ಮಹಾನಗರದಲ್ಲಿ ಸಮಾಜ ಬಾಂಧವರಿಗೆ ನೆರವಾಗಲು ಕುಲಾಲ ಸಮಾಜದ Help Line


Team Udayavani, Mar 31, 2020, 4:46 PM IST

ಮಹಾನಗರದಲ್ಲಿ ಸಮಾಜ ಬಾಂಧವರಿಗೆ ನೆರವಾಗಲು ಕುಲಾಲ ಸಮಾಜದ Help Line

ಮುಂಬಯಿ: ಕೋವಿಡ್ 19 ವೈರಸ್ ಉಪಟಳಕ್ಕೆ ತತ್ತರಿಸುತ್ತಿರುವ ವಾಣಿಜ್ಯ ನಗರದಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿರಬಹುದಾಗಿರುವ ಕುಲಾಲ ಸಮಾಜ ಭಾಂಧವರ ಯೋಗಕ್ಷೇಮ ವಿಚಾರಿಸಲು ಮುಂಬಯಿ ಕುಲಾಲ ಸಂಘ ಮುಂದಾಗಿದೆ. ಮುಂಬಯಿ ಕುಲಾಲ ಸಮುದಾಯದವರ ರಕ್ಷಣೆಗೆ ‘ಕುಲಾಲ ಹೆಲ್ಫ್ ಲೈನ್’ ಮೂಲಕ ಸಹಾಯ ಮಾಡಲು ಸಂಘ ಮುಂದಾಗಿದೆ.

ಮುಂಬಯಿ ಹಾಗೂ ಉಪನಗರಗಳಲ್ಲಿ ಇರುವ ಸಮಸ್ತ ಕುಲಾಲ ಸಮಾಜ ಬಾಂಧವರನ್ನು ಸಂಪರ್ಕಿಸಿ ಅವರ ಸಂಕಷ್ಟಗಳನ್ನು ಖುದ್ದಾಗಿ ವಿಚಾರಿಸುವುದು ಕಷ್ಟಸಾಧ್ಯವಾಗಿರುವುದರಿಂದ ಈ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.

ಈ ಸಂಕಷ್ಟದ ಸಮಯದಲ್ಲಿ ಕುಲಾಲ ಸಮಾಜ ಬಾಂಧವರು ಸಂಧಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದು ಯಾವುದೇ ಸಹಕಾರದ ಅಗತ್ಯವಿದ್ದಲ್ಲಿ ಅಂತವರ ಸೇವೆಗಾಗಿ ಕುಲಾಲ ಹೆಲ್ಪ್ ಲೈನ್ ನ್ನು ಸಂಪರ್ಕಿಸಬಹುದು. ಮತ್ತು ನಿಮಗೆ ಅಗತ್ಯವಿರುವ ಸಹಾಯವನ್ನು ಈ ಹೆಲ್ಪ್ ಲೈನ್ ಕರೆಯಲ್ಲಿ ತಿಳಿಸಿದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಕುಲಾಲ ಹೆಲ್ಪ್ ಲೈನ್ ನಿಮ್ಮ ಕಷ್ಟಕ್ಕೆ ಸಹಕರಿಸುವುದು. ಏಪ್ರಿಲ್ 14ರವರೆಗೆ ಮುಂಬಯಿ ನಗರ ಮತ್ತು ಉಪನಗರದಲ್ಲಿರುವ ಕುಲಾಲ ಸಮಾಜ ಬಾಂಧವರ ಸೇವಾ ಕಾರ್ಯಗಳಿಗೆ ಪೂರಕವಾಗಿ ಈ ಹೆಲ್ಪ್ ಲೈನ್ ಕಾರ್ಯನಿರ್ವಹಿಸಲಿದೆ.

‘ದೈನಂದಿನ ಬದುಕು ನಿರ್ವಹಿಸಲು ಕಷ್ಟವಾದಾಗ ಅಥವಾ ವೈದ್ಯಕೀಯ ಸಮಸ್ಯೆ ಆದಾಗ ನಿಮ್ಮ ಸೇವೆಗೆ ಸ್ಥಳೀಯ ಪೊಲೀಸ್ ಸೇವಾಕೇಂದ್ರದ ಸಹಾಯದೊಂದಿಗೆ ಸಮಾಜಬಾಂಧವರನ್ನು ಸಂಪರ್ಕಿಸಲಾಗುತ್ತದೆ’, ಈ ಉಪಯುಕ್ತ ಮಾಹಿತಿಯನ್ನು ಮುಂಬೈ ಕುಲಾಲ ಸಂಘದ ಅಧ್ಯಕ್ಷರಾದ ದೇವದಾಸ್ ಕುಲಾಲ್, ಉಪಾಧ್ಯಕ್ಷರಾಗಿರುವ ರಘು ಮೂಲ್ಯ ಕಾರ್ಯದರ್ಶಿ ಕರುಣಾಕರ್ ಸಾಲ್ಯಾನ್, ಕೋಶಧಿಕಾರಿ ಜಯ ಅಂಚನ್ ಮಹಿಳಾ ವಿಭಾಗದ ಕಾರ್ಯಧ್ಯಕ್ಷ ಮಮತಾ ಗುಜರಾತ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಎಚ್ಚರವಾಗಿರಿ ಜಾಗೃತರಾಗಿರಿ
ಮುಂಬಯಿ ಮಹಾನಗರದಲ್ಲಿ ಹೆಚ್ಚು ಹೆಚ್ಚು ಪಸರಿಸಿಕೊಳ್ಳುತ್ತಿರುವ ಕೋವಿಡ್ 19 ಮಹಾಮಾರಿ ಯಾವುದೇ ಸಂದರ್ಭದಲ್ಲಿ ನಮಗೂ ತಗಲುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ನಾವೆಲ್ಲರೂ ಮನೆಯಿಂದ ಹೊರಗೆ ಬಾರದೆ ಜಾಗೃತರಾಗಿರಬೇಕು ಮತ್ತು ಅಗತ್ಯ ವಸ್ತುಗಳಿಗೆ ಮಾತ್ರ ಮನೆಯಿಂದ ಹೊರಗೆ ಬರುವಂತೆ ಕುಲಾಲ ಸಮಾಜ ಬಾಂಧವರಲ್ಲಿ ಸಂಘ ಮನವಿ ಮಾಡಿಕೊಂಡಿದೆ.

‘ಸಮಾಜ ಬಾಂಧವರ ನೋವನ್ನು ಅರಿತುಕೊಂಡು ಅವರಿಗೆ ಸೂಕ್ತ ಸಹಾಯ ಹಸ್ತ ನೀಡುವುದಕ್ಕಾಗಿ ಕುಲಾಲ ಸಂಘ ಮುಂಬಯಿ ‘ಕುಲಾಲ ಹೆಲ್ಪ್ ಲೈನ್’ ಪ್ರಾರಂಭಿಸಿದ್ದು ಪ್ರತೀ ಉಪನಗರಗಳಲ್ಲಿ ಸ್ವಯಂ ಸೇವಕರ ಸಮಾಜ ಬಾಂಧವರು ಕಷ್ಟದಲ್ಲಿರುವವರ ಸೇವೆ ಮಾಡುವುದಕ್ಕಾಗಿ ಸಿದ್ಧರಾಗಿದ್ದಾರೆ. ನಿಮ್ಮೆಲ್ಲರ ಆರೋಗ್ಯ  ಕಾಪಾಡಿಕೊಳ್ಳಿ ಯಾವುದೇ ಸಂದರ್ಭದಲ್ಲಿ ಸಂಘದ ಸೇವಾ ಕಾರ್ಯದ ಅಗತ್ಯವಿದ್ದಾಗ ಕುಲಾಲ ಹೆಲ್ಪ್ ಲೈನ್ ಗೆ ಸಂಪರ್ಕಿಸಿ’ ಎಂದು ಮುಂಬಯಿ ಕುಲಾಲ ಸಂಘದ ಅಧ್ಯಕ್ಷರಾಗಿರುವ ದೇವದಾಸ್ ಕುಲಾಲ್ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Managing Committee: 
P. Devdas L Kulal – 9820507848
Raghu A Moolya – 9322668660
Karunakar B Salian – 9819977549
Jaya S Anchan – 9820868195
Umesh M Bangera – 9082793744
Ashok Kulal – 9819687096
Sunil Kulal – 9987174783
Mahila Vibhag: 
Mamta S Gujaran – 9819279970
Malathi J Anchan – 9833086894

ಟಾಪ್ ನ್ಯೂಸ್

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

1-wqeqewqe

Mass sick leave; ವಜಾಗೊಂಡ ಎಲ್ಲಾ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕ್ಯಾಬಿನ್ ಸಿಬಂದಿ ಮರುನೇಮಕ

1-wwewqewq

NADA ಬೆನ್ನಲ್ಲೇ UWW ನಿಂದಲೂ ವರ್ಷಾಂತ್ಯದ ವರೆಗೆ ಬಜರಂಗ್ ಅಮಾನತು

Politics: ಸಿಎಂ ಸಿದ್ದರಾಮಯ್ಯ “ಕಾಮ್‌ ಚೋರ್‌’: ಅಶೋಕ್‌ ಆರೋಪ

Politics: ಸಿಎಂ ಸಿದ್ದರಾಮಯ್ಯ “ಕಾಮ್‌ ಚೋರ್‌’: ಅಶೋಕ್‌ ಆರೋಪ

Revanna 2

H.D. Revanna ಮೇ 13 ರ ವರೆಗೆ ಪರಪ್ಪನ ಅಗ್ರಹಾರದಲ್ಲೇ

1-ewewqe

Gokarana; ಮಹಾಬಲೇಶ್ವರ ಗರ್ಭಗುಡಿಯ ನಂದಿ ಪೂಜೆ ವಿವಾದ: ಪ್ರತಿಭಟನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್‌

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Revanna: ರೇವಣ್ಣಗೆ ಧೈರ್ಯ ತುಂಬಿದ ಜೆಡಿಎಸ್‌ ಶಾಸಕರು

HD Revanna: ರೇವಣ್ಣಗೆ ಧೈರ್ಯ ತುಂಬಿದ ಜೆಡಿಎಸ್‌ ಶಾಸಕರು

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

ಪೆನ್‌ಡ್ರೈವ್‌ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್‌ಗೆ ಪತ್ರ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Hasana: “ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

1-ka

Udupi; ಶ್ರೀ ಕೃಷ್ಣ ಮಠದಲ್ಲಿ ಸ್ವರ್ಣಾಲಯದ ಶುಭಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.