ಸಾರಿಗೆ ವಿಭಾಗಕ್ಕೆ 11 ಕೋಟಿ ರೂ. ನಷ್ಟ

ನಿತ್ಯ ಸರಾಸರಿ 50 ಲಕ್ಷ ರೂ. ಆದಾಯಕ್ಕೆ ಕೊಕ್ಕೆ  17 ದಿನದಿಂದ ರಸ್ತೆಗಿಳಿಯದ ಬಸ್‌

Team Udayavani, Apr 8, 2020, 7:23 PM IST

08-April-10

ರಾಯಚೂರು: ಬಸ್‌ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿರುವ ಕೇಂದ್ರ ಬಸ್‌ ನಿಲ್ದಾಣ

ರಾಯಚೂರು: ಕೊರೊನಾ ಹಾವಳಿಗೆ ಎಲ್ಲೆಡೆ ಬದುಕು ನಿಶ್ಚಲವಾಗಿದ್ದು, ಸರ್ಕಾರಕ್ಕೆ ಮುಖ್ಯವಾಗಿ ಆದಾಯ ಒದಗಿಸುತ್ತಿದ್ದ ಸಾರಿಗೆ ರಾಯಚೂರು ವಿಭಾಗ ಈವರೆಗೆ 11 ಕೋಟಿ ರೂ. ನಷ್ಟ ಎದುರಿಸಿದೆ. ನಿತ್ಯ ಸರಾಸರಿ ಏನಿಲ್ಲವೆಂದರೂ 50 ಲಕ್ಷ ರೂ. ಆದಾಯ ಬರುತ್ತಿತ್ತು. ಆದರೆ, ಮಾ.22ರಿಂದ ಸೇವೆ ಸಂಪೂರ್ಣ ಸ್ಥಗಿತಗೊಂಡಿದ್ದು, ಈವರೆಗೆ 8.5 ಕೋಟಿಗೂ ಅಧಿಕ ಹಾನಿಯಾಗಿದೆ. ಅದರ ಜತೆಗೆ ಯುಗಾದಿ ವೇಳೆ ಶ್ರೀಶೈಲಕ್ಕೆ ತೆರಳುವ ಭಕ್ತರಿಗಾಗಿ ವಿಶೇಷ ಸೇವೆ ನೀಡಲಾಗುತಿತ್ತು. ಅದರಿಂದ ಈ ವರ್ಷ 3 ಕೋಟಿ ರೂ. ಆದಾಯದ ನಿರೀಕ್ಷೆ ಹೊಂದಲಾಗಿತ್ತು. ಅದು ಕೂಡ ಕೈ ಕೊಟ್ಟಿದೆ.

ರಾಯಚೂರು ವಿಭಾಗದ ವ್ಯಾಪ್ತಿಯಲ್ಲಿ ಏಳು ಡಿಪೋಗಳಿದ್ದು, ಲಕ್ಸುರಿ, ಸಾಮಾನ್ಯ ಬಸ್‌ಗಳು ಸೇರಿ 660 ಬಸ್‌ಗಳು ಓಡಾಡುತ್ತಿವೆ. ಅದರಲ್ಲಿ ಆಂಧ್ರ, ತೆಲಂಗಾಣ ಕೂಡ ಸೇರಿವೆ. ಹೈದರಾಬಾದ್‌ನಲ್ಲಿ ಕೊರೊನಾ ಮೊದಲಿಗೆ ಕಂಡು ಬಂದ ಹಿನ್ನೆಲೆಯಲ್ಲಿ ಆಂಧ್ರ, ತೆಲಂಗಾಣದ ಬಸ್‌ ಸಂಚಾರ ಸ್ಥಗಿತಗೊಳಿಸಲಾಯಿತು. ಇದರಿಂದ ನಿತ್ಯ 8-10 ಲಕ್ಷ ನಷ್ಟ ಉಂಟಾಗುತ್ತಿತ್ತು. ಕ್ರಮೇಣ ಬೆಂಗಳೂರು ಸೇರಿದಂತೆ ದೂರದೂರುಗಳ ಬಸ್‌ ಸಂಚಾರ ನಿಲ್ಲಿಸಲಾಯಿತು. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಮಾ.22ರಂದು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ಈ ನಷ್ಟ ಇಲ್ಲಿಗೆ ನಿಲ್ಲುವುದಿಲ್ಲ. ಮೊದಲ ಲಾಕ್‌ಡೌನ್‌ ಏ.14ರ ವರೆಗೆ ಇರುವ ಕಾರಣ ಅಲ್ಲಿಯವರೆಗೂ ಸಂಚಾರ ಆರಂಭಗೊಳ್ಳುವ ಸಾಧ್ಯತೆ ಇಲ್ಲ. ಅಂದರೆ ಇನ್ನೂ 3.5 ಕೋಟಿ ರೂ. ಹಾನಿ ಖಚಿತವಾಗಿದೆ. ಅದಾದ ಬಳಿಕ ಪರಿಸ್ಥಿತಿ ಹೇಗಿರಲಿದೆ ಎಂಬುದರ ಮೇಲೆ ಲಾಭದ ನಿರೀಕ್ಷೆ ಹೊಂದಬಹುದು ಎನ್ನುತ್ತಾರೆ ಅಧಿಕಾರಿಗಳು.

ತುರ್ತು ಸೇವೆಗೆ ಲಭ್ಯ: ರಾಯಚೂರು ವಿಭಾಗದ ಎಲ್ಲ ಡಿಪೋಗಳಲ್ಲಿ 3200ಕ್ಕೂ ಅಧಿಕ ನೌಕರರಿದ್ದಾರೆ. ಈಗ ಕಚೇರಿ ಸಿಬ್ಬಂದಿ ಹೊರತುಪಡಿಸಿ ಎಲ್ಲ ಚಾಲಕ-ನಿರ್ವಾಹಕರಿಗೆ ರಜೆ ನೀಡಲಾಗಿದೆ. ತುರ್ತು ಸೇವೆಗೆಂದು ಚಾಲಕ, ಮೆಕ್ಯಾನಿಕ್‌ಗಳು ಸೇರಿ 10 ಜನ ಕೆಲಸ ಮಾಡುತ್ತಾರೆ. ತುರ್ತು ಸೇವೆ ಬೇಕಾದಾಗ ನೀಡಲು ಸಿದ್ಧರಿದ್ದೇವೆ. ಗುಳೆ ಹೋದವರನ್ನು ಕರೆ ತರಲು ಜಿಲ್ಲಾಡಳಿತ ಕೇಳಿದಲ್ಲಿ ವಾಹನ ವ್ಯವಸ್ಥೆ ಮಾಡಲು ಸಿದ್ಧ ಎನ್ನುತ್ತಾರೆ ವಿಭಾಗದ ಅಧಿಕಾರಿಗಳು.

ರಾಯಚೂರು ಸಾರಿಗೆ ವಿಭಾಗಕ್ಕೆ ನಿತ್ಯ ಸರಾಸರಿ 50 ಲಕ್ಷ ರೂ. ನಷ್ಟವಾಗುತ್ತಿದೆ. ಯುಗಾದಿ ಸೇರಿ ಮಾ.22ರಿಂದ ಈವರೆಗೆ 11 ಕೋಟಿಗೂ ಅಧಿಕ ಹಾನಿಯಾಗಿದೆ. ಸಂಪೂರ್ಣ ಸೇವೆ ಸ್ಥಗಿತಗೊಳಿಸಲಾಗಿದೆ.
ಜಿಲ್ಲಾಡಳಿತ ಈ ವೇಳೆ ತುರ್ತು ಸೇವೆಗೆ ನಮ್ಮ ಸೌಲಭ್ಯ ಕೇಳಿದರೆ ನೀಡಲು ಸಿದ್ಧ. ಈ ಬಗ್ಗೆ ಎಲ್ಲ ಸಿಬ್ಬಂದಿಗೂ ಈಗಾಗಲೇ ಸೂಚನೆ ನೀಡಲಾಗಿದೆ.
ವೆಂಕಟೇಶ,
ವಿಭಾಗೀಯ ನಿಯಂತ್ರಣಾಧಿಕಾರಿ,
ರಾಯಚೂರು

ಟಾಪ್ ನ್ಯೂಸ್

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.