ದೆಹಲಿ ಮಸೀದಿಗೆ ಬಂದ ಇಂಡೋನೇಷ್ಯಾ,ಮಲೇಶ್ಯಾ ಪ್ರಜೆಗಳು ಕರ್ನಾಟಕಕ್ಕೆ ಬಂದಿದ್ದಾರೆ:ಶ್ರೀರಾಮುಲು
ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುವುದು ಎಂದು ವಿವರಿಸಿದ್ದಾರೆ.
Team Udayavani, Apr 1, 2020, 3:34 PM IST
ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿರುವ ಪ್ರಕರಣ ಸದ್ದು ಮಾಡುತ್ತಿರುವ ಬೆನ್ನಲ್ಲೇ ದಿಲ್ಲಿ ಮಸೀದಿಯಲ್ಲಿ ಭಾಗವಹಿಸಿದ್ದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದಿರುವ ಬಗ್ಗೆ ಮಾಹಿತಿ ಲಭಿಸಿರುವುದಾಗಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
62 ಮಂದಿಯಲ್ಲಿ 12 ಜನರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುತ್ತಿದೆ. ಭಾರತಕ್ಕೆ ಭೇಟಿ ಕೊಟ್ಟ ಇವರು ತಮ್ಮ ದೇಶಕ್ಕೆ ವಾಪಸ್ ಆಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುವುದು ಎಂದು ವಿವರಿಸಿದ್ದಾರೆ.
ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಷ್ಯಾ ಹಾಗೂ ಮಲೇಶಿಯಾದ 62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ ಲಭಿಸಿದೆ. ಇದರಲ್ಲಿ 12 ಜನರನ್ನ ಪತ್ತೆ ಹಚ್ಚಿ Quarantine ಮಾಡಲಾಗುತ್ತಿದೆ. ತಮ್ಮ ದೇಶಕ್ಕೆ ಹಿಂತಿರುಗದೆ ಇಲ್ಲೇ ಉಳಿದಿರುವವರನ್ನು ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ Quarantine ಮಾಡಲಾಗುವುದು
— B Sriramulu (@sriramulubjp) April 1, 2020
ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ್ದರು. ಇದರಲ್ಲಿ 40 ಜನರನ್ನು ಪತ್ತೆ ಹಚ್ಚಿದ್ದು, ಕ್ವಾರಂಟೈನ್ ಮಾಡಲಾಗುತ್ತಿದೆ. ಇವರಲ್ಲಿ 12 ಜನರನ್ನು ಕೋವಿಡ್ 19 ಪರೀಕ್ಷೆ ನಡೆಸಿದ ವರದಿ ನೆಗೆಟಿವ್ ಎಂದು ಬಂದಿರುವುದಾಗಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 40 ಜನರನ್ನ ಪತ್ತೆ ಹಚ್ಚಿದ್ದು, ಎಲ್ಲರನ್ನೂ Quarantine ಮಾಡಲಾಗುತ್ತಿದೆ. ಇದರಲ್ಲಿ 12 ಜನರ #COVID19 ಪರೀಕ್ಷೆ ವರದಿ Negative ಎಂದಿದೆ.
— B Sriramulu (@sriramulubjp) April 1, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್