12 ತಾಸಿನಲ್ಲಿ ಕೋವಿಡ್‌ 19 ನಿಗಾ ಆಸ್ಪತ್ರೆ ಸಿದ್ಧ


Team Udayavani, Mar 31, 2020, 5:23 AM IST

12 ತಾಸಿನಲ್ಲಿ ಕೋವಿಡ್‌ 19 ನಿಗಾ ಆಸ್ಪತ್ರೆ ಸಿದ್ಧ

ಕುಂದಾಪುರ: ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್‌ 19 ಶಂಕಿತರ ನಿಗಾ ವಾರ್ಡ್‌ಗಳನ್ನು ಸಿದ್ಧಪಡಿಸಿದ್ದರೂ ಅಗತ್ಯವಾದ ಕ್ರಮಗಳನ್ನು ಸ್ಥಳಾಭಾವ ಇದ್ದ ಕಾರಣ ಹಳೆ ಆದರ್ಶ ಆಸ್ಪತ್ರೆಯನ್ನು ಕೋವಿಡ್‌ 19 ಶಂಕಿತರ ನಿಗಾ ಆಸ್ಪತ್ರೆಯಾಗಿ ಪರಿವರ್ತಿಸಲಾಗಿದೆ. ಡಾ| ಆದರ್ಶ ಹೆಬ್ಟಾರರ ಆದರ್ಶ ಆಸ್ಪತ್ರೆ ಈಗ ಹೊಸ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಉಪ ಯೋಗವಿಲ್ಲದ ಹಳೆ ಆಸ್ಪತ್ರೆಯನ್ನು ಪುರಸಭೆ ಕೇವಲ 12 ತಾಸಿನಲ್ಲಿ ಶುಚಿಗೊಳಿಸಿ ಸಿದ್ಧಪಡಿಸಲಾಗಿದೆ.

ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್‌, ಸಹಾಯಕ ಕಮಿಷನರ್‌ ಕೆ. ರಾಜು ಅವರ ಆದೇಶದ ಮೇರೆಗೆ ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಕೋವಿಡ್‌ 19 ಕ್ವಾರಂಟೈನ್‌ನ್ನು ಮಾಡುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಈ ಹಿಂದಿನ ಆದರ್ಶ ಆಸ್ಪತ್ರೆಯನ್ನು ಗುರುತಿಸಿತ್ತು. ಈ ಆಸ್ಪತ್ರೆ 3 ವರ್ಷದಿಂದ ನಿರುಪಯುಕ್ತ ಗೊಂಡಿತ್ತು. ಇದನ್ನು ಕೇವಲ 12 ಗಂಟೆಗಳಲ್ಲಿ ಪುರಸಭೆಯ ಆರೋಗ್ಯ ವಿಭಾಗದ ಪೌರಕಾರ್ಮಿಕರು ಹಾಗೂ ಗುತ್ತಿಗೆದಾರರ ಸಹಾಯದಿಂದ ಪುನರ್‌ ಕಾರ್ಯಗತಗೊಳಿಸಿದ್ದು, ಈ ಕಾರ್ಯದಲ್ಲಿ ಹಗಲು ರಾತ್ರಿ ಕೆಲಸ ನಿರ್ವಹಿಸಿದ ಪುರಸಭೆಯ ಅಧಿಕಾರಿಗಳು, ಪೌರಕಾರ್ಮಿಕರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸರಕಾರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಆಸ್ಪತ್ರೆಯನ್ನಾಗಿ ವಾರ್ಡ್‌ ಮೀಸಲಿಟ್ಟಿದ್ದರೂ ಅಲ್ಲಿ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಇರಲಿಲ್ಲ. ಇದರಿಂದಾಗಿ ಒಂದೇ ವಾರ್ಡ್‌ನಲ್ಲಿ ಒಂದಷ್ಟು ಜನರನ್ನು ನಿಗಾಕ್ಕಾಗಿ ಇಡಬೇಕಿತ್ತು. ಆದರೆ ಅಲ್ಲಿ ಪ್ರತಿ ರೋಗಿಗೂ ಪ್ರತ್ಯೇಕ ನಿಗಾ ಇಡಲು ವ್ಯವಸ್ಥೆಯ ಕೊರತೆ ಇತ್ತು. ಇದರಿಂದಾಗಿ ಪಾಸಿಟಿವ್‌ ಅಲ್ಲದವರೂ ಆದವರೂ ವೈದ್ಯಕೀಯ ವರದಿ ಬರುವ ತನಕ ಜತೆಗೇ ಇರಬೇಕಿತ್ತು. ಇದೀಗ ಪ್ರತ್ಯೇಕ ಆಸ್ಪತ್ರೆ ಮಾಡಿದ ಕಾರಣ ಈ ಗೊಂದಲ ನಿವಾರಣೆಯಾಗಿದೆ. ಇಲ್ಲಿ ಪ್ರತಿ ಕೊಠಡಿಗೂ ಪ್ರತ್ಯೇಕ ಸ್ನಾನಗೃಹ ಇತ್ಯಾದಿಗಳಿವೆ. ಇಲ್ಲಿ 20 ಜನರನ್ನು ನಿಗಾದಲ್ಲಿ ಇಡಲು ಅವಕಾಶ ಇದೆ. 30ಕ್ಕೆ ಏರಿಸಲು ಅವಕಾಶ ಇದೆ.

ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಮಾರ್ಗದರ್ಶನದಲ್ಲಿ, ಕಿರಿಯ ಅಭಿಯಂತರ ಸತ್ಯಂ, ಪರಿಸರ ಅಭಿಯಂತರ ರಾಘವೇಂದ್ರ ಅವರ ಮೇಲುಸ್ತುವಾರಿಯಲ್ಲಿ ಆಸ್ಪತ್ರೆ ನವೀಕರಣ ಕೆಲಸ ನಿರ್ವಹಿಸಲಾಗಿದ್ದು, ಪುರಸಭೆ ಅಧಿಕಾರಿ ಗಣೇಶ್‌ ಕುಮಾರ್‌ ಜನ್ನಾಡಿ, ಹಿರಿಯ ಆರೋಗ್ಯ ನಿರೀಕ್ಷಕ ಶರತ್‌ ಖಾರ್ವಿ ಕೆಲಸ ನಿರ್ವಹಿಸಿದ್ದರು.

ಪರಿಸರದಲ್ಲಿ ಸ್ವತ್ಛತೆಗೆ ಆದ್ಯತೆ ನೀಡಿಲ್ಲ, ಚರಂಡಿ ನೀರು ಹರಿಯುವುದಿಲ್ಲ ಇತ್ಯಾದಿ ಸ್ಥಳೀಯರ ಆಕ್ಷೇಪಗಳಿದ್ದವು. ಶಂಕಿತರನ್ನು ಇಲ್ಲಿ ಇಡುವುದರಿಂದ ಯಾವುದೇ ರೀತಿಯ ತೊಂದರೆ ಆಗು ವುದಿಲ್ಲ ಎಂದು ಡಾ| ಆದರ್ಶ ಹೆಬ್ಟಾರ್‌ ಅವರೇ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ನೀಡಿದ ಮೇಲೆ ಸ್ಥಳೀಯರು ಒಪ್ಪಿಗೆ ಸೂಚಿಸಿದರು.

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.