ವಾಣಿಜ್ಯ ತೆರಿಗೆ ಆದಾಯ ಖೋತಾ : ಕೋವಿಡ್ 19 ವೈರಸ್ ಎಫೆಕ್ಟ್ ಭೀತಿ

ಅಬಕಾರಿ ಹೊರತುಪಡಿಸಿ ಉಳಿದ ಮೂರು ತೆರಿಗೆ ಮೂಲದ ಆದಾಯ ಕಡಿತ

Team Udayavani, Apr 2, 2020, 6:32 AM IST

ವಾಣಿಜ್ಯ ತೆರಿಗೆ ಆದಾಯ ಖೋತಾ : ಕೋವಿಡ್ 19 ವೈರಸ್ ಎಫೆಕ್ಟ್ ಭೀತಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಆರ್ಥಿಕ ಶಿಸ್ತು ಪಾಲನೆ ಮೂಲಕ ಪ್ರತಿವರ್ಷ ಬಹುಪಾಲು ಗುರಿ ತಲುಪುತ್ತಿದ್ದ ವಾಣಿಜ್ಯ ತೆರಿಗೆ ಆದಾಯದಲ್ಲಿ ಕಳೆದ 2019-20ನೇ ಸಾಲಿನಲ್ಲಿ ಸುಮಾರು 3,908 ಕೋ. ರೂ. ಖೋತಾ ಉಂಟಾಗಿದೆ. ಮಾ. 31ಕ್ಕೆ ಮುಕ್ತಾಯವಾದ ಕಳೆದ ಹಣಕಾಸು ವರ್ಷದಲ್ಲಿ ಅಬಕಾರಿ ತೆರಿಗೆ ಮಾತ್ರ ನಿಗದಿತ ಗುರಿ ತಲುಪಿ ಹೆಚ್ಚುವರಿಯಾಗಿ 450 ಕೋ. ರೂ. ಆದಾಯ ಸಂಗ್ರಹಿಸಿದೆ.

ಮುದ್ರಾಂಕ ಮತ್ತು ನೋಂದಣಿ ಹಾಗೂ ಸಾರಿಗೆ ತೆರಿಗೆ ಗುರಿಯಲ್ಲಿ ಕ್ರಮವಾಗಿ 600 ಕೋ. ರೂ. ಹಾಗೂ 450 ಕೋ. ರೂ. ಕಡಿತವಾಗಿದೆ. ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ವ್ಯವಸ್ಥೆ ಮುಂದುವರಿದರೆ ತೆರಿಗೆ ಆದಾಯದಲ್ಲಿ ಇನ್ನಷ್ಟು ಖೋತಾ ಆಗಲಿದೆ.

ಗುರಿ ತಲುಪದ ವಾಣಿಜ್ಯ ತೆರಿಗೆ
ಜಿಎಸ್‌ಟಿ ಸಂಗ್ರಹದಲ್ಲೂ ಶೇ.14ರಷ್ಟು ಪ್ರಗತಿ ಸಾಧಿಸಿರುವ ಕಾರಣ 2019-20ನೇ ಸಾಲಿನಲ್ಲೂ ನಿಗದಿತ 76,046 ಕೋ.ರೂ. ತೆರಿಗೆ ಸಂಗ್ರಹ ನಿರೀಕ್ಷೆಯಿತ್ತು. ಅದರಂತೆ ವಾಣಿಜ್ಯ ತೆರಿಗೆ ಮೂಲದಿಂದ 72,138 ಕೋ.ರೂ. ಸಂಗ್ರಹವಾಗಿದೆ.

ವಾಣಿಜ್ಯ ತೆರಿಗೆ ಗುರಿ ತಲುಪಲು ವಿಫಲವಾಗಿರುವುದಕ್ಕೆ ಕೇಂದ್ರ ಸರಕಾರದ ಪರಿಹಾರ ಮೊತ್ತ ಕಡಿತವೇ ಕಾರಣವಾಗಿರುವುದು ಮೇಲ್ನೋಟಕ್ಕೆ ಕಾಣುತ್ತದೆ. ಕಳೆದ ಸಾಲಿನಲ್ಲಿ ಜಿಎಸ್‌ಟಿ ಪರಿಹಾರವಾಗಿ ಕೇಂದ್ರ 4,500 ಕೋ. ರೂ. ನೀಡಬೇಕಿತ್ತು. ಆದರೆ ಕೊನೆ ಕ್ಷಣದವರೆಗೆ 4,500 ಕೋ. ರೂ. ಬಿಡುಗಡೆಯಾಗದ ಕಾರಣ ವಾಣಿಜ್ಯ ತೆರಿಗೆಯಡಿ ನಿಗದಿತ ಗುರಿ ತಲುಪುವಲ್ಲಿ ಹಿನ್ನಡೆಯಾಗಿದೆ.

ಅಬಕಾರಿ: ಗುರಿ ಮೀರಿದ ಸಾಧನೆ
ಅಬಕಾರಿ ತೆರಿಗೆ ಆದಾಯದಿಂದ ಕಳೆದ ಸಾಲಿನಲ್ಲಿ 20,750 ಕೋ. ರೂ. ನಿರೀಕ್ಷಿಸಲಾಗಿತ್ತು. ಕಳೆದ ಮಾ. 16ರಂದೇ ನಿಗದಿತ ಗುರಿಯಷ್ಟು ತೆರಿಗೆ ಸಂಗ್ರಹವಾಗಿದ್ದು, ಮಾ. 24ರ ವರೆಗೆ 21,400 ಕೋ. ರೂ. ಸಂಗ್ರಹವಾಗಿದ್ದು, ಆ ಮೂಲಕ ಗುರಿ ಮೀರಿದ ಸಾಧನೆ ದಾಖಲಿಸಿದೆ.


ಗುರಿ ತಲುಪುವಲ್ಲಿ ವಿಫಲ
ಮುದ್ರಾಂಕ ಮತ್ತು ನೋಂದಣಿ ಶುಲ್ಕ ಹಾಗೂ ಸಾರಿಗೆ ತೆರಿಗೆ ಮೂಲದಿಂದ ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಮುದ್ರಾಂಕ ಮತ್ತು ನೋಂದಣಿ ಶುಲ್ಕದಡಿ ನಿರೀಕ್ಷಿತ ಆದಾಯದಲ್ಲಿ 600 ಕೋ.ರೂ. ಖೋತಾ ಆಗಿದೆ. ಸಾರಿಗೆ ತೆರಿಗೆ ಮೂಲದಿಂದ ನಿಗದಿತ ಗುರಿಯಲ್ಲಿ 450 ಕೋ. ರೂ. ಸಂಗ್ರಹಿಸುವಲ್ಲಿ ಇಲಾಖೆ ವಿಫಲವಾಗಿದೆ.

1,000 ಕೋ. ರೂ. ಖೋತಾ
ಲಾಕ್‌ಡೌನ್‌ ವ್ಯವಸ್ಥೆ ಜಾರಿಯಿಂದಾಗಿ ಕಳೆದ ಸಾಲಿನಲ್ಲಿ ಮೂರೂ ತೆರಿಗೆ ಮೂಲದಿಂದ ಸುಮಾರು 1,000 ಕೋ. ರೂ. ತೆರಿಗೆ ಆದಾಯ ಖೋತಾ ಆಗಿದೆ ಎಂದು ಮೂಲಗಳು ಹೇಳಿವೆ. ಸಾಮಾನ್ಯವಾಗಿ ಆರ್ಥಿಕ ವರ್ಷದ ಕೊನೆ ಹಂತದ ಮಾರ್ಚ್‌ ತಿಂಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಹೆಚ್ಚಾಗಿರುತ್ತದೆ.

ಆದರೆ ಮಾ.15ರಿಂದ ಆಯ್ದ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದು ಬಳಿಕ ಲಾಕ್‌ಡೌನ್‌ ವ್ಯವಸ್ಥೆಯಿಂದಾಗಿ ಆಸ್ತಿ ನೋಂದಣಿ ಸ್ಥಗಿತಗೊಂಡಿದ್ದು, ಸುಮಾರು 400 ಕೋ. ರೂ. ಆದಾಯ ಕೈತಪ್ಪಿದಂತಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಮಾ. 24ರ ಮಧ್ಯರಾತ್ರಿಯಿಂದ ಮದ್ಯ ಮಾರಾಟ ಸಂಪೂರ್ಣ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಸುಮಾರು 300 ಕೋ. ರೂ. ಆದಾಯ ಖೋತಾ ಆಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಎಸ್‌-4 ಮಾದರಿಯ ವಾಹನ ಮಾರಾಟ ಹೆಚ್ಚಾದರೆ ಉತ್ತಮ ತೆರಿಗೆ ಆದಾಯ ಸಂಗ್ರಹವಾಗುವ ನಿರೀಕ್ಷೆ ಇತ್ತಾದರೂ ಅದೂ ಸಾಧ್ಯವಾಗಿಲ್ಲ ಎನ್ನುತ್ತವೆ ಸಾರಿಗೆ ಇಲಾಖೆ ಮೂಲಗಳು.

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.