ಹಿಂಡಲಗಾ ಕೈದಿಗಳಿಂದ ನಿತ್ಯ 1500 ಮಾಸ್ಕ್ ತಯಾರಿಕೆ


Team Udayavani, Mar 31, 2020, 5:28 PM IST

bg-tdy-1

ಬೆಳಗಾವಿ: ಕೋವಿಡ್ 19 ಭೀತಿ ಹೊಡೆತದಿಂದ ತತ್ತರಿಸಿರುವ ಸಮಾಜಕ್ಕೆ ಕೈದಿಗಳು ಕೈಜೋಡಿಸಿದ್ದು, ನಿತ್ಯ 1500ಕ್ಕೂ ಹೆಚ್ಚು ಮಾಸ್ಕ್ಗಳನ್ನು ತಯಾರಿಸುವ ಮೂಲಕ ಬೆಳಗಾವಿಯ ಹಿಂಡಲಗಾ ಜೈಲಿನ ಕೈದಿಗಳು ಕೋವಿಡ್ 19  ವಿರುದ್ಧ ಹೋರಾಡಲು ನಿತ್ಯ 15 ಗಂಟೆ ಕಾಲ ಸೇವೆ ಸಲ್ಲಿಸುತ್ತಿದ್ದಾರೆ.

ಹಿಂಡಲಗಾ ಜೈಲಿನಲ್ಲಿ ಈ ಹಿಂದೆ ದಿನಾಲು ಬಟ್ಟೆಯ 250ರಿಂದ 300 ಮಾಸ್ಕ್ಗಳು ತಯಾರಾಗುತ್ತಿದ್ದವು. ಈಗ ಕೊರೊನಾ ಸೋಂಕು ಹರಡುವುದನ್ನು ತಡೆಯಲು ಹಾಗೂ ವಿವಿಧ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯ ಆರೋಗ್ಯ ದೃಷ್ಟಿಯಿಂದ ದಿನಾಲು 1500 ಮಾಸ್ಕ್ಗಳು ತಯಾರಾಗುತ್ತಿದ್ದು, ಇನ್ನೆರಡು ದಿನಗಳ ನಂತರ ಪ್ರಮಾಣ 2000ಕ್ಕೆ ಏರಲಿದೆ. ಜೈಲಿನಲ್ಲಿರುವ 25 ಪುರುಷರು ಹಾಗೂ 5 ಜನ ಮಹಿಳಾ ಜೈಲು ನಿವಾಸಿಗಳು ಬೆಳಗ್ಗೆ 6ರಿಂದ ರಾತ್ರಿ 9 ಗಂಟೆಯವರೆಗೆ ದುಡಿಯುತ್ತಿದ್ದಾರೆ.

ಪೊಲೀಸ್‌ ಇಲಾಖೆ, ಬಿಎಸ್‌ಎನ್‌ಎಲ್‌, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಬೇಡಿಕೆ ಬರುತ್ತಿದೆ. ಕೆಎಸ್‌ಆರ್‌ಪಿ, ಕಂಟ್ರೋಲ್‌ ರೂಂ, ಟ್ರಾಫಿಕ್‌ ಪೊಲೀಸರಿಗೆ ಮಾಸ್ಕ್ ಗಳನ್ನು ನೀಡಲಾಗಿದೆ. ಜತೆಗೆ ಪ್ರತಿ ಪೊಲೀಸ್‌ ಠಾಣೆಗೆ 150 ಬಟ್ಟೆಯ ಮಾಸ್ಕ್ಗಳನ್ನು ನೀಡಲಾಗಿದೆ. ಬೇರೆ ಬೇರೆ ಕಡೆಯಿಂದ ಬೇಡಿಕೆ ಬರುತ್ತಿದೆ. ಮೊದಲು ಸರ್ಕಾರಿ ಇಲಾಖೆಯವರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹಿಂಡಲಗಾ ಕಾರಾಗೃಹದ ಜೈಲರ್‌ ಲೋಕೇಶಕುಮಾರ್‌ ತಿಳಿಸಿದರು.

ರೆಡ್‌ಕ್ರಾಸ್‌ ಸಂಸ್ಥೆಯವರು ಒಟ್ಟು 50 ಸಾವಿರ ಮಾಸ್ಕ್ ಕೇಳಿದ್ದಾರೆ. ರೆಡ್‌ಕ್ರಾಸ್‌ಗೆ ಈಗ ದಿನಾಲು 500 ಮಾಸ್ಕ್ ಗಳನ್ನು ಕೊಡುವ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ನಂತರದಲ್ಲಿ ಇದರ ಪ್ರಮಾಣ ಹೆಚ್ಚಿಸಲಾಗುವುದು. ಪ್ರತಿ ಮಾಸ್ಕ್ ದರ 6 ರೂ. ಇದ್ದು, ಕಚ್ಚಾ ವಸ್ತುವಿನ ವೆಚ್ಚವೇ 5 ರೂ. ಆಗುತ್ತದೆ. ಇನ್ನುಳಿದಂತೆ 50 ಪೈಸೆ ಖರ್ಚಾಗುತ್ತಿದೆ. ಶೇ. 15ರಷ್ಟು ಲಾಭ ಮಾತ್ರ ಪಡೆದುಕೊಳ್ಳಲಾಗುತ್ತಿದೆ. ಬೇಡಿಕೆ ಇದೆ ಎಂಬ ಕಾರಣಕ್ಕೆ ಬೇಕಾಬಿಟ್ಟಿಯಾಗಿ ಹೆಚ್ಚಿನ ದರ ವಸೂಲಿ ಮಾಡುತ್ತಿಲ್ಲ. ಒಂದೇ ದರವನ್ನೇ ಆಕರಿಸಲಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.

ಕೋವಿಡ್ 19  ಸೋಂಕು ಹರಡುವುದನ್ನು ತಡೆಯಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದು, ನಮ್ಮ ಹಿಂಡಲಗಾ ಜೈಲಿನಿಂದಲೂ ಸೇವೆ ಸಲ್ಲಿಸುವ ಉದ್ದೇಶದಿಂದ ನಿತ್ಯ 1500ಕ್ಕೂ ಹೆಚ್ಚು ಬಟ್ಟೆಯ ಮಾಸ್ಕ್ ತಯಾರಿಸಲಾಗುತ್ತಿದೆ. ಬೇಡಿಕೆ ಹೆಚ್ಚಾಗುತ್ತಿದೆ. ಮೊದಲು ಸರ್ಕಾರಿ ಇಲಾಖೆಯವರಿಗೆ ಆದ್ಯತೆ ನೀಡಿ ವಿತರಿಸಲಾಗುತ್ತಿದೆ. – ಕೃಷ್ಣಕುಮಾರ, ಮುಖ್ಯ ಅಧೀಕ್ಷಕರು, ಹಿಂಡಲಗಾ ಕಾರಾಗೃಹ

ಕೋವಿಡ್ 19 ಸೋಂಕು ನಿಯಂತ್ರಣಕ್ಕೆ 10 ದಿನಗಳ ಅವ ಧಿಯಲ್ಲಿ 8 ಸಾವಿರ ಬಟ್ಟೆಯ ಮಾಸ್ಕ್ ಗಳನ್ನು ಹಿಂಡಲಗಾ ಕಾರಾಗೃಹದಲ್ಲಿ ತಯಾರಿಸಲಾಗಿದೆ. ಒಬ್ಬ ವ್ಯಕ್ತಿ 200ಕ್ಕಿಂತ ಹೆಚ್ಚು ಮಾಸ್ಕ್ ತಯಾರಿಸಿದರೆ ಒಂದು ಮಾಸ್ಕ್ಗೆ 2 ರೂ. ಹೆಚ್ಚಿಗೆ ನೀಡುವುದಾಗಿ ಹೇಳಲಾಗಿದೆ. ಮಾಸ್ಕ್ ಹೊಲೆಯುವ ಸ್ಥಳದಲ್ಲಿಯೇ ಉಪಹಾರ, ಊಟ, ಬಿಸ್ಕೀಟ್‌, ಚಹಾ ನಿಡಲಾಗುತ್ತಿದೆ. -ಲೋಕೇಶಕುಮಾರ, ಜೈಲರ್‌, ಹಿಂಡಲಗಾ ಕಾರಾಗೃಹ

 

­-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.