ಹೊರ ರಾಜ್ಯದ ಚೀಟಿದಾರರಿಗೂ ಅಕ್ಕಿ -ಗೋಧಿ


Team Udayavani, Apr 3, 2020, 5:06 PM IST

GB-TDY-1

ಕಲಬುರಗಿ: ಕೋವಿಡ್ 19 ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಏಪ್ರಿಲ್‌ ಮತ್ತು ಮೇ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ವಿತರಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆರಂಭಿಸಿದ್ದು, ಸಂಕಷ್ಟದ ಸಮಯದಲ್ಲಿ ಎಲ್ಲ ಫಲಾನುಭವಿಗಳು ಲಾಭ ಪಡೆಯಲು ನಿಯಮಗಳನ್ನು ಸರಳೀಕರಣ ಮಾಡಲಾಗಿದೆ.

ಬಯೋಮೆಟ್ರಿಕ್‌ ಆಧಾರಿತ ಪಡಿತರ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರ ಬದಲು ಆಧಾರ್‌ ಕಾರ್ಡ್‌ ಆಧಾರಿತ ಮೊಬೈಲ್‌ ಓಟಿಪಿ ಮೂಲಕ ಪಡಿತರ ವಿತರಣೆಗೆ ಕ್ರಮ ವಹಿಸಲಾಗಿದೆ. ಆಧಾರ್‌ ಕಾರ್ಡ್‌ನ ಮೊಬೈಲ್‌ ಸಂಖ್ಯೆ ನೋಂದಣಿಯಾಗದೇ ಇದ್ದರೂ ಮತ್ತೂಬ್ಬ ಸದಸ್ಯರ ಮೊಬೈಲ್‌ ಸಂಖ್ಯೆ ಬಳಸಿಕೊಡು ಓಟಿಪಿ ಪಡೆಯಬಹುದಾಗಿದೆ. ಫಲಾನುಭವಿಗಳ ಯಾವ ಸದಸ್ಯರಲ್ಲೂ ಮೊಬೈಲ್‌ ಇಲ್ಲದೇ ಹೋದ ಸಂದರ್ಭದಲ್ಲಿ ಬಯೋಮೆಟ್ರಿಕ್‌ ಆಧಾರವಾಗಿಯೇ ಪಡಿತರ ಪಡೆಯಬಹುದಾಗಿದೆ.

ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿ ಇರುವುದರಿಂದ ಕೇವಲ ಪಡಿತರ ಕಾರ್ಡ್‌ ಸಂಖ್ಯೆ ಬಳಸಿ ಸಹ ಫಲಾನುಭವಿಗಳು ಪಡಿತರದ ಲಾಭ ಪಡೆದುಕೊಳ್ಳಬಹುದಾಗಿದೆ. ಕಾರ್ಡ್‌ ಸಂಖ್ಯೆ ಬರೆದುಕೊಂಡು ವಿಶೇಷ ಪ್ರಕರಣ ಎಂದು ಭಾವಿಸಿ ಮಾನವೀಯ ಆಧಾರದ ಮೇಲೆ ಪಡಿತರ ವಿತರಿಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ ಎನ್ನುತ್ತಾರೆ ಅಧಿಕಾರಿಗಳು.

ಕಾರ್ಡ್‌ಗಳ ಸಂಖ್ಯೆ: ಜಿಲ್ಲೆಯಲ್ಲಿ ಒಟ್ಟಾರೆ 5,43,986 ಕಾರ್ಡ್‌ಗಳು ಇದೆ. ಬಿಪಿಎಲ್‌ ಕಾರ್ಡ್‌ಗಳು 4,83,118, ಅಂತ್ಯೋದಯ ಕಾರ್ಡ್‌ 63,455 ಹಾಗೂ ಎಪಿಎಲ್‌ ಕಾರ್ಡ್ ಗಳು 15,546 ಕಾಡ್‌ಗಳು ಇದೆ. ಅದೇ ರೀತಿ ಬಿಪಿಎಲ್‌ ಕಾರ್ಡ್‌ದಾರರಿಗಾಗಿ 1,57,661 ಕ್ವಿಂಟಲ್‌ ಅಕ್ಕಿ, ಅಂತ್ಯೋದಯ ಕಾರ್ಡ್‌ದಾರರಿಗೆ 44,418 ಕ್ವಿಂಟಲ್‌ ಅಕ್ಕಿ ಮತ್ತು ಎಪಿಎಲ್‌ ಕಾರ್ಡ್ ದಾರರಿಗೆ 22,624 ಕ್ವಿಂಟಲ್‌ ಅಕ್ಕಿ ಸಂಗ್ರಹವಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಭಾರಿ ಉಪ ನಿರ್ದೇಶಕ ಡಿ.ಎಂ.ಪಾಣಿ ಮಾಹಿತಿ ನೀಡಿದ್ದಾರೆ.

ಜಿಲ್ಲಾದ್ಯಂತ 983 ನ್ಯಾಯ ಬೆಲೆ ಅಂಗಡಿಗಳಲ್ಲಿ ಇದೆ. ಎಲ್ಲ ಕಾರ್ಡ್‌ದಾರರಿಗೆ ಏಪ್ರಿಲ್‌ ಹಾಗೂ ಮೇ ಎರಡು ತಿಂಗಳ ಪಡಿತರ ವಿತರಿಸಲಾಗುತ್ತದೆ. ಬಿಪಿಎಲ್‌ ಕಾರ್ಡ್‌ದಾರರಿಗೆ ಪ್ರತಿಯೊಬ್ಬ ಸದಸ್ಯನಿಗೆ ಎರಡೂ ತಿಂಗಳು ಸೇರಿ ತಲಾ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡ್‌ಗೆ 4 ಕೆ.ಜಿ ಗೋ ಧಿ ವಿತರಣೆಯಾಗಲಿದೆ. ಪ್ರತಿ ಅಂತ್ಯೋದಯ ಕಾರ್ಡ್‌ದಾರರಿಗೆ ಒಟ್ಟು 70 ಕೆ.ಜಿ ಅಕ್ಕಿ ಹಂಚಿಕೆ ಆಗಲಿದೆ. ಎಪಿಎಲ್‌ ಕಾರ್ಡ್‌ದಾರರಿಗೂ ಅಕ್ಕಿ ವಿತರಣೆ ಮಾಡಲಾಗುತ್ತದೆ. ಎಪಿಎಲ್‌ ಕಾರ್ಡ್‌ದಾರರ ಒಬ್ಬ ಸದಸ್ಯರಿದ್ದರೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಒಬ್ಬರಿಗಿಂತ ಜಾಸ್ತಿ ಇದ್ದರೆ ಒಂದು ಕಾರ್ಡ್‌ಗೆ 10 ಕೆ.ಜಿ ಹಂಚಿಕೆ ಮಾಡಲಾಗುತ್ತದೆ. ಎಪಿಎಲ್‌ ಕಾರ್ಡ್‌ದಾರರ ಪ್ರತಿ ಕೆ.ಜಿ ಅಕ್ಕಿಗೆ 15 ರೂ. ನಿಗದಿ ಮಾಡಲಾಗಿದೆ. ಇವರು ಮುಂಚಿತವಾಗಿ ಪಡಿತರಕ್ಕಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿದರು.

ನ್ಯಾಯ ಬೆಲೆ ಅಂಗಡಿಯಲ್ಲಿ ಜನ ಗುಂಪು ಸೇರದಂತೆ ನಿಯಂತ್ರಿಸಲು ಬೆಳಗ್ಗೆ 50 ಕಾರ್ಡ್‌ದಾರರಿಗೆ ಹಾಗೂ ಸಂಜೆ 50 ಕಾರ್ಡ್ ದಾರರಿಗೆ ಮಾತ್ರ ಪಡಿತರ ವಿತರಿಸಲಾಗುತ್ತದೆ ಎಂದು ವಿವರಿಸಿದರು. ಬಯೋಮೆಟ್ರಿಕ್‌ ಯಂತ್ರ ಬಳಸುವಾಗ ಸಾರ್ವಜನಿಕರು ಸಹ ಕೈಯನ್ನು ಶುದ್ಧವಾಗಿ ತೊಳೆದುಕೊಂಡು ಹಾಗೂ ಯಂತ್ರದ ಸುತ್ತಮುತ್ತ ಶುಚಿತ್ವ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

ಒನ್‌ ಕಾರ್ಡ್‌, ಒನ್‌ ರೇಷನ್‌’ :  ಕೇಂದ್ರ ಸರ್ಕಾರದ “ಒನ್‌ ಕಾರ್ಡ್‌, ಒನ್‌ ರೇಷನ್‌’ ಪರಿಕಲ್ಪನೆ ಅಡಿ ಹೊರ ರಾಜ್ಯದ ಪಡಿತರ ಚೀಟಿದಾರರು ಕೂಡ ಪಡಿತರ ಪಡೆಯಬಹುದಾಗಿದೆ. ನೆರೆಯ ಮಹಾರಾಷ್ಟ್ರ, ತೆಲಂಗಾಣ ಮತ್ತು ಕೇರಳ ರಾಜ್ಯದಲ್ಲೂ “ಒನ್‌ ಕಾರ್ಡ್‌, ಒನ್‌ ರೇಷನ್‌’ ಅನುಷ್ಠಾನ ಮಾಡಿಕೊಂಡಿದ್ದು, ಆ ರಾಜ್ಯದ ಫಲಾನುಭವಿಗಳ ಸುಲಭವಾಗಿ ಪಡಿತರ ಪಡೆಯಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯಕ್ಕೆ ಅಕ್ಕಿ ಮಾತ್ರ ಲಭ್ಯ :  ಪ್ರತಿ ಕಾರ್ಡ್‌ದಾರರಿಗೆ ಅಕ್ಕಿ ಮತ್ತು ಗೋಧಿ ವಿತರಿಸಲಾಗುತ್ತದೆ. ಏ.1ರಿಂದಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಆರಂಭಿಸಲಾಗಿದೆ. ಆದರೆ, ನ್ಯಾಯಬೆಲೆ ಅಂಗಡಿಗಳಿಗೆ ಅಕ್ಕಿ ಮಾತ್ರ ಪೂರೈಕೆ ಆಗಿದೆ. ಗೋದಾಮುಗಳಿಂದ ಗೋಧಿ ಇನ್ನೂ ಸರಬರಾಜು ಆಗಿಲ್ಲ. ಆದ್ದರಿಂದ ಅಕ್ಕಿ ಬಯಸುವವರಿಗೆ ಮಾತ್ರವೇ ಪಡಿತರ ವಿತರಿಸಲಾಗುತ್ತದೆ.

ಕೋವಿಡ್ 19  ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಏಪ್ರಿಲ್‌ ಮತ್ತು ಮೇ ಎರಡು ತಿಂಗಳ ಅಕ್ಕಿ ಮತ್ತು ಗೋಧಿ ಪಡಿತರವನ್ನು ಒಟ್ಟಿಗೆ ವಿತರಿಸಲು ಇಲಾಖೆ ಆರಂಭಿಸಿದೆ. ಅಲ್ಲದೇ, ಇಲಾಖೆಯಿಂದ ಕಲಬುರಗಿ ನಗರದಲ್ಲಿ ಸುಮಾರು 800 ಜನ ನಿಗರ್ತಿಕರು, ಅನಾಥರು, ಅಲೆಮಾರಿಗಳಿಗೆ ಆಹಾರ ಧಾನ್ಯ ವಿತರಿಸಲಾಗುತ್ತದೆ.  –ಡಿ.ಎಂ.ಪಾಣಿ, ಪ್ರಭಾರಿ ಉಪ ನಿರ್ದೇಶಕ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.

 

ರಂಗಪ್ಪ ಗಧಾರ

ಟಾಪ್ ನ್ಯೂಸ್

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.