ನಾಡದೋಣಿ ಮೀನುಗಾರರಿಗೆ ಕೇರಳದ ಭೀತಿ!


Team Udayavani, Apr 6, 2020, 6:20 AM IST

ನಾಡದೋಣಿ ಮೀನುಗಾರರಿಗೆ ಕೇರಳದ ಭೀತಿ!

ಬೆಂಗಳೂರು: ರಾಜ್ಯದ ನಾಡದೋಣಿ ಮೀನುಗಾರರಿಗೆ ಮೀನುಗಾರಿಕೆ ಮಾಡಲು ಅವಕಾಶ ಕೊಡುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸುತ್ತಿದೆ. ಆದರೆ ಕೇರಳದಿಂದ ಜನರು ಸಮುದ್ರ ಮಾರ್ಗವಾಗಿ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದೇ ಸರಕಾರಕ್ಕೆ ಕಗ್ಗಂಟಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳ ಲಕ್ಷಾಂತರ ಜನರು ನೇರ ಅಥವಾ ಪರೋಕ್ಷವಾಗಿ ಮೀನುಗಾರಿಕೆಯ ಮೇಲೆ ಅವಲಂಬಿತರಾಗಿದ್ದಾರೆ. ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮೀನು ಗಾರಿಕೆಯನ್ನು ಸರಕಾರ ಸದ್ಯದ ಮಟ್ಟಿಗೆ ನಿಷೇಧಿಸಿದೆ. ಈಗ ಸರ ಕಾರವೇ ಕೋಳಿ, ಕೋಳಿ ಮೊಟ್ಟೆ, ಮಾಂಸ, ಮೀನು, ಹಾಲು, ದ್ರವಸಾರಜನಕ ಮೊದಲಾದವುಗಳನ್ನು ಅಗತ್ಯ ವಸ್ತುಗಳೆಂದು ಘೋಷಿಸಿ, ಮೀನುಗಾರಿಕೆಗೆ ಅನುಮತಿ ನೀಡಿದೆಯಾದರೂ ಮೀನುಗಾರರಿಗೆ ಸಮುದ್ರಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮೀನು ಗಾರರಿಗೆ ಸ್ವಲ್ಪ ಮಟ್ಟಿನ ಅವಕಾಶ ಮಾಡಿಕೊಡಲು ಸರಕಾರ ಚಿಂತನೆ ನಡೆಸುತ್ತಿದೆ.

ನಾಡದೋಣಿ ಮೀನುಗಾರಿಕೆಗೆ ಅವಕಾಶ?
ಮಂಗಳೂರಿನಿಂದ ಕಾರವಾರದವರೆಗೂ ಸಾವಿರಾರು ನಾಡ ದೋಣಿಗಳಿವೆ. ಸಮುದ್ರದ ತೀರ ಭಾಗದಲ್ಲಿ ನಡೆಸುವ ನಾಡದೋಣಿ ಮೀನುಗಾರಿಕೆಯಿಂದ ಹಿಡಿದು ತಂದ ಮೀನುಗಳನ್ನು ಬಹುತೇಕವಾಗಿ ಸ್ಥಳೀಯ ಮಾರು ಕಟ್ಟೆಗೆ ಪೂರೈಸಲಾಗುತ್ತದೆ. ಹೀಗಾಗಿ ನಾಡದೋಣಿ ಮೀನುಗಾರಿಕೆಗೆ ಅವಕಾಶ ಮಾಡಿಕೊಡುವ ಬಗ್ಗೆ ಸರಕಾರ ಚಿಂತನೆ ನಡೆಸುತ್ತಿದೆ ಎನ್ನುತ್ತಾರೆ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು.

ಕೇರಳದಿಂದ ಅಪಾಯ
ನಾಡದೋಣಿ ಮೀನುಗಾರಿಕೆಗೆ ಅವಕಾಶ ನೀಡಿದರೆ ಕೇರಳದಿಂದ ಬಹುದೊಡ್ಡ ಅಪಾಯ ಕರ್ನಾಟಕ್ಕೆ ಎದುರಾಗುವ ಸಾಧ್ಯತೆಯಿದೆ. ಸದ್ಯ ಕರ್ನಾಟಕ ಮತ್ತು ಕೇರಳ ನಡುವಿನ ಎಲ್ಲ ರಸ್ತೆಗಳನ್ನೂ ಬಂದ್‌ ಮಾಡಲಾಗಿದೆ. ಮೀನುಗಾರಿಕೆ ಆರಂಭವಾದರೆ ಕಾಸರಗೋಡು ಮೊದಲಾದ ಭಾಗದಿಂದ ದೋಣಿ ಮೂಲಕ ಸುಲಭವಾಗಿ ಅಲ್ಲಿನ ಜನರು ಕರ್ನಾಟಕದ ಬಂದರುಗಳನ್ನು ಪ್ರವೇಶಿಸುವ ಸಾಧ್ಯತೆ ಇದೆ. ಮಂಗಳೂರು, ಮಲ್ಪೆ ಅಥವಾ ಗಂಗೊಳ್ಳಿ ಮೊದಲಾದ ದೊಡ್ಡ ಬಂದರು ಪ್ರವೇಶಿಸಲು ಸಾಧ್ಯವಾಗದೇ ಇದ್ದರೂ ಕಿರು ಬಂದರು ಅಥವಾ ಸಮುದ್ರ ತೀವ್ರತೆ ಈಗ ಕಡಿಮೆ ಇರುವುದರಿಂದ ನೇರವಾಗಿ ನಿರ್ಜನ ಪ್ರದೇಶದ ಸಮುದ್ರ ತೀರವನ್ನು ಸುಲಭವಾಗಿ ಪ್ರವೇಶಿಸಬಹುದು. ಹೀಗಾಗಿ ನಾಡದೋಣಿ ಮೀನುಗಾರಿಕೆಗೆ ಅವಕಾಶ ನೀಡುವ ಜತೆಗೆ ಈ ಎಲ್ಲ ಅಂಶಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುವ ಅಗತ್ಯವೂ ಇದೇ ಎಂದು ಮೂಲಗಳು ತಿಳಿಸಿವೆ.

ಆಳ ಸಮುದ್ರ ಮೀನುಗಾರಿಕೆಗೆ ಲಾಕ್‌ಡೌನ್‌ ಅನಂತರದ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ತೆಗೆದು ಕೊಳ್ಳಲಿದ್ದೇವೆ. ನಾಡದೋಣಿ ಮೀನುಗಾರಿಕೆಗೆ ಅವಕಾಶ ನೀಡಲು ಯೋಚನೆ ನಡೆಸುತ್ತಿದ್ದೇವೆ. ಆದರೆ ಕೇರಳದಿಂದ ಜನರು ಜಲಮಾರ್ಗವಾಗಿ ಕರ್ನಾಟಕ ಪ್ರವೇಶ ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಇವೆಲ್ಲವನ್ನು ಯೋಚಿಸಿ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ.
-ಕೋಟ ಶ್ರೀನಿವಾಸ ಪೂಜಾರಿ,
ಮೀನುಗಾರಿಕೆ ಸಚಿವ‌

ಟಾಪ್ ನ್ಯೂಸ್

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.