ಸರಳವಾಗಿ ಶ್ರೀರಾಮ ನವಮಿ ಆಚರಣೆ
Team Udayavani, Apr 3, 2020, 11:23 AM IST
ಉಡುಪಿ/ಮಂಗಳೂರು: ಶ್ರೀರಾಮ ನವಮಿ ಮಹೋತ್ಸವವನ್ನು ಕೋವಿಡ್- 19 ಭೀತಿ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಗುರುವಾರ ಸರಳವಾಗಿ ಆಚರಿಸಲಾಯಿತು.
ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸುತ್ತಿದ್ದ ಹಬ್ಬ ಈ ಬಾರಿ ಮನೆಗಳಿಗೆ ಸೀಮಿತವಾಯಿತು. ಮನೆಗಳಲ್ಲಿ ರಾಮಾಯಣ ಪಠಣ, ರಾಮ ಮಂತ್ರೋಚ್ಚಾರ ನಡೆಸಲಾಯಿತು.ಉಡುಪಿ ಮಠದಲ್ಲಿ ಶ್ರೀಕೃಷ್ಣನಿಗೆ ಪರ್ಯಾಯ ಅದಮಾರು ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು ಪಟ್ಟಾಭಿ ರಾಮ ಅಲಂಕಾರ ಮಾಡಿ ಪೂಜೆ ಸಲ್ಲಿಸಿದರು.
ಭಾಗವತ ಸಪ್ತಾಹ
ಪರ್ಯಾಯ ಅದಮಾರು ಶ್ರೀಕೃಷ್ಣ ಮಠದಲ್ಲಿ ರಾಮನವಮಿ ಶುಭದಿನವಾದ ಗುರುವಾರದಿಂದ ಎ. 8ರ ಹನುಮಜ್ಜಯಂತಿ ವರೆಗೆ ಪ್ರತಿನಿತ್ಯ ಭಾಗವತ ಸಪ್ತಾಹಕ್ಕೆ ಪರ್ಯಾಯ ಅದಮಾರು ಶ್ರೀ ಈಶಪ್ರಿಯತಿರ್ಥ ಶ್ರೀಪಾದರು ಸಂಕಲ್ಪಿಸಿದ್ದಾರೆ. ಪ್ರತಿದಿನ ಬೆಳಗ್ಗೆ 9ರಿಂದ 11ರ ವರೆಗೆ ಮಠದೊಳಗೆ ಪಾರಾಯಣ ನಡೆಯಲಿದೆ.
ಗುರುವಾರ ಸಂಜೆ 5ರಿಂದ 6ರ ವರೆಗೆ ರಾಮತಾರಕ ಮಂತ್ರ ಮತ್ತು ಧನ್ವಂತರಿ ಮಂತ್ರ ಪಠಣ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.