ಬೀದಿಗಿಳಿದವರಿಗೆ ಪೊಲೀಸರ ಲಾಠಿ ರುಚಿ

ಖುದ್ದು ರಸ್ತೆಗಳಿದ ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಹರೀಶ್‌ ಪಾಂಡೆಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ತಪಾಸಣೆ

Team Udayavani, Apr 8, 2020, 1:06 PM IST

08-April-13

ಚಿಕ್ಕಮಗಳೂರು: ಕೊರೊನಾ ಸೋಂಕು ತಡೆಗಟ್ಟಲು ರಾಜ್ಯಾದ್ಯಂತ ಲಾಕ್‌ಡೌನ್‌ ವಿಧಿಸಲಾಗಿದ್ದು, ಮಂಗಳವಾರ ಜಿಲ್ಲೆಯಲ್ಲೂ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮವನ್ನು ಇನಷ್ಟು ಬೀಗಿಗೊಳಿಸುವ ಮೂಲಕ ಜನರಿಗೆ ಬಿಸಿ ಮುಟ್ಟಿಸಿದೆ.

ನಗರದ ಪ್ರಮುಖ ರಸ್ತೆಗಳಲ್ಲಿ ಈಗಾಗಲೇ ಚೆಕ್‌ಪೋಸ್ಟ್‌ ನಿರ್ಮಿಸಿದ್ದು, ಪೊಲೀಸರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಶಾಮಿಯಾನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನಗರದ ಒಳ ಬರುವ ಮತ್ತು ಹೊರ ಹೋಗುವ ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕಾರಣವಿಲ್ಲದೇ ಸುತ್ತುವ ಬೈಕ್‌, ಕಾರು ಸವಾರರ ವಾಹನಗಳನ್ನು ಸೀಜ್‌ ಮಾಡಲಾಗುತ್ತಿದೆ. ಆಸ್ಪತ್ರೆ ಸೇರಿದಂತೆ ತುರ್ತು ಕಾರ್ಯಗಳಿಗೆ ತೆರಳುವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ವಾಹನ ಸಂಚಾರಕ್ಕೆ ಕಡಿವಾಣ ಹಾಕಲು ಖುದ್ದು ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಹರೀಶ್‌ ಪಾಂಡೆ ಅವರೇ ರಸ್ತೆಗಳಿದಿದ್ದು, ಮಂಗಳವಾರ ಬೆಳಿಗ್ಗೆ ನಗರದಿಂದ ಕೊಪ್ಪ ಮಾರ್ಗವಾಗಿ ಸಂಚರಿಸಿದ ಎಸ್‌ಪಿ ಹರೀಶ್‌ ಪಾಂಡೆ ಚೆಕ್‌ಪೊಸ್ಟ್‌ಗಳಿಗೆ ಭೇಟಿ ನೀಡಿ ಕರ್ಫ್ಯೂ ಪಾಸ್‌ ಹೊಂದಿರುವರನ್ನು ತಾಪಸಣೆಗೆ ಒಳಪಡಿಸುವಂತೆ ಪೊಲೀಸ್‌ ಸಿಬ್ಬಂದಿಗೆ ಸೂಚಿಸಿದ್ದಾರೆ. ನಕಲಿ ಪಾಸ್‌ ಹಾವಳಿ ಬಗ್ಗೆ ಸೋಮವಾರ ವರದಿಯಾಗಿದ್ದು, ಎಸ್‌ಪಿ ಖುದ್ದು ಆಲ್ದೂರು ಚೆಕ್‌ಪೋಸ್ಟ್‌ನಲ್ಲಿ ಪಾಸ್‌ ಉಳ್ಳವರನ್ನು ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.

ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಿರುವ ಹಿನ್ನೆಲೆಯಲ್ಲಿ ಅನಗತ್ಯ ಸಂಚರಿಸುವ ವಾಹನಗಳಿಗೆ ಕಡಿವಾಣ ಬಿದ್ದಿದ್ದು, ಪಡಿತರ ಪಡೆದುಕೊಳ್ಳಲು ಪಡಿತರ ಅಂಗಡಿಗಳ ಮುಂದೇ ಸಾಲು ನಿಲ್ಲುತ್ತಿದ್ದವರಿಗೆ ಕಡಿವಾಣ ಹಾಕಲು ಪೊಲೀಸರು ಹೆಣಗಾಡಿದ ದೃಶ್ಯಗಳು ಕಂಡು ಬಂದವು.

ರಾಜ್ಯ ಸರ್ಕಾರ ಎರಡು ತಿಂಗಳ ಪಡಿತರ ವಿತರಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲೂ ಪಡಿತರ ವಿತರಣೆ ಮಾಡಲಾಗುತ್ತಿದೆ. ಲಾಕ್‌ಡೌನ್‌ನಿಂದ ಸಾಮಾನ್ಯ ಜನತೆ ಕಷ್ಟಕ್ಕೆ ಸಿಲುಕಿದ್ದು, ಕೇಂದ್ರ ಸರ್ಕಾರ ಜನ್‌ಧನ್‌ ಖಾತೆಗೆ ಹಣ ಜಮಾ ಮಾಡಿದ್ದಾರೆಂಬ ಕಾರಣಕ್ಕೂ ನಗರದ ಕೆಲ ಬ್ಯಾಂಕ್‌ಗಳ ಮುಂದೇ ಮಹಿಳೆಯರು ಜಮಾಯಿಸಿದ್ದರು.

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿದಿನ ಬೆಳಿಗ್ಗೆ 5 ಗಂಟೆಗೆ ಕಾರ್ಯ ಚಟುವಟಿಕೆ ಆರಂಭಗೊಳ್ಳುತ್ತಿತ್ತು. ಜನಸಂದಣಿಯನ್ನು ನಿಯಂತ್ರಿಸಲು ಮಾರುಕಟ್ಟೆಯ ಸಮಯ ವನ್ನು 5 ಗಂಟೆಗೆ ಬದಲಾಗಿ 8 ಗಂಟೆಗೆ ಜಿಲ್ಲಾಡಳಿತ ಮತ್ತು ಕೃಷಿ ಉತ್ಪನ್ನ ಮಾರು ಕಟ್ಟೆ ಸಮಿತಿ 8 ಗಂಟೆಗೆ ಸಮಯ ನಿಗದಿ ಮಾಡಿ ಸಾಮಾಜಿಕ ಅಂತರ ಕಾಪಾಡಿ ಕೊಂಡು ವ್ಯಾಪಾರ ವಹಿವಾಟು ನಡೆಸುವಂತೆ ಸೂಚಿಸಲಾಗಿದೆ. ಆದೇಶ ಗಾಳಿಗೆ ತೂರಿ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಮುಗಿಬಿಳುತ್ತಿರುವ ಕಾರಣ ಜನರನ್ನು ನಿಯಂತ್ರಿ ಸಲು ಮಂಗಳವಾರ ಪೊಲೀಸರು ಲಾಠಿ ಬಿಸಿದ ಘಟನೆ ವರದಿಯಾಗಿದೆ. ಜಿಲ್ಲಾಡಳಿತ ಜನಸಂಚಾರ ನಿಯಂತ್ರಿಸಲು ಬಿಗಿ ಕ್ರಮ ಅನುಸರಿಸುತ್ತಿರುವ ಹಿನ್ನೆಲೆ ಅನಗತ್ಯ ಓಡಾಟಕ್ಕೆ ಬ್ರೇಕ್‌ ಬಿದ್ದಿದೆ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.