ಐಪಿಎಲ್‌ 2021ಕ್ಕೆ ಆಯೋಜನೆ ?


Team Udayavani, Mar 31, 2020, 5:45 AM IST

ಐಪಿಎಲ್‌ 2021ಕ್ಕೆ ಆಯೋಜನೆ ?

ಹೊಸದಿಲ್ಲಿ: ಕೋವಿಡ್‌ 19 ವೈರಸ್‌ನಿಂದ ಮುಂದೂಡಲ್ಪಟ್ಟಿರುವ ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) 13ನೇ ಆವೃತ್ತಿ ಟಿ20 ಕೂಟ 2021ಕ್ಕೆ ನಡೆಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಟೋಕಿಯೊ ಒಲಿಂಪಿಕ್‌ ಕೂಟವನ್ನು ಸಂಘಟಕರು ರದ್ದು ಮಾಡಿಲ್ಲ, ಬದಲಾಗಿ ಅದೇ ಕೂಟವನ್ನು 2021ಕ್ಕೆ ನಡೆಸಲು ತೀರ್ಮಾನ ತೆಗೆದುಕೊಂಡಿದ್ದಾರೆ. ಹಾಗೆಯೇ ಐಪಿಎಲ್‌
13ನೇ ಆವೃತ್ತಿ ಕೂಡ 2021ಕ್ಕೆ ಮುಂದೂಡಲ್ಪಡಲಿದೆ, ರದ್ದುಗೊಳ್ಳುವುದಿಲ್ಲ ಎಂದು ಆಂಗ್ಲ ಮಾಧ್ಯಮ ವರದಿಯಲ್ಲಿ ಹೇಳಲಾಗಿದೆ.

ವೇಳಾಪಟ್ಟಿ ಪ್ರಕಾರ ಐಪಿಎಲ್‌ ಮಾ. 29ಕ್ಕೆ ಆರಂಭವಾಗಬೇಕಿತ್ತು. ಆದರೆ ಕೋವಿಡ್‌ 19 ವೈರಸ್‌ನಿಂದಾಗಿ ಕೂಟವನ್ನು ಆಯೋಜಿಸುವ ಬಗ್ಗೆ ಎ.15ರ ಅನಂತರ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಗಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಕೂಟವನ್ನು ಆಯೋಜಿಸುವುದು ಅಸಾಧ್ಯ ಹೀಗಿದ್ದರೂ ಮೇ ಮೊದಲ ವಾರದಲ್ಲಿ ವಾತಾವರಣ ತಿಳಿಗೊಂಡರೆ ದಿನಕ್ಕೆರಡು ಪಂದ್ಯದಂತೆ ಆಡಿಸಿ ಐಪಿಎಲ್‌ ನಡೆಸಬಹುದು ಎಂಬುದು ಸಂಘಟಕರ ಲೆಕ್ಕಾಚಾರವಾಗಿತ್ತು. ಆದರೆ ಇದಕ್ಕೆ ಅವಕಾಶ ಸಿಗುವುದೇ ಎನ್ನುವ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.

ಕೋವಿಡ್‌ 19 ಕಾರಣ ಲಾಕ್‌ಡೌನ್‌ ಇರುವುದ ರಿಂದ ವಿದೇಶಿ ಆಟಗಾರರಿಗೆ ಕೂಟದಲ್ಲಿ ಭಾಗ ವಹಿಸಲು ಭಾರತದ ವೀಸಾ ಸಿಗುವ ಸಾಧ್ಯತೆ ಇಲ್ಲ. ಆನಂತರವೂ ಎಲ್ಲವು ಸರಿಯಾಗಲಿದೆ ಎಂದು ಈಗಲೇ ಹೇಳುವುದು ಕಷ್ಟವಾಗುತ್ತದೆ, ಹೀಗಾಗಿ ಈ ಎಲ್ಲ ಕಾರಣಗಳಿಂದಾಗಿ ಐಪಿಎಲ್‌ ಮುಂದೂಡುವುದು ಅನಿವಾರ್ಯ ಎನ್ನಲಾಗಿದೆ.

ಬೃಹತ್‌ ಹರಾಜು ಇಲ್ಲ?
ಐಪಿಎಲ್‌ ಮುಂದೂಡಿಕೆ ಆದರೆ ಮುಂದಿನ ವರ್ಷ ನಡೆಯಲಿರುವ ಐಪಿಎಲ್‌ ಬೃಹತ್‌ ಆಟಗಾರರ ಹರಾಜು ಕೂಡ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಏಷ್ಯಾ ಕಪ್‌ ಟಿ20 ಕೂಡ ನಡೆಯಲ್ಲ !
ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ಎಸಿಸಿ) ಆಯೋಜಿಸುವ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಕೂಟ ಕೋವಿಡ್‌ 19 ವೈರಸ್‌ನಿಂದಾಗಿ ಮುಂದಿನ ವರ್ಷಕ್ಕೆ ಮುಂದೂಡುವ ಸಾಧ್ಯತೆ ಹೆಚ್ಚಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಮುಂದಿನ 6 ತಿಂಗಳು ವಿಶ್ವದಲ್ಲಿ ಕ್ರೀಡಾ ಚಟುವಟಿಕೆಗಳು ನಡೆಯುವುದು ಅಸಾಧ್ಯ, ಹೀಗಾಗಿ ಸೆಪ್ಟಂಬರ್‌ನಲ್ಲಿ ನಡೆಯಲಿರುವ ಏಷ್ಯಾ ಕಪ್‌ ನಡೆಯುವುದು ಅನುಮಾನ ಎಂದು ಬಿಸಿಸಿಐನ ಸದಸ್ಯರೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.