ಮಕ್ಕಳಿಗಾಗಿ ಕಾರ್ಯಕ್ರಮ ರೂಪಿಸಿ ಕಳುಹಿಸಿ


Team Udayavani, Apr 8, 2020, 11:55 AM IST

bng-tdy-3

ಬೆಂಗಳೂರು:  ಕೋವಿಡ್ 19 ಹಿನ್ನೆಲೆಯಲ್ಲಿ ಮನೆಯಲ್ಲಿರುವ ಮಕ್ಕಳ ಕ್ರಿಯಾಶೀಲತೆಯನ್ನು ಹೆಚ್ಚಿಸುವುದಕ್ಕಾಗಿ ಶಿಕ್ಷಣ ಇಲಾಖೆಯು ಯುಟ್ಯೂಬ್‌ ಚಾನಲ್‌ ಆರಂಭಿಸುತ್ತಿದೆ. ಶಿಕ್ಷಕರು, ಸಾಫ್ಟ್‌ವೇರ್‌ ತಂತ್ರಜ್ಞರು ಹಾಗೂ ಸಾರ್ವಜನಿಕರು ಈ ಅಭಿಯಾನಕ್ಕೆ ಕೈಜೋಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಮನವಿ ಮಾಡಿದ್ದಾರೆ.

ಕೋವಿಡ್ 19 ಭೀತಿ ಮಕ್ಕಳ ಶೈಕ್ಷಣಿಕ ಸಿದ್ಧತೆ ಹಾಗೂ ಕಲಿಕಾ ಸಾಮರ್ಥ್ಯವನ್ನು ಕಸಿದು ಕೊಳ್ಳುತ್ತಿದೆ. ಮಕ್ಕಳಲ್ಲಿ ಹೊಸ ಚೈತನ್ಯ ತುಂಬು ವುದಕ್ಕಾಗಿ ಯುಟ್ಯೂಬ್‌ ಚಾನಲ್‌ ಆರಂ ಭಿಸುವ ಆಲೋಚನೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಚಾನೆಲ್‌ ಮೂಲಕ ಪ್ರತಿ ದಿನ ಬೆಳಗ್ಗೆ ಒಂದು ಗಂಟೆ ಸಮಯ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಬಿತ್ತರಿಸುವ ಉದ್ದೇಶ ಹೊಂದಲಾಗಿದೆ. ಈ ಕಾರ್ಯಕ್ರಮಗಳು ಅತ್ಯಂತ ವೈಶಿಷ್ಟ್ಯ ಪೂರ್ಣವಾಗಿರಬೇಕು ಮಕ್ಕಳೊಂದಿಗೆ ಪೋಷಕರನ್ನೂ ಪ್ರೇರೇಪಿಸಬೇಕು. ಅಂದಾಜು 10 ರಿಂದ 15 ನಿಮಿಷಗಳ 4ರಿಂದ5 ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಚಿಂತನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿಡಿಯೋ ಮಾಡುವವರು ಏನು ಮಾಡಬೇಕು?: ಮಕ್ಕಳಿಗೆ ಸೂಕ್ತ ಹಾಗೂ ಸಮಂಜಸವೆನಿಸುವ ಯಾವುದೇ ಸಾಮಗ್ರಿಯನ್ನು ಸಿದ್ಧಪಡಿಸಬಹುದು. ವಿಡಿಯೋ ಸಾಮಗ್ರಿ 10ರಿಂದ 15 ನಿಮಿಷಗಳ ಗರಿಷ್ಠ ಅವಧಿಯುಳ್ಳದ್ದಾಗಿರಬೇಕು. ವಿವರಿಸಲಾಗುವ ವಿಷಯಗಳು ಹೊಸದಾಗಿದ್ದು, ಮಕ್ಕಳಲ್ಲಿ ಆಸಕ್ತಿ, ಕುತೂಹಲ ಹುಟ್ಟಿಸುವಂತಿರಬೇಕು ಹಾಗೂ ಕೆಲವು ಚಟುವಟಿಕೆಗಳನ್ನೂ ಒಳಗೊಂಡಿರಬೇಕು. ಸಿದ್ಧಪಡಿಸುವ ಸಾಮಗ್ರಿಗಳು ಪಠ್ಯಕ್ರಮಕ್ಕೆ ಸಂಬಂಧಿಸಿರುವ ಅಗತ್ಯವಿಲ್ಲ. ಕಾರ್ಯಕ್ರಮಗಳು ಏಕಮುಖವಾಗಿರಬಾರದು. ಕಥಾವಾಚನ, ಪುಸ್ತಕ ಪರಿಚಯ ಓದು, ಪ್ರಯೋಗಗಳು/ ಚಟುವಟಿಕೆಗಳು/ಮ್ಯಾಜಿಕ್‌ ಇತ್ಯಾದಿಗಳ ವಿವರಣೆಯುಕ್ತ ಪ್ರದರ್ಶನ, ಗಾದೆಗಳು, ಒಗಟುಗಳನ್ನು ಬಿಡಿಸುವ ವಿಡಿಯೋ ಮಾಡಬಹುದು.

ಕಾರ್ಯಕ್ರಮ ಸಿದ್ಧಪಡಿಸುವವರು ವಿಡಿಯೋ ದಾಖಲೀಕರಣಕ್ಕೆ ಡಿಎಸ್‌ಇಆರ್‌ಟಿ ಸ್ಟುಡಿಯೋ ಉಪಯೋಗಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಕಾರ್ಯಕ್ರಮಗಳ ನಿರೂಪಣೆಗೆ ನಟ,ನಟಿ, ಟೀವಿ ನಿರೂಪಕರು, ರೇಡಿಯೋ ಜಾಕಿಗಳೂ ತೊಡಗಿಸಿಕೊಳ್ಳಬಹುದು. ಕಾರ್ಯಕ್ರಮವನ್ನು ಮುಂದಿನ 50 ದಿನಗಳವರೆಗೆ ಪ್ರಸಾರ ಮಾಡಲಾಗುತ್ತದೆ. ವಿಡಿಯೋ ಸಾಮಗ್ರಿಯನ್ನು ಇ-ಮೇಲ್‌ [email protected] ಅಥವಾ ಗೂಗಲ್‌ ಡ್ರೈವ್‌, ವಾಟ್ಸ್‌ ಆ್ಯಪ್‌, ಟೆಲಿಗ್ರಾಮ್‌ ಮೂಲಕ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ- 080-22483040 ಅಥವಾ ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕ ಡಾ. ಎಂ.ಟಿ. ರೇಜು ಅವರನ್ನು ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.