ಕೋತಿಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದ ಸಿಪಿಐ ಎಂ.ನಾಗರಡ್ಡಿ


Team Udayavani, Apr 8, 2020, 12:56 PM IST

ಕೋತಿಗಳಿಗೆ ಆಹಾರ ನೀಡಿ ಮಾನವೀಯತೆ ಮೆರೆದ ಸಿಪಿಐ ಎಂ.ನಾಗರಡ್ಡಿ

ಯಲಬುರ್ಗಾ: ಕೊವಿಡ್-19 ವೈರಸ್ ಹರಡುವುದನ್ನು ತಡೆಗಟ್ಟಲು ಇಡೀ ದೇಶವನ್ನೇ ಲಾಕಡೌನ್ ಮಾಡಲಾಗಿದೆ. ಈ ಮಧ್ಯೆ ತಿನ್ನಲು ಆಹಾರ ಸಿಗದೇ ಅದೆಷ್ಟೋ ಮೂಕ ಪ್ರಾಣಿಗಳು ಬಳಲುತ್ತಿವೆ. ಹೀಗೆ ಹಸಿವಿನಿಂದ ರೋದಿಸುತ್ತಿದ್ದ ಕೋತಿಗಳಿಗೆ ಯಲಬುರ್ಗಾ ಪೋಲಿಸ್ ಠಾಣೆಯ ಸಿಪಿಐ ಎಂ.ನಾಗರಡ್ಡಿ ಆಹಾರ, ಬ್ರೆಡ್, ರೊಟ್ಟಿ, ಹಣ್ಣು, ನೀಡಿ ಮಾನವೀಯತೆ ಮೆರೆದಿದ್ದಾರೆ.

ಕೋವಿಡ್-19 ಪ್ರತಿಕೂಲ ಪರಿಣಾಮ ಬರೀ ಮನುಷ್ಯರಿಗಷ್ಟೇ ಅಲ್ಲದೇ ಇದೀಗ ಪ್ರಾಣಿಗಳಿಗೂ ತಟ್ಟುತ್ತಿದೆ. ತಾಲೂಕಿನ ಕೊಪ್ಪಳ-ಬೇವೂರು ಮಾರ್ಗ ಮಧ್ಯ ನೀಲಗಿರಿ, ಬೇವಿನಗಿಡದಲ್ಲಿ ನೂರಾರು ಕೋತಿಗಳು ಇವೆ. ಆ ಕೋತಿಗಳು ಆಹಾರವಿಲ್ಲದೇ ಪರದಾಡುವದನ್ನು ಗಮನಿಸಿದ ಯಲಬುರ್ಗಾ ಸಿಪಿಐ ಎಂ.ನಾಗರಡ್ಡಿ ಅವರು ಆಹಾರ, ಹಣ್ಣುಗಳನ್ನು ಸ್ವತ: ತಾವೇ ತಿನ್ನಿಸಿದ್ದಾರೆ. ಇದಕ್ಕೆ ಬೇವೂರು ಪಿಎಸ್‌ಐ ಶಂಕರ ನಾಯಕ ಹಾಗೂ ಪೋಲಿಸ ಸಿಬ್ಬಂದಿಗಳು ಕೈ ಜೋಡಿಸುತ್ತಿದ್ದಾರೆ. ಪೋಲಿಸರ ಕಾರ್ಯಕ್ಕೆ ವ್ಯಾಪಕ ಶ್ಲಾಘನೀಯ ವ್ಯಕ್ತವಾಗಿದೆ.

ಸಾರ್ವಜನಿಕರಿಂದ ಶ್ಲಾಘನೆ: ಯಲಬುರ್ಗಾ ಸಿಪಿಐ ಎಂ.ನಾಗರಡ್ಡಿ ಅವರ ಕಾರ್ಯಕ್ಕೆ ಶ್ಲಾಘನೀಯ ವ್ಯಕ್ತವಾಗಿದೆ. ಇತ್ತಿಚೆಗೆ ಸಿಪಿಐ ಅವರು ಬಹಳಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ತಾಲೂಕಿನಾದ್ಯಂತ ಲಾಕಡೌನ ಅನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದಾರೆ. ನಿತ್ಯ ಕೊರೊನಾ ನಿಮಿತ್ಯ ತಾಲೂಕಿನಾದ್ಯಂತ ಜಾಗೃತಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಈಚೆಗೆ ವೈರಸ್ ವಿರುದ್ದ ಕಿರುಚಿತ್ರವೊಂದನ್ನು ತಯಾರಿಸಿದ್ದಾರೆ. ಅದು ಮೇಲಾಧಿಕಾರಿಗಳಿಂದ ಹಾಗೂ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆಗೆ ವ್ಯಕ್ತವಾಗಿದೆ.

ಲಾಕಡೌನ್ ಹಿನ್ನೆಲೆ ಮಾರ್ಕೆಟ್ ಬಂದ್ ಆಗಿದೆ. ವ್ಯಾಪಾರಿಗಳು, ಪ್ರಯಾಣಿಕರು, ಜನತೆ ತಮ್ಮ ಬಳಿ ಉಳಿಯುತ್ತಿದ್ದ ತರಕಾರಿ ಅಥವಾ ಹಣ್ಣುಗಳನ್ನು ಸ್ಥಳದಲ್ಲಿ ಇರುತ್ತಿದ್ದ ಕೋತಿಗಳಿಗೆ ನೀಡುತ್ತಿದ್ದರು. ಹೀಗಾಗಿ ಸ್ಥಳದಲ್ಲಿದ್ದ ಕೋತಿಗಳ ಹೊಟ್ಟೆ ತುಂಬುತ್ತಿತ್ತು. ಆದರೆ ಬಂದ್ ಆಗಿರುವ ಹಿನ್ನಲೆಯಲ್ಲಿ ಕೋತಿಗಳಿಗೆ ಆಹಾರ ಸಿಗುತ್ತಿಲ್ಲ. ಹಸಿವಿನಿಂದ ಮೂಕ ಪ್ರಾಣಿಗಳು ರೋಧಿಸುತ್ತಿದ್ದ ದೃಶ್ಯವನ್ನು ಕಂಡು ಸಿಪಿಐ ಎಂ.ನಾಗರಡ್ಡಿ ಅವರು ಕೋತಿಗಳಿಗೆ ಹಣ್ಣು ತಿನ್ನಲು ನೀಡಿ ಅವುಗಳ ಹಸಿವು ನೀಗಿಸಿದ್ದಾರೆ. ಕೋತಿಗಳಿಗೆ ಕಲ್ಲಂಗಡಿ, ಬಾಳೆಹಣ್ಣು ಇತರೆ ಹಣ್ಣನ್ನು ನೀಡಿ ಹಸಿವು ನೀಗಿಸಿದ್ದಾರೆ. ಕೋತಿಗಳಿಗೆ ಆಹಾರ ನೀಡುವ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.