ಜಿಂಕೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ದುಷ್ಕರ್ಮಿಗಳು: ಓರ್ವನ ಸೆರೆ
Team Udayavani, Apr 4, 2020, 6:42 PM IST
ಶಿವಮೊಗ್ಗ: ಎರಡು ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾರುತ್ತಿದ್ದ ದುಷ್ಕರ್ಮಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಓರ್ವನನ್ನು ಸೆರೆ ಹಿಡಿಯಲಾಗಿದೆ.
ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆಂಪಿನಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಎರಡು ಜಿಂಕೆಗಳನ್ನು ಭೇಟೆಯಾಡಿ ಮಾಂಸ ಮಾರಾಟ ಮಾಡಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಓರ್ವ ಆರೋಪಿ ಸೆರೆ ಹಿಡಿಯಲಾಗಿದ್ದು, ಇನ್ನೂ ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ದಾಳಿಯ ವೇಳೆ ಎರಡು ಜಿಂಕೆಗಳ ತಲೆಗಳು, ಎರಡು ಚರ್ಮ, ಎಂಟು ಕಾಲುಗಳು ಪತ್ತೆಯಾಗಿದ್ದು, ಜೊತೆಗೆ ಕೆಂಪಿನಕೊಪ್ಪದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಇನ್ನೂ ನಾಲ್ಕು ಜಿಂಕೆಗಳ ಚರ್ಮ, 8 ಜಿಂಕೆಗಳ ಕೊಂಬುಗಳು ಹಾಗೂ ಒಂದು ಕಾಡುಕೋಣದ ಕೊಂಬು ಪತ್ತೆಯಾಗಿದೆ.
ದಾಳಿ ವೇಳೆ ಆರೋಪಿ ಜಮೀರ್ ಅಹಮದ್ ಅರಣ್ಯ ಇಲಾಖೆ ಸಿಬ್ಬಂದಿ ಬಲೆಗೆ ಬಿದ್ದಿದ್ದು, ಪ್ರಕರಣದ ಪ್ರಮುಖ ಆರೋಪಿ ಹುವೇದ್ ಅಹಮದ್ ಸೇರಿದಂತೆ ಚಂದ್ರು, ರಾಘು, ಸಂತೋಷ್ ಪರಾರಿಯಾಗಿದ್ದಾರೆ.
ಡಿಎಫ್ ಒ ಶಂಕರ್, ಎಸಿಎಫ್ ಬಾಲಚಂದ್ರ, ಆರ್ ಎಫ್ ಒ ಗಳಾದ ಸಂಜಯ್, ರವಿ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದು, ಆಯನೂರು ವಲಯ ಅರಣ್ಯ ಕಚೇರಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ