11 ಜನರಿಗೆ Covid 19 ವೈರಸ್ ಹಬ್ಬಿಸಿದ ಯುವಕನಿಗೆ 15 ವರ್ಷ ಜೈಲು- ಈ ಕಠಿಣ ಶಿಕ್ಷೆ ಎಲ್ಲಿ?

ಈತ ಕುಟುಂಬದ ಆಪ್ತರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಎಂದು ವರದಿ ವಿವರಿಸಿದೆ.

Team Udayavani, Mar 30, 2020, 8:06 PM IST

11 ಜನರಿಗೆ Covid 19 ವೈರಸ್ ಹಬ್ಬಿಸಿದ ಯುವಕನಿಗೆ 15 ವರ್ಷ ಜೈಲು- ಈ ಕಠಿಣ ಶಿಕ್ಷೆ ಎಲ್ಲಿ

ಬ್ಯೂನಸ್ ಐರೀಸ್: ಅಮೆರಿಕದಿಂದ ವಾಪಸ್ ಆಗಿದ್ದ ಯುವಕ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಹನ್ನೊಂದು ಜನರಿಗೆ ಮಾರಣಾಂತಿಕ ಕೋವಿಡ್ 19 ವೈರಸ್ ಹಬ್ಬಿಸಿದ್ದ…ಇದರ ಪರಿಣಾಮ ಈತ 15 ವರ್ಷ ಜೈಲು ಶಿಕ್ಷೆ ಎದುರಿಸಬೇಕಾದ ಘಟನೆ ಅರ್ಜೈಂಟೀನಾದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

ಅಮೆರಿಕದಿಂದ ಅರ್ಜೈಂಟೀನಾಕ್ಕೆ ಬಂದಿದ್ದ ಎರಿಕ್ ಟೋರಾಲ್ಸ್ ಸ್ವಯಂ ಐಸೋಲೇಶನ್ ನಲ್ಲಿರುವ ಕಾನೂನು ಪಾಲಿಸಬೇಕಾಗಿತ್ತು. ಆದರೆ ಈತ ಕುಟುಂಬದ ಆಪ್ತರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಎಂದು ವರದಿ ವಿವರಿಸಿದೆ. ಸ್ವಯಂ ಐಸೋಲೇಶನ್
ಉಲ್ಲಂಘಿಸಿದ್ದರಿಂದ 15 ವರ್ಷಗಳ ಜೈಲುಶಿಕ್ಷೆ ಎದುರಿಸಬೇಕಾಗಲಿದೆ ಎಂದು ವರದಿ ಹೇಳಿದೆ.

ಅರ್ಜೈಂಟೀನಾದ ಪ್ರಜೆಗಳು ಬೇರೆ ಯಾವುದೇ ದೇಶದಿಂದ ವಾಪಸ್ ಆಗಿದ್ದರೆ ಅವರು ಸ್ವಯಂ ಐಸೋಲೇಶನ್ ನಲ್ಲಿ ಇರುವುದು ಕಡ್ಡಾಯ ಎಂದು ಹೊಸ ಕಾಯ್ದೆಯನ್ನು ಜಾರಿಗೊಳಿಸಿತ್ತು. ಈ ಯುವಕ ಐಸೋಲೇಶನ್ ಬಿಟ್ಟು ಬ್ಯೂನಸ್ ಐರೀಸ್ ನಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಎಂದು ವರದಿ ತಿಳಿಸಿದೆ.

15 ವರ್ಷದ ಬಾಲಕಿಯ ಬರ್ತ್ ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಈತನಿಂದ ಈಗ ಆ ಹುಡುಗಿ ಸೇರಿದಂತೆ ಹನ್ನೊಂದು ಮಂದಿ ಕೋವಿಡ್ 19 ವೈರಸ್ ಹಬ್ಬಿಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಇವರಲ್ಲಿ 76 ಹಾಗೂ 79ವರ್ಷದ ಇಬ್ಬರು ಹಿರಿಯ ವ್ಯಕ್ತಿಗಳು ಸೇರಿದ್ದಾರೆ. ಅಂದಾಜು 20 ಮಂದಿಯನ್ನು ಐಸೋಲೇಶನ್ ನಲ್ಲಿ ಇರಿಸಲಾಗಿದೆ ಎಂದು ವರದಿ ಹೇಳಿದೆ.

ಮಾರ್ಚ್ 13ರಂದು ಅಮೆರಿಕದಿಂದ ಅರ್ಜೈಂಟೀನಾಕ್ಕೆ ಟೋರಾಲ್ಸ್ ಸಂಪರ್ಕಕ್ಕೆ ಎಷ್ಟು ಮಂದಿ ಬಂದಿದ್ದಾರೆ ಎಂದು ಅಧಿಕಾರಿಗಳು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬರ್ತ್ ಡೇ ಸಮಾರಂಭ ಆದ ಐದು ದಿನಗಳ ನಂತರ ಅನಾರೋಗ್ಯಕ್ಕೆ ಒಳಗಾಗಿದ್ದ. ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆದ ನಂತರ ಯುವಕನನ್ನು ಗೃಹಬಂಧನದಲ್ಲಿ ಇರಿಸಿದ್ದು, ಪಾಸ್ ಪೋರ್ಟ್ ಅನ್ನು ವಶಕ್ಕೆ
ಪಡೆದಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ.

ವೈದ್ಯಕೀಯ ತಪಾಸಣೆ ಹೊರತುಪಡಿಸಿ ಅನಗತ್ಯವಾಗಿ ಈ ಯುವಕನಿಗೆ ಮನೆಯಿಂದ ಹೊರಹೋಗಲು ಅನುಮತಿ ಇಲ್ಲ. ಮಾರಣಾಂತಿಕ ಕೋವಿಡ್ 19 ವೈರಸ್ ಹರಡುವುದನ್ನು ತಡೆಯಲು ಹಲವು ದೇಶಗಳು ಲಾಕ್ ಡೌನ್ ಸೇರಿದಂತೆ ವಿವಿಧ ತುರ್ತು ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.

ಟಾಪ್ ನ್ಯೂಸ್

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

ಚೀನಾ ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

China ಯಂತ್ರಗಳ ಮೂಲಕ ಟ್ಯಾಪಿಂಗ್‌: ಅಶೋಕ್‌

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Congress ಸರಕಾರದಿಂದ ಪಾಳೇಗಾರಿಕೆ ರಾಜಕಾರಣ: ವಿಜಯೇಂದ್ರ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.