ರಕ್ತದ ಬೇಡಿಕೆ-ರಕ್ತದಾನದಲ್ಲೂ ಕುಸಿತ


Team Udayavani, Mar 31, 2020, 10:52 AM IST

ರಕ್ತದ ಬೇಡಿಕೆ-ರಕ್ತದಾನದಲ್ಲೂ ಕುಸಿತ

ಹುಬ್ಬಳ್ಳಿ: ಕೋವಿಡ್ 19 ಲಾಕ್‌ಡೌನ್‌ ರಕ್ತ ಭಂಡಾರಗಳ ಮೇಲೂ ಸಾಕಷ್ಟು ಪರಿಣಾಮ ಬೀರುತ್ತಿದೆ. ರಕ್ತದಾನಿಗಳ ಸಂಖ್ಯೆಯೂ ಕ್ಷೀಣಿಸುತ್ತಿದ್ದು, ಹೀಗಾಗಿ ರಕ್ತ ಸಂಗ್ರಹ ಕೊರತೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದೆ.

ಇಲ್ಲಿನ ನೀಲಿಜಿನ್‌ ರಸ್ತೆಯಲ್ಲಿರುವ ರಾಷ್ಟ್ರೋತ್ಥಾನ ರಕ್ತನಿಧಿ ಭಂಡಾರದಲ್ಲಿ ಪ್ರತಿ ತಿಂಗಳು 400-600 ಯುನಿಟ್‌ನಷ್ಟು ರಕ್ತ ಸಂಗ್ರಹವಾಗುತ್ತಿತ್ತು. ಪ್ರತಿ ತಿಂಗಳಿಗೆ 12-15 ರಕ್ತದಾನ ಶಿಬಿರಗಳನ್ನು ನಡೆಸಲಾಗುತ್ತಿತ್ತು. ಲಾಕ್‌ಡೌನ್‌ ಘೋಷಣೆ ಆಗುತ್ತಿದ್ದಂತೆ ರಕ್ತದಾನ ಶಿಬಿರಗಳು ಸ್ಥಗಿತಗೊಂಡವು. ಇದರ ಪರಿಣಾಮ ರಾಷ್ಟ್ರೋತ್ಥಾನ ರಕ್ತನಿಧಿ ಭಂಡಾರದಿಂದ ಮಾರ್ಚ್‌ನಲ್ಲಿ ಕೇವಲ 2-3 ರಕ್ತದಾನ ಶಿಬಿರಗಳು ನಡೆದವು. ಕೇವಲ 40-50 ಯುನಿಟ್‌ನಷ್ಟು ರಕ್ತ ಸಂಗ್ರಹವಾಗಿತ್ತು.

ರಕ್ತದಾನಿಗಳ ಸಂಖ್ಯೆ ಕ್ಷೀಣಿಸುತ್ತಿದ್ದಂತೆ ಹಾಗೂ ರಕ್ತ ಸಂಗ್ರಹ ಕಡಿಮೆ ಆಗುತ್ತಿದ್ದಂತೆ ಭಂಡಾರದಿಂದ ಕಾಯಂ ರಕ್ತದಾನಿಗಳನ್ನು ಸಂಪರ್ಕಿಸಿ ರಕ್ತದಾನ ಮಾಡಲು ಮನವಿ ಮಾಡಲಾಯಿತು. ಅಲ್ಲದೇ ರಕ್ತದಾನ ಮಾಡಲು ಇಚ್ಛಿಸುವವರನ್ನು ಅವರಿದ್ದಲ್ಲಿಗೆ ಸಂಸ್ಥೆಯ ವಾಹನ ತೆಗೆದುಕೊಂಡು ಹೋಗಿ ಕರೆತಂದು ರಕ್ತ ಪಡೆದುಕೊಂಡು ಬಳಿಕ ಅವರನ್ನು ವಾಪಸ್‌ ಮನೆಗೆ ಬಿಡುವ ವ್ಯವಸ್ಥೆ ಮಾಡಲಾಯಿತು. ಹೀಗಾಗಿ 2-3 ದಿನಗಳಲ್ಲಿ 50-100 ಯುನಿಟ್‌ನಷ್ಟು ರಕ್ತ ಸಂಗ್ರಹವಾಯಿತು ಎನ್ನುತ್ತಾರೆ ರಾಷ್ಟ್ರೋತ್ಥಾನ ರಕ್ತನಿಧಿ ಭಂಡಾರದವರು. ನಗರದಲ್ಲಿನ ಬಹುತೇಕ ಬ್ಲಿಡ್‌ ಬ್ಯಾಂಕ್‌ಗಳು ರಕ್ತ ಸಂಗ್ರಹದ ಸಮಸ್ಯೆಯನ್ನು ಎದುರಿಸುತ್ತಿವೆ.

ರಕ್ತದ ಬೇಡಿಕೆ ಕಡಿಮೆ: ಕೋವಿಡ್ 19 ವ್ಯಾಪಿಸುವುದಕ್ಕಿಂತಲೂ ಮೊದಲು ರಾಷ್ಟ್ರೋತ್ಥಾನ ರಕ್ತನಿಧಿ ಭಂಡಾರಕ್ಕೆ ಪ್ರತಿದಿನ ಕನಿಷ್ಟ 20-30 ಯುನಿಟ್‌ ನಷ್ಟು ಬೇಡಿಕೆ ಬರುತ್ತಿತ್ತು. ಆದರೀಗ 6-7 ಯುನಿಟ್‌ಗಳಷ್ಟು ಮಾತ್ರ ಬೇಡಿಕೆಯಿದೆ. ಇದಕ್ಕೆ ಕಾರಣ ಬಹುತೇಕ ಖಾಸಗಿ ಆಸ್ಪತ್ರೆಗಳು ಹೊರ ರೋಗಿಗಳ ವಿಭಾಗ (ಒಪಿಡಿ) ಮುಚ್ಚಿವೆ. ತುರ್ತು ಇದ್ದರೆ ಮಾತ್ರ ದಾಖಲು ಮಾಡಿಕೊಳ್ಳುತ್ತಿವೆ. ಲಾಕ್‌ಡೌನ್‌ ಘೋಷಣೆ ಆದ ಆರಂಭದಲ್ಲಿ ಬೇಡಿಕೆ ಇತ್ತು. ಆದರೆ ಈಗ ಖಾಸಗಿ ಆಸ್ಪತ್ರೆಗಳು ಒಪಿಡಿ ಬಂದ್‌ ಮಾಡಿದ್ದರಿಂದ ರಕ್ತದ ಬೇಡಿಕೆ ಕಡಿಮೆ ಆಗಿದೆ. ಕಾರಣ ಪಿಕ್‌ಅಪ್‌ ಆ್ಯಂಡ್‌ ಡ್ರಾಪ್‌ ಅನ್ನು 2-3 ದಿನ ಸ್ಥಗಿತಗೊಳಿಸಲಾಗುತ್ತಿದೆ ಎಂದು ರಕ್ತಭಂಡಾರದವರು ಹೇಳುತ್ತಾರೆ.

ಇನ್ಸ್‌ಪೆಕ್ಟರ್‌ ರಕ್ತದಾನ :  ದೇಶಾದ್ಯಂತ ಲಾಕ್‌ಡೌನ್‌ ಆದ ನಿಮಿತ್ತ ರಕ್ತದಾನಿಗಳ ಸಂಖ್ಯೆ ಕಡಿಮೆ ಆಗುತ್ತಿದೆ ಎಂಬುದನ್ನು ಅರಿತ ನಗರದ ವಿಮಾನ ನಿಲ್ದಾಣದ ಇನ್ಸ್‌ಸ್ಪೆಕ್ಟರ್‌ ಜಗದೀಶ ಹಂಚಿನಾಳ ಹಾಗೂ ಇನ್ನಿತರರು ರವಿವಾರ ರಾಷ್ಟ್ರೋತ್ಥಾನ ರಕ್ತನಿಧಿ ಭಂಡಾರಕ್ಕೆ ತೆರಳಿ ರಕ್ತದಾನ ಮಾಡಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಹಂಚಿನಾಳ ಅವರು ಕಳೆದ ಮೂರು ವರ್ಷಗಳಿಂದ ತಮ್ಮ ಜನ್ಮದಿನದಂದು ರಕ್ತದಾನ ಮಾಡುತ್ತ ಬಂದಿದ್ದಾರೆ. ಇವರು ರಕ್ತದಾನ ಮಾಡಿದ್ದನ್ನು ಕೇಳಿದ ಕೆಲವು ಕೆಎಸ್‌ಐಎಸ್‌ಎಫ್‌ ಹಾಗೂ ಇತರೆ ಪೊಲೀಸರು ಸಹಿತ ಸ್ವ-ಇಚ್ಛೆಯಿಂದ ರಕ್ತದಾನ ಮಾಡಲು ಮುಂದಾಗಿದ್ದಾರೆ.

ಕೋವಿಡ್ 19ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರಗಳು ರದ್ದಾಗಿವೆ. ಇದರಿಂದಾಗಿ ರಕ್ತನಿಧಿ ಭಂಡಾರದಲ್ಲಿ ರಕ್ತ ಸಂಗ್ರಹ ಕಡಿಮೆಯಾಗಿದೆ ಹಾಗೂ ರಕ್ತದಾನಿಗಳ ಸಂಖ್ಯೆಯೂ ಕ್ಷೀಣಿಸಿದೆ. ಕಾರಣ ಸಂಸ್ಥೆಯಿಂದ ಪಿಕ್‌ಅಪ್‌ ಆ್ಯಂಡ್‌ ಡ್ರಾಪ್‌ ವ್ಯವಸ್ಥೆ ಮಾಡಿದ್ದರಿಂದ ಸುಮಾರು 100 ಯುನಿಟ್‌ದಷ್ಟು ರಕ್ತ ಸಂಗ್ರಹವಾಗಿದೆ. ಆದರೆ ಖಾಸಗಿ ಆಸ್ಪತ್ರೆಗಳು ಒಪಿಡಿ ಬಂದ್‌ ಮಾಡಿದ್ದರಿಂದ ರಕ್ತದ ಬೇಡಿಕೆ ಕುಸಿದಿದೆ. ಹೀಗಾಗಿ 2-3ದಿನ ಪಿಕ್‌ಅಪ್‌ ಆ್ಯಂಡ್‌ ಡ್ರಾಪ್‌ ನಿಲ್ಲಿಸಲಾಗುವುದು. ಸ್ವ-ಇಚ್ಛೆಯಿಂದ ಯಾರಾದರೂ ರಕ್ತದಾನ ಮಾಡಲು ಮುಂದಾದರೆ ಸ್ವೀಕರಿಸಲಾಗುವುದು. -ದತ್ತಮೂರ್ತಿ ಕುಲಕರ್ಣಿ, ಶಿಬಿರದ ಸಂಯೋಜಕ, ರಾಷ್ಟ್ರೋತ್ಥಾನ ರಕ್ತನಿಧಿ ಭಂಡಾರ

 

-ಶಿವಶಂಕರ ಕಂಠಿ

ಟಾಪ್ ನ್ಯೂಸ್

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.