: <block>, <Lost my card>, <Unblock> ಕೀ ವರ್ಡ್ ಗಳಲ್ಲಿ ನಿಮಗೆ ಸಂಬಂಧಿಸಿರುವುದನ್ನು ಟೈಪ್ ಮಾಡಿ ಮೆಸೇಜ್ ಮಾಡಿ.

ಇನ್ನು ಈ ಮೊದಲೇ ಮಂಜೂರಾಗಿರುವ ಸಾಲಗಳ ಸ್ಥಿತಿಗತಿಗಳನ್ನು ತಿಳಿದುಕೊಳ್ಳಲು: <Loan>, <home loan>, <personal loan>, <instant loans> ಗಳಲ್ಲಿ ನಿಮ್ಮ ಆಯ್ಕೆಯನ್ನು ಟೈಪ್ ಮಾಡಿ ಮೆಸೇಜ್ ಮಾಡಬೇಕು.

ನಿಮಗೆ ಸಮೀಪದಲ್ಲಿರುವ ಐಸಿಐಸಿಐ ಬ್ಯಾಂಕಿನ ಎಟಿಎಂ ಮಾಹಿತಿಯನ್ನು ಪಡೆದುಕೊಳ್ಳಲು: ಟೈಪ್ <ATM>, <Branch>

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.