ವಲಸೆ ಕಾರ್ಮಿಕರ ನಿರಾಶ್ರಿತ ಶಿಬಿರಗಳ ಪರಿಶೀಲನೆ
ಲಾಕ್ಡೌನ್ ಮುಗಿಯುವವರೆಗೂ ಎಲ್ಲಿಗೂ ತೆರಳದೆ ಇಲ್ಲೇ ಇರುವಂತೆ ಅಧಿಕಾರಿಗಳ ಸೂಚನೆ
Team Udayavani, Apr 7, 2020, 1:34 PM IST
ಸಾಗರ: ತಾಲೂಕಿನ ತ್ಯಾಗರ್ತಿ ಹಾಗೂ ಬೇಡರಕೊಪ್ಪದ ವಲಸೆ ಕಾರ್ಮಿಕರ ನಿರಾಶ್ರಿತ ಶಿಬಿರಗಳಿಗೆ ಸೋಮವಾರ ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ| ನಾಗರಾಜ್ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು.
ಪ್ರಧಾನ ವ್ಯವಹಾರ ನ್ಯಾಯಾಧೀಶ ಸೈಯದ್ ಅರಾಫತ್ ಇಬ್ರಾಹಿಂ, ತಾಪಂ ಕಾರ್ಯನಿರ್ವಹಣಾಧಿ ಕಾರಿ ಪುಷ್ಪಾ ಎಂ. ಕಮ್ಮಾರ್, ಉಪತಹಶೀಲ್ದಾರ್ ಕಲ್ಲಪ್ಪ,
ವೈದ್ಯಾಧಿಕಾರಿ ಡಾ|ವಿನಾಯಕ್ ಭೇಟಿ ನೀಡಿ ಕಾರ್ಮಿಕರ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದರು. ತ್ಯಾಗರ್ತಿಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ನಲ್ಲಿ ಹಾವೇರಿ ಜಿಲ್ಲೆಯ 28 ಜನ, ಬೇಡರಕೊಪ್ಪದ ಸರ್ಕಾರಿ ಶಾಲೆಯಲ್ಲಿ 19 ಜನ ಕೂಲಿಕಾರ್ಮಿಕರು ಶುಂಠಿ ಕೆಲಸಕ್ಕೆ ಆಗಮಿಸಿದ್ದು ಲಾಕ್ಡೌನ್ ನಿಂದಾಗಿ ವಾಪಾಸ್ ಊರಿಗೆ ತೆರಳಲಾಗದೆ ಸರ್ಕಾರದ ನಿರಾಶ್ರಿತ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ. ಶಿಬಿರದಲ್ಲಿ ಸ್ವತ್ಛತೆ, ವಸತಿ ವ್ಯವಸ್ಥೆ ಹಾಗೂ ಆಹಾರ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಿದ ನಿಯೋಗ, ನಿರಾಶ್ರಿತರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ನೋಡಿಕೊಳ್ಳುತ್ತಿದೆ. ಭೌತಿಕ ಅಂತರವನ್ನು ಕಾಯ್ದುಕೊಂಡು ಲಾಕ್ ಡೌನ್ ಮುಗಿಯುವವರೆಗೆ ಎಲ್ಲಿಗೂ ತೆರಳದೆ ಇಲ್ಲಿಯೇ ಇರಲು ಸೂಚಿಸಿದರು.
ನ್ಯಾಯಾಧೀಶ ಸೈಯದ್ ಅರಾಫತ್ ಇಬ್ರಾಹಿಂ ಮಾತನಾಡಿ, ವಲಸೆ ಕಾರ್ಮಿಕರ ಸುರಕ್ಷತೆಯ ಬಗ್ಗೆ ಹೈಕೋರ್ಟ್ನಲ್ಲಿ ಮೇಲ್ಮನವಿ
ಸಲ್ಲಿಸಲಾಗಿದ್ದು ಹೈಕೋರ್ಟ್ನ ಆದೇಶದಂತೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಶೀಲನೆ ನಡೆಸಲು ಮುಂದಾಗಿದ್ದೇವೆ. ತಾಲೂಕಿನ 3 ಕಡೆ ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಲಾಗಿದ್ದು, ಗ್ರಾಮ ಪಂಚಾಯ್ತಿ ಉಸ್ತುವಾರಿಯಲ್ಲಿ ಸೌಲಭ್ಯ, ಊಟ ವಸತಿ ಸಮಾಧಾನಕರವಾಗಿದೆ ಎಂದರು.
ಎಸಿ ಡಾ| ನಾಗರಾಜ್ ನಾಯ್ಕ ಮಾತನಾಡಿ, ತಾಲೂಕಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 52 ಜನ ವಲಸೆ ಕಾರ್ಮಿಕರಿಗೆ ವಸತಿ ಕಲ್ಪಿಸಲಾಗಿದೆ.
ಆರೋಗ್ಯ ಇಲಾಖೆಯಿಂದ ಪ್ರತಿದಿನ ಆರೋಗ್ಯ ತಪಾಸಣೆ ನಡೆದಿದ್ದು, ಲಾಕ್ ಡೌನ್ ಮುಗಿಯುವವರೆಗೂ ಕಾರ್ಮಿಕರ ಸುರಕ್ಷತೆಗೆ ಅಗತ್ಯವಾದ ಸೌಕರ್ಯಗಳನ್ನು ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ತ್ಯಾಗರ್ತಿ, ಹಿರೇಬಿಲಗುಂಜಿ, ಹೊಸೂರು ಗ್ರಾಪಂ ಪಿಡಿಓಗಳಾದ ಮಂಜಾನಾಯ್ಕ, ಆಶ್ಪಾಕ್
ಅಹಮದ್, ರಾಜು, ವೈದ್ಯಾಕಾರಿ ಡಾ|ವಿನಾಯಕ್, ರೆವಿನ್ಯೂ ಇನ್ಸ್ಪೆಕ್ಟರ್ ರಘು, ಪಿಎಸ್ಐ ಭರತ್, ಕಾನೂನು ಸೇವಾ ಪ್ರಾಧಿಕಾರದ ವಕೀಲರಾದ ಸತೀಶ್ಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !