ಖಾಸಗಿ ವೈದ್ಯರಿಗೂ ಕೊರೊನಾ ಭೀತಿ 

ಸೋಂಕು ಹರಡುವ ಆತಂಕದಲ್ಲಿ ಕ್ಲಿನಿಕ್‌ | ಪರವಾನಗಿ ರದ್ದು ಎಚ್ಚಕೆಗೂ ಕ್ಯಾರೆ ಎನ್ನುತ್ತಿಲ್ಲ

Team Udayavani, Apr 7, 2020, 3:30 PM IST

07-April-20

ಬೀದರ: ದೇಶದಲ್ಲಿ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕು ಈಗ ವೈದ್ಯರ ಸೇವೆ ಮೇಲೂ ಪರಿಣಾಮ ಬೀರುತ್ತಿದೆ. ವೈರಸ್‌ ಭೀತಿಗೆ ಜಿಲ್ಲೆಯಾದ್ಯಂತ
ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್‌ ಆಗಿದ್ದು, ರೋಗಿಗಳು ಪರದಾಡುವಂತಾಗಿದೆ. ಕ್ಲಿನಿಕ್‌ಗಳನ್ನು ತೆರೆಯದಿದ್ದರೆ ಪರವಾನಗಿ ರದ್ದುಗೊಳಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರೂ ವೈದ್ಯರು ಕ್ಯಾರೆ ಎನ್ನುತ್ತಿಲ್ಲ.

ಮಹಾಮಾರಿ ಸೋಂಕು ಹರಡುವ ಭೀತಿ ಮತ್ತು ಲಾಕ್‌ಡೌನ್‌ ಹೇರಿಕೆ ಹಿನ್ನೆಲೆಯಲ್ಲಿ ಬಹುತೇಕ ಖಾಸಗಿ ಕ್ಲಿನಿಕ್‌ಗಳು ಬಂದ್‌ ಆಗಿವೆ. ಕೆಲವೆಡೆ ನರ್ಸಿಂಗ್‌
ಹೋಮ್‌ಗಳು ಮಾತ್ರ ತರೆದಿವೆ. ತುರ್ತು ಚಿಕಿತ್ಸೆ ನೀಡುತ್ತೇವೆ ಎಂದೆನ್ನುವ ವೈದ್ಯರು ವಾಸ್ತವವಾಗಿ ಗೇಟಿಗೆ ಬೀಗ ಹಾಕಿದ್ದಾರೆ. ಇದರಿಂದ ಜನ ಸಾಮಾನ್ಯರು ಆರೋಗ್ಯ ಸೇವೆ ಸಿಗದೆ ಕಂಗಾಲಾಗಿದ್ದಾರೆ. ಸದ್ಯ ಬೇಸಿಗೆ ದಿನಗಳಿದ್ದು, ದಿನ ಕಳೆದಂತೆ ತಾಪಮಾನ ಏರಿಕೆಯಾಗುತ್ತಿದೆ. ಉಷ್ಣಾಂಶದಿಂದ ಮಕ್ಕಳಲ್ಲಿ ಜ್ವರ, ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿವೆ. ವಯಸ್ಕರು ರಕ್ತದೊತ್ತಡ, ಮಧುಮೇಹ, ಕಣ್ಣಿನ ಸಮಸ್ಯೆ, ಸ್ನಾಯು ನೋವು ಸೇರಿದಂತೆ ಸಾಮಾನ್ಯ ರೋಗಗಳಿಗೆ ಖಾಸಗಿ ಆಸ್ಪತ್ರೆಗಳನ್ನೇ ಅವಲಂಬಿಸಿದ್ದು, ಚಿಕಿತ್ಸೆಗಾಗಿ ಹೋದರೆ ಬಾಗಿಲು ಹಾಕಿದ್ದನ್ನು ನೋಡಿ ವಾಪಸ್ಸು ಬರುವಂತಾಗಿದೆ. ಇನ್ನು ಕೆಲವರು ಸರ್ಕಾರಿ ಆಸ್ಪತ್ರೆಗಳ ಮೊರೆ ಹೋಗುತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ಚಿಕಿತ್ಸೆಯ ಸೇವೆಯಲ್ಲಿ ಸರ್ಕಾರಿ ವೈದ್ಯರು ತಮ್ಮನ್ನು ತೊಡಗಿಸಿಕೊಂಡಿದ್ದರಿಂದ ಆರೋಗ್ಯ ಸೇವೆ
ಪಡೆಯುವವರು ಗಂಟೆಗಟ್ಟಲೇ ಕಾಯುವಂತಾಗಿದೆ.

ಹೆಚ್ಚಿದ ಆತಂಕ: ಕೊರೊನಾ ವೈರಸ್‌ ವ್ಯಾಪಿಸುತ್ತಿರುವ ಕಾರಣ ರೋಗಿಗಳಿಗೆ ಚಿಕಿತ್ಸೆ ನೀಡಲು ವೈದ್ಯರು ಹಿಂಜರಿಯುತ್ತಿದ್ದಾರೆ. ಆಸ್ಪತ್ರೆಗೆ ಕೆಲವೊಮ್ಮೆ ಕುಟುಂಬದ ಮೂರ್‍ನಾಲ್ಕು ಜನರು ಬರುತ್ತಾರೆ. ಮುಂಜಾಗ್ರತಾ ಕ್ರಮ ಅನುಸರಿಸುವುದಿಲ್ಲ. ಅವರಲ್ಲಿ ಕೊರೊನಾ ಸೋಂಕಿತರು ಯಾರು ಎಂದು ಹೇಳಲು
ಸಾಧ್ಯವಿಲ್ಲ. ಈಚೆಗೆ ಕಲಬುರ್ಗಿಯಲ್ಲಿ ಮೃತಪಟ್ಟ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೂ ಸೋಂಕು ತಗುಲಿದ ಪ್ರಕರಣ ಬಳಿಕ ವೈದ್ಯರಲ್ಲಿ ಆತಂಕ ಹೆಚ್ಚಿಸಿದೆ. ಅಷ್ಟೇ ಅಲ್ಲ, ಜನರೂ ಲಾಕ್‌ಡೌನ್‌ ಕಾರಣ ಬರುತ್ತಿಲ್ಲ. ಜತೆಗೆ ಆಸ್ಪತ್ರೆಗಳ ಸಿಬ್ಬಂದಿಯೂ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಬೀದರ ನಗರದಲ್ಲಿ ಸುಮಾರು 50 ಮತ್ತು ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳಿವೆ. ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ
ಬೆರಳಣಿಕೆಯಷ್ಟು ಆಸ್ಪತ್ರೆಗಳು ಮಾತ್ರ ತೆಗೆದಿವೆ. ಕೆಲವೆಡೆ ಒಪಿಡಿ ಮಾತ್ರ ಬಂದ್‌ ಮಾಡಿದ್ದರೆ, ಇನ್ನು ಕೆಲ ಕ್ಲಿನಿಕ್‌ಗಳನ್ನು ಸಂಪೂರ್ಣ ಬಂದ್‌ ಮಾಡಲಾಗಿದೆ.
ಹೀಗಾಗಿ ಸಾಮಾನ್ಯ ರೋಗದಿಂದ ಬಳಲುತ್ತಿರುವವರು ಮೆಡಿಕಲ್‌ ಅಂಗಡಿಗಳಲ್ಲಿ ನೇರವಾಗಿ ಮಾತ್ರೆ ಪಡೆದು ತಾತ್ಕಾಲಿಕ ರಿಲೀಫ್‌ ಪಡೆಯುತ್ತಿದ್ದಾರೆ.

ಆಸ್ಪತ್ರೆಗಳನ್ನು ಬಂದ್‌ ಮಾಡಬೇಕೆಂದು ಐಎಂಎ ಸೂಚನೆ ನೀಡಿಲ್ಲ. ನಗರದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಲಭ್ಯವಿದೆ. ಆದರೆ, ದಿನದಲ್ಲಿ ಮೂರ್‍ನಾಲ್ಕು
ರೋಗಿಗಳೂ ಸಹ ಕ್ಲಿನಿಕ್‌ಗೆ ಬರುತ್ತಿಲ್ಲ. ಸಿಬ್ಬಂದಿಯೂ ಕೆಲಸಕ್ಕೆ ಆಗಮಿಸುತ್ತಿಲ್ಲ. ಹೀಗಾಗಿ ಕೆಲವೆಡೆ ಮಾತ್ರ ಒಪಿಡಿ ಆರಂಭಿಸಲಾಗಿದೆ. ಸೋಂಕಿತರು ಚಿಕಿತ್ಸೆಗೆ ಬರಬಹುದೆಂಬ ಆತಂಕವೂ ಇದೆ.
ಡಾ| ವಿ.ವಿ. ನಾಗರಾಜ, ಅಧ್ಯಕ್ಷರು, ಇಂಡಿಯನ್‌
ಮೆಡಿಕಲ್‌ ಅಸೋಸಿಯೇಷನ್‌, ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.