ನ್ಯಾಯಾಧೀಶರಿಂದ ನಗರ ಪ್ರದಕ್ಷಿಣೆ


Team Udayavani, Apr 4, 2020, 4:40 PM IST

ನ್ಯಾಯಾಧೀಶರಿಂದ ನಗರ ಪ್ರದಕ್ಷಿಣೆ

ಗದಗ: ಕೋವಿಡ್ 19 ವೈರಸ್‌ ತಡೆಗಾಗಿ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ನಿರಾಶ್ರಿತರು, ಬಡವರಿಗೆ ಜಿಲ್ಲಾಡಳಿತ ಪರಿಹಾರ ಕಾರ್ಯಗಳ ಪರಿಶೀಲನೆಗಾಗಿ ಶುಕ್ರವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿರದ ನ್ಯಾಯಾಧೀಶರು ನಗರದಲ್ಲಿ ಸುತ್ತಾಡಿ ಅವಲೋಕಿಸಿದರು.

ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಜಿ.ಎಸ್‌. ಸಂಗ್ರೇಶಿ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ನ್ಯಾ|ಎಸ್‌.ಜಿ. ಸಲಗರೆ ಅವರು ಜೊತೆಗೆ ಸತತ ಎರಡನೇ ದಿನವೂ ನಗರದಲ್ಲಿ ಪ್ರದಕ್ಷಿಣೆ ಹಾಕಿದರು. ಈ ವೇಳೆ ನಗರದ ತೋಂಟದಾರ್ಯ ಮಠ ಹಾಗೂ ಬೆಟಗೇರಿ ಅಂಡರ್‌ ಬ್ರಿಜ್ಡ್ ಬಳಿಕ ಕಂಡುಬಂದ ಇಬ್ಬರು ಭಿಕ್ಷುಕರ ಮನವೊಲಿಸಿದರು. ಅಲ್ಲದೇ ಇದ್ದ ಆಟೋವೊಂದರಲ್ಲಿ ಸ್ವ ಆಧಾರ ವೃದ್ಧಾಶ್ರಮಕ್ಕೆ ಕಳುಹಿಸಿಕೊಟ್ಟರು.

ಇದಕ್ಕೂ ಮುನ್ನ ಕಾರ್ಮಿಕ ಇಲಾಖೆ, ರೆಡ್‌ಕ್ರಾಸ್‌, ವಿವಿಧ ಆಟೋ ಚಾಲಕರು ಮತ್ತು ಮಾಲೀಕರ ಸಂಘ ಹಾಗೂ ನಗರಸಭೆ ಆಶ್ರಯದಲ್ಲಿ ನಗರದ ತೋಂಟದಾರ್ಯ ಮಠದ ಬಳಿ ನಡೆದ ಸುರಕ್ಷತ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು 50ಕ್ಕೂ ಹೆಚ್ಚು ಆಟೋ ಚಾಲಕರಿಗೆ ಮಾಸ್ಕ್, ಸ್ಯಾನಿಟೈಜರ್‌ ಹಾಗೂ ಕೊರೊನಾ ತಡೆಗಟ್ಟುವಿಕೆ ಕುರಿತು ಕರಪತ್ರವನ್ನು ಒಳಗೊಂಡ ಕಿಟ್‌ ವಿತರಿಸಿದರು.

ಪೌರ ಕಾರ್ಮಿಕರಿಗೆ ಸನ್ಮಾನ: ಗದಗ-ಬೆಟಗೇರಿ ನಗರಸಭೆ ಸ್ವಚ್ಛತಾ ಸಿಬ್ಬಂದಿಯನ್ನು ನಗರದ ಸರ್ವೋದಯ, ಡಾಲರ್ಸ್‌ ಕಾಲೋನಿಯಲ್ಲಿ ಜೈನ್‌ ಸಮಾಜದವರು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದರು. ಎಂದಿನಂತೆ ರಸ್ತೆ ಹಾಗೂ ಚರಂಡಿ ಸ್ವಚ್ಛತೆಯಲ್ಲಿ ತೊಡಗಿದ್ದ ನಗರಸಭೆ ಸಿಬ್ಬಂದಿಗೆ ಸ್ಥಳೀಯರು ಹಾರ ಹಾಕಿ, ಸನ್ಮಾನಿಸಿದರು.

 ವಾಹನಗಳ ನಿರ್ಬಂಧ: ಲಾಕ್‌ಡೌನ್‌ ಮಧ್ಯೆಯೂ ಕೆಲವರು ಮಾರುಕಟ್ಟೆ ಪ್ರದೇಶದಲ್ಲಿ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಲು ಪೊಲೀಸ್‌ ಇಲಾಖೆ ಎಲ್ಲೆಡೆ ಬ್ಯಾರಿಕೇಡ್‌ ಹಾಕಿದೆ. ಇಲ್ಲಿನ ಮಹೇಂದ್ರಕರ್‌ ಸರ್ಕಲ್‌, ಹಳೇ ಬಸ್‌ ನಿಲ್ದಾಣ, ಪಟೇಲ್‌ ರಸ್ತೆ, ಬಸವೇಶ್ವರ ಸರ್ಕಲ್‌, ಪಂಚರಹೊಂಡ, ಸರಾಫ್‌ ಬಜಾರ್‌ ಭಾಗದಲ್ಲಿ ವಾಹನಗಳಿಗೆ ತಡೆಯೊಡ್ಡಲಾಗಿದೆ. ಹೀಗಾಗಿ ನಾಮಜೋಶಿ ರಸ್ತೆಯಲ್ಲಿರುವ ಕಿರಾಣಿ ಅಂಗಡಿಗಳಿಗೆ ಆಗಮಿಸುವ ಜನರು ಬಹು ದೂರವೇ ತಮ್ಮ ವಾಹನ ನಿಲ್ಲಿಸಿ, ನಡೆದುಕೊಂಡು ಬರಬೇಕು. ಬೆಳಗ್ಗೆ 10 ಗಂಟೆ ಬಳಿಕ ಅವಳಿ ನಗರದ ಎಲ್ಲೆ ರಸ್ತೆಗಳು ಬಿಕೋ ಎನ್ನುತ್ತಿದ್ದವು.

ಮಾಂಸ ಮಾರಾಟ ಆರಂಭ: ವರ್ತಕರ ಮನವಿ ಮೇರೆಗೆ ಶುಕ್ರವಾರದಿಂದ ಮಾಂಸ ಮಾರಾಟ ಆರಂಭವಾಗಿದೆ. ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಂಡು, 700 ರೂ. ಕೆ.ಜಿ. ದರದಲ್ಲಿ ಮಾಂಸ ಖರೀದಿಸಿದರು. ನಗರದ ವಿವಿಧ ಬಡಾವಣೆಗಳಲ್ಲಿ ನ್ಯಾಯ ಬೆಲೆ ಅಂಗಡಿಕಾರರು ವಾಹನಗಳಲ್ಲಿ ಮನೆ ಬಾಗಿಲಿಗೆ ಪಡಿತರ ಒದಗಿಸಿದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.