ದೆಹಲಿಯಿಂದ ಜಿಲ್ಲೆಗೆ ಬಂದ ಕೋವಿಡ್ 19


Team Udayavani, Apr 1, 2020, 3:27 PM IST

ದೆಹಲಿಯಿಂದ ಜಿಲ್ಲೆಗೆ ಬಂದ ಕೋವಿಡ್ 19

ತುಮಕೂರು: ಇಡೀ ಜಗತ್ತನ್ನೇ ಭೀತಿಗೊಳಿಸಿ ನಮ್ಮ ದೇಶ ದಲ್ಲಿಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್ 19 ವೈರಸ್‌ ರಾಜ್ಯದಲ್ಲಿ ಕದಂಬ ಬಾಹುಚಾಚಿದ್ದು ಕಲ್ಪತರು ನಾಡಿನಲ್ಲಿಯೂ ದಿನ ದಿಂದ ದಿನಕ್ಕೆ ಸೋಂಕಿತರು ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಮೂಡಿದ್ದು ಈಗ ತುಮಕೂರು ಕೋವಿಡ್ 19 ಹಾಟ್‌ ಸ್ಪಾಟ್‌ ಆಗಲಿದೆಯೇ?.

ದೇಶದಲ್ಲಿ ಕೊರೊನಾ ಹೆಚ್ಚು ವ್ಯಾಪಿಸಬಾರದು ಎಂದು ಇಡೀ ದೇಶವನ್ನು ಲಾಕ್‌ಡೌನ್‌ ಮಾಡಿದ್ದರೂ ಜನ ಮನೆಯಲ್ಲಿ ಇರದೇ ಬೀದಿಗೆ ಬರುತ್ತಿದ್ದು ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ 19 ಗೆ ಒಬ್ಬ ವೃದ್ಧ ಬಲಿಯಾಗಿದ್ದು ಇಬ್ಬರಲ್ಲಿ ಕೊರೊನಾ ವೈರಸ್‌ ಕಂಡು ಬಂದಿರುವುದು ಜಿಲ್ಲೆಯ ಎಲ್ಲಾ ನಾಗರಿಕರಲ್ಲಿ ಆತಂಕ ಹೆಚ್ಚಿಸಿದೆ.

ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಮಹಾಮಾರಿ ಕೋವಿಡ್ 19  ಜಿಲ್ಲೆಯ ಶಿರಾದಲ್ಲಿ ಮೊದಲು ಕಂಡು ಬಂದಿದ್ದು ದೆಹಲಿಯ ನಿಜಾಮುದ್ದೀನ್‌ ಮಸೀದಿಯಲ್ಲಿ ನಡೆದಿದ್ದ ಧಾರ್ಮಿಕ ಕಾರ್ಯಕ್ರಮಕ್ಕೆ ರೈಲಿನಲ್ಲಿ ಹೋಗಿಬಂದಿದ್ದ ವೃದ್ಧ ನಿಗೆ ಮೊದಲು ಕಾಣಿಸಿಕೊಂಡು ಆತ ಮೃತಪಟ್ಟಿದ್ದಾನೆ.

ಆತನ ಸಂಪರ್ಕ ಹೊಂದಿದ್ದ ಇಬ್ಬರಿಗೆ ಕೋವಿಡ್ 19   ಈಗಾಗಲೇ ಕಾಣಿಸಿಕೊಂಡಿದೆ, ಜೊತೆಗೆ ಕೊರೊನಾ ಸೋಂಕಿತರು ಜಿಲ್ಲೆಯ ವಿವಿಧ ಕಡೆ ಸಂಚಾರ ಮಾಡಿದ್ದಾರೆ. ತಿಪಟೂರಿ ನಲ್ಲಿಯೂ ಸಭೆ ನಡೆಸಿದ್ದಾರೆ. ಇವರಲ್ಲಿ ಯಾರಿಗೆ ಸೋಂಕು ಹರಡಿದೆಯೋ ಎನ್ನುವ ಭೀತಿ ಮನೆ ಮಾಡಿದೆ.

ಜೊತೆಗೆ ವಿದೇಶದಿಂದ ಬಂದವರು ಇನ್ನೂ ಹೋಂ ಕ್ವಾರಂಟೈನ್‌ ನಲ್ಲಿ ಇದ್ದಾರೆ. 30 ಜನರ ರಕ್ತ ಮತ್ತು ಕಫ‌ದ ಮಾದರಿ ವರದಿ ಲ್ಯಾಬ್‌ನಿಂದ ಬಂದಿದ್ದು, ಎಲ್ಲಾ ಮಾದರಿ ನೆಗೆಟಿವ್‌ ಆಗಿದೆ. ದೆಹಲಿಯಿಂದ ಬಂದ ಕೊರೊನಾ: ತುಮಕೂರಿಗೆ ಕೋವಿಡ್ 19 ಬಂದಿರುವುದು ದೆಹಲಿಯ ನಿಜಾಮುದ್ದೀನ್‌ ಮಸೀದಿಯಿಂದ ಅಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ತುಮಕೂರಿನ ಶಿರಾದಿಂದ ತೆರಳಿದ್ದ ವೃದ್ಧನಲ್ಲಿ ಮೊದಲು ಈ ವೈರಸ್‌ ಕಾಣಿಸಿಕೊಂಡಿತ್ತು.

ದೇಶದ ಎಲ್ಲಾ ಕಡೆ ಕೋವಿಡ್ 19   ವೈರಸ್‌ ಸೋಂಕು ಪ್ರಕರಣ ಕಾಣುತ್ತಿತ್ತು ಇದರಲ್ಲಿ ನಿಜಾಮುದ್ದೀನ್‌ ಮಸೀದಿಗೆ ಹೋದವರಿಗೆ ಹೆಚ್ಚು ಗೋಚರವಾಗುತ್ತಿದೆ. ಮೊದಲು ಜಿಲ್ಲೆಯಲ್ಲಿ ಯಾವುದೇ ಕೊರೊನಾ ವೈರಸ್‌ ಪತ್ತೆಯಾಗಲಿಲ್ಲ. ಆದರೆ, ಕೆಲವು ದಿನಗಳ ಬಳಿಕ ಏಕಾಏಕಿ ಕೊರೊನಾಗೆ ವೃದ್ಧನೊಬ್ಬ ಬಲಿಯಾದರು. ಇದಾದ ಬಳಿಕ ಜಿಲ್ಲಾಡಳಿತ ಸಂಪೂರ್ಣ ಎಚ್ಚೆತ್ತುಕೊಂಡಿತು. ಈಗ ವೃದ್ಧನ ಮಗನಿಗೇ ಸೋಂಕು ಹರಡಿರುವುದು ಜಿಲ್ಲೆಯ ಜನರ ಆತಂಕ ಹೆಚ್ಚಾಗುವಂತೆ ಮಾಡಿದೆ. ತುಮಕೂರು ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರು ಹೆಚ್ಚುವ ಸಾಧ್ಯತೆ ಕಂಡು ಬಂದಿದೆ, ದೆಹಲಿಯಿಂದ ಬಂದು ಈಗ ಈ ಮಹಾಮಾರಿಗೆ ಮೃತನಾಗಿ ಇನ್ನಿಬ್ಬರಿಗೆ ಸೋಂಕು ಬರುವಂತೆ ಮಾಡಿರುವ ವೃದ್ಧ ಜಿಲ್ಲೆಯ ಹಲವರ ಸಂಪರ್ಕ ಹೊಂದಿದ್ದ ಇದರಿಂದ ತುಮಕೂರು ಕೋವಿಡ್ 19 ಹಾಟ್‌ ಸ್ಪಾಟ್‌ ಎನ್ನುವ ಆತಂಕ ಕಾಡಿದೆ.

ಜಿಲ್ಲೆಯ ಇಬ್ಬರಲ್ಲಿ ಕೋವಿಡ್ 19   ಸೋಂಕು ಕಂಡು ಬಂದಿದ್ದು ರೋಗ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದೇವೆ. ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದ ತಿಪಟೂರಿನ 11 ಜನರಲ್ಲಿ ಸೋಂಕು ಪತ್ತೆಯಾಗಿಲ್ಲ. ಆದರೂ ಅವರನ್ನು ಐಸೋಲೇಷನ್‌ನಲ್ಲಿ ಇಡಲಾಗಿದೆ.  –ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲಾಧಿಕಾರಿ

 

ಚಿ.ನಿ.ಪುರುಷೋಅತ್ತಮ್‌

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.