ಲಾಕ್ ಕೇ ಬಾದ್… ಸಲಗ ಗ್ರ್ಯಾಂಡ್ ರಿಲೀಸ್
Team Udayavani, Apr 3, 2020, 4:07 PM IST
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ವಿಜಯ್ ನಟನೆ, ನಿರ್ದೇಶನದ ಸಲಗ ಚಿತ್ರ ಬಿಡುಗಡೆಯಾಗಬೇಕಿತ್ತು. ಅದರೆ ಕೋವಿಡ್ 19 ದಿಂದ ಇಡೀ ದೇಶ ಲಾಕ್ ಡೌನ್ ಆಗಿರುವುದರಿಂದ ಈ ಚಿತ್ರದ ಬಿಡುಗಡೆ ಕೂಡಾ ಮುಂದಕ್ಕೆ ಹೋಗಿದೆ. ಹಾಗಾಗಿ, ಚಿತ್ರತಂಡ ಕೂಡಾ ಚಿತ್ರದ ಕೆಲಸವನ್ನು ತುಂಬಾ ಕೂಲ್ ಆಗಿ ಮಾಡುತ್ತಿದೆ.
ಸದ್ಯ ಚಿತ್ರದ ರೀರೆಕಾರ್ಡಿಂಗ್ ನಡೆಯುತ್ತಿದೆ. ಸಲಗ ಒಂದು ಮಾಸ್ ಸಿನಿಮಾವಾಗಿದ್ದು, ಚಿತ್ರದ ಮಾಸ್ ದೃಶ್ಯಗಳಿಗೆ ಜಯ್ ರೀರೆಕಾರ್ಡಿಂಗ್ ಮಾಡಿಸುತ್ತಿದ್ದಾರೆ. ಸಂಗೀತ ನಿರ್ದೇಶಕ ಚರಣ್ ರಾಜ್ ಈ ಬಾರಿ ಸಲಗ ಮೂಲಕ ಒಳ್ಳೆಯ ಮಾರ್ಕ್ಸ್ ಸ್ಕೋರ್ ಮಾಡುವ ವಿಶ್ವಾಸಟ್ಟುಕೊಂಡಿದ್ದಾರೆ.
ಎಲ್ಲಾ ಓಕೆ, ಈ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ಲಾಕ್ ಡೌನ್ ತೆರವಿನ ಬಳಿಕ. ಲಾಕ್ ಡೌನ್ ತೆರವಿನ ಬಳಿಕ ಸಲಗ ಚಿತ್ರ ಬಿಡುಗಡೆಯಾಗಲಿದೆ. ಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ಇದಕ್ಕೆ ಕಾರಣವೂ ಇದೆ. ಮುಖ್ಯವಾಗಿ ವಿಜಯ್ ಚಿತ್ರ ಬಿಡುಗಡೆಯಾಗದೇ ದೊಡ್ಡ ಗ್ಯಾಪ್ ಆಗಿದೆ. ಇದಕ್ಕಿಂತ ಹೆಚ್ಚಾಗಿ ವಿಜಯ್ ತಮ್ಮ ಇಷ್ಟು ವರ್ಷಗಳ ಅನುಭವದೊಂದಿಗೆ ನಿರ್ದೇಶನಕ್ಕಿಳಿದಿದ್ದಾರೆ. ಹಾಗಾಗಿ ವಿಜಯ್ ನಿರ್ದೇಶನದ ಮೊದಲ ಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸಿದೆ. ಈ ಚಿತ್ರವನ್ನು ಕೆ.ಪಿ.ಶ್ರೀಕಾಂತ್ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಸಂಜನಾ ಆನಂದ್ ನಾಯಕಿ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಮೇಕಿಂಗ್ ವಿಡಿಯೋ ಹಾಗೂ ಹಾಡುಗಳು ದೊಡ್ಡ ಮಟ್ಟದಲ್ಲಿ ಹಿಟ್ ಆಗಿವೆ. ಅದರಲ್ಲೂ ಚಿತ್ರದ ಸೂರಿಯಣ್ಣ… ಹಾಡು ವೈರಲ್ ಆಗಿದ್ದು, ಮಾಸ್ ಪ್ರಿಯರ ಮನ ಗೆದ್ದಿದೆ. ಇದೊಂದು ಔಟ್ ಅಂಡ್ ಔಟ್ ಮಾಸ್ ಸಿನಿಮಾ ವಾಗಿದ್ದು, ಬೆಂಗಳೂರು, ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಚಿತ್ರೀಕರಣ ನಡೆದಿದೆ. ಅಂಡರ್ ವರ್ಲ್ಡ್ ಹಿನ್ನೆಲೆಯಲ್ಲಿ ಸಾಗುವ ಈ ಸಿನಿಮಾದಲ್ಲಿ ಲವ್ ಸ್ಟೋರಿಯೂ ಬ್ಲೆಂಡ್ ಆಗಿದ್ದು, ಆದು ಸಂಜನಾ ಲವ್ ಯು ಸಂಜನಾ ಹಾಡಿನಲ್ಲಿಸಾಬೀತಾಗಿದೆ. ಟಗರು ಸಿನಿಮಾದಲ್ಲಿ ಡಾಲಿಯಾಗಿ ಅಬ್ಬರಿಸಿದ್ದ ಧನಂಜಂಯ್ ಇಲ್ಲಿ ಸಲಗದಲ್ಲಿ ಎಸಿಪಿ ಸಾಮ್ರಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಧನಂಜಯ್ ಖಡಕ್ ಪೊಲೀಸ್ ಆಫೀಸರ್ ಆಗಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ