ಕೊರೊನಾ ಹೆಚ್ಚದಂತೆ ಎಚ್ಚರ ವಹಿಸಿ

ಡಿಸಿಎಂ ಸವದಿ ಸೂಚನೆ ಲಾಕ್‌ಡೌನ್‌ ಮುಂದುವರಿಕೆ ರಾಜ್ಯಮಟ್ಟದಲ್ಲಿ ತೀರ್ಮಾನ

Team Udayavani, Apr 8, 2020, 12:59 PM IST

08-April-12

ಹೊಸಪೇಟೆ: ಕಮಲಾಪುರದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾತನಾಡಿದರು.

ಹೊಸಪೇಟೆ: ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 6ಕ್ಕೆ ಏರಿದ್ದು, ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಮಲಾಪುರದ ಮಯೂರ್‌ ಭುವನೇಶ್ವರಿ ಹೋಟಲ್‌ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಜಿಲ್ಲಾಡಳಿತ ಒಳ್ಳೆಯ ರೀತಿಯ ಕೆಲಸ ಮಾಡುತ್ತಿದೆ; ಆದರೂ ಪ್ರಕರಣಗಳು ದೃಢಪಟ್ಟಿರುವುದು ತಮ್ಮೆಲ್ಲರಿಗೂ ಪರೀಕ್ಷೆಯ ಕಾಲವಿದ್ದಂತೆ. ಆದ ಕಾರಣ ತಾವು ಸಾಮಾಜಿಕ ಅಂತರ, ಜನರು ಶಾಂತ ರೀತಿಯಿಂದ ಇರುವ ನಿಟ್ಟಿನಲ್ಲಿ ಕ್ರಮವಹಿಸುವುದು, ಜನರು ಗುಂಪುಗೂಡದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

ಉಪಕೇಂದ್ರಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಜರುಗಿಸಿ ಎಂದ ಅವರು, ನಿರ್ವಹಣೆ ಮತ್ತು ಸಾರಿಗೆ ವೆಚ್ಚವನ್ನು ಜಿಲ್ಲಾಡಳಿತದಡಿ ಭರಿಸಿ ಎಂದು ಡಿಸಿ ನಕುಲ್‌ ಗೆ ಸೂಚಿಸಿದರು. ರಾಜ್ಯದಲ್ಲಿ ಏ.14ರ ನಂತರವೂ ಲಾಕ್‌ ಡೌನ್‌ ಮುಂದುವರಿಸಬೇಕೇ ಅಥವಾ ಬೇಡವೇ ಅಥವಾ ಹಂತಹಂತವಾಗಿ ಕೈಬಿಡಬೇಕೇ ಎಂಬುದಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಡಿಎಂಎಫ್‌ ಅನುದಾನ ಬಳಕೆ ಚರ್ಚೆ: ಜಿಲ್ಲಾ ಖನಿಜ ನಿಧಿಯನ್ನು ಈ ಕೋವಿಡ್‌-19 ಸಂದರ್ಭದಲ್ಲಿ ಯಾವ
ರೀತಿ ಬಳಸಿಕೊಳ್ಳಬೇಕು ಮತ್ತು ಈಗ ಖರ್ಚು ಮಾಡಲಾಗಿರುವುದನ್ನು ಯಾವ ರೀತಿ ಪರಿವರ್ತಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಹಾಗೂ ಇದಕ್ಕಿರುವ ಕಾನೂನಿನ ತೊಡಕು ಮತ್ತು ಪರಿಹಾರ ಕುರಿತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳ ಮಟ್ಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಡಿಎಂಎಫ್‌ ನಿಧಿ ಅಡಿ ಶೇ.10ರಷ್ಟು ಅನುದಾನವನ್ನು ಕೋವಿಡ್‌-19 ಗಾಗಿ ಖರ್ಚು ಮಾಡಲು ಮಾ.28 ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ತಿಳಿಸಲಾಗಿದ್ದು, ಅದರಂತೆ ಅತ್ಯವಶ್ಯಕ ವೈದ್ಯಕೀಯ ಪರಿಕರಗಳು ಹಾಗೂ ಮಾಸ್ಕ್ ಖರೀದಿಸಲು ತೀರ್ಮಾನಿಸಲಾಗಿದ್ದನ್ನು ಡಿಸಿ ಎಸ್‌.ಎಸ್‌. ನಕುಲ್‌ ಸಭೆಯ ಗಮನಕ್ಕೆ ತಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಆನಂದಸಿಂಗ್‌, ಡಿಎಂಎಫ್‌ ಅಡಿ 62 ಕೋಟಿ ರೂ. ಉಳಿದಿದ್ದು, ಅದನ್ನು ಈ ಕೋವಿಡ್‌-19 ಸಂದರ್ಭದಲ್ಲಿ ತೀವ್ರ ತೊಂದರೆ ಅನುಭವಿಸುತ್ತಿರುವ ನಿರಾಶ್ರಿತರು, ನಿರ್ಗತಿಕರು ಮತ್ತು ಬಡವರಿಗೆ ರೇಷನ್‌ ಒದಗಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೆ 5 ಕೋಟಿ ರೂ. ಒದಗಿಸುವಂತೆ ಕೋರಿದರು.

ನಿಯಮಾವಳಿಯಲ್ಲಿ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ನಕುಲ್‌ ಹೇಳುತ್ತಿದ್ದಂತೆ, ಬಡವರು ತೀವ್ರ ತೊಂದರೆ ಅನುಭವಿಸುತ್ತಿರುವ ಈ ಸಂದರ್ಭದಲ್ಲಿ ನಾವು ಅವರಿಗೆ ನೆರವಾಗುವುದು ನಮ್ಮ ಕರ್ತವ್ಯ; ದಾಗದಿದ್ದರೆ ಹೇಗೆ ಎಂಬ ಧಾಟಿಯಲ್ಲಿ ಮಾತನಾಡಿದರು.

ಇದಕ್ಕೆ ಶಾಸಕ ಸೋಮಶೇಖರ್‌ ರೆಡ್ಡಿ, ನಾಗೇಂದ್ರ ಸೇರಿ ಕೆಲ ಶಾಸಕರು ದನಿಗೂಡಿಸಿದರು. ಮಧ್ಯಪ್ರವೇಶಿಸಿದ ಡಿಸಿಎಂ ಲಕ್ಷ್ಮಣ ಸವದಿ, ನಿಯಮಾವಳಿಗಳ ತಿದ್ದುಪಡಿ ಮತ್ತು ಕೋವಿಡ್‌-19 ಅಗತ್ಯ ಕಾಲದಲ್ಲಿ ರೇಷನ್‌ ಒದಗಿಸುವ ನಿಟ್ಟಿನಲ್ಲಿ ಈ ಡಿಎಂಎಫ್‌ ಹಣ ಬಳಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಹತ್ತಿರ ನಾನು ಮತ್ತು ಆನಂದಸಿಂಗ್‌ ಚರ್ಚಿಸುತ್ತೇವೆ. ಹಾಗೂ ಪ್ರಧಾನಮಂತ್ರಿ ಖನಿಜ ಕಲ್ಯಾಣ ನಿಧಿ ಅಡಿ ನಿಯಮಾವಳಿ ತಿದ್ದುಪಡಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಸಂಸದರಾದ ಸಂಗಣ್ಣ ಕರಡಿ, ವೈ.ದೇವೇಂದ್ರಪ್ಪ, ಶಾಸಕರಾದ ಸೋಮಶೇಖರ್‌ ರೆಡ್ಡಿ, ನಾಗೇಂದ್ರ, ಈ.ತುಕಾರಾಂ, ಸೋಮಲಿಂಗಪ್ಪ, ಎಸ್ಪಿ ಸಿ.ಕೆ. ಬಾಬಾ, ಜಿಪಂ ಸಿಇಒ ನಿತೀಶ್‌, ಡಿಎಚ್‌ಓ ಡಾ|ಜನಾರ್ಧನ್‌, ಆಹಾರ ಇಲಾಖೆ ಜಂಟಿ ನಿರ್ದೇಶಕ ರಾಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.