ಹೆಚ್ಚುವರಿ ಹಣ ಸಂಗ್ರಹಿಸಿದರೆ ಕ್ರಮ


Team Udayavani, Apr 8, 2020, 1:36 PM IST

kolar-tdy-2

ಮಾಲೂರು: ಮಾರಕ ಕೋವಿಡ್ 19 ಸೋಂಕಿನಿಂದ ರಾಷ್ಟ್ರ ಮತ್ತು ರಾಜ್ಯದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ನಿರ್ಮಾಣವಾಗಿದ್ದು, ಇಂತಹ ಪರಿಸ್ಥಿತಿಯ ಲಾಭ ಪಡೆಯದೇ ನ್ಯಾಯಬೆಲೆ ಅಂಗಡಿ ಮಾಲೀಕರು ಅರ್ಹರಿಗೆ ಪಡಿತರ ಧಾನ್ಯಗಳನ್ನು ಸಮರ್ಪಕವಾಗಿ ಒದಗಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ. ಗೋಪಾಲಯ್ಯ ಸೂಚಿಸಿದರು.

ಪಟ್ಟಣದ ಹೊರ ವಲಯದ ದ್ಯಾಪ ಸಂದ್ರದ ಬಳಿಯಲ್ಲಿ ಅದಾನಿ ಗೋಧಿ ಸಂಸ್ಕ ರಣ ಘಟಕಕ್ಕೆ ಭೇಟಿ ನೀಡಿ ಪಡಿತರ ಧಾನ್ಯಗಳ ಗೋಧಿ ಸಂಸ್ಕರಿಸುವ ಬಗ್ಗೆ ಹಾಗೂ ಚೀಲಗಳಿಗೆ ತುಂಬುವ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ ವೇಳೆ ಅವರು ಮಾತನಾಡಿದರು. ನ್ಯಾಯ ಬೆಲೆ ಅಂಗಡಿ ಮಾಲೀಕರು ಗ್ರಾಹಕರಿಂದ ಹೆಚ್ಚುವರಿಯಾಗಿ 10-20 ರೂ. ಸಂಗ್ರಹಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹವರ ಮೇಲೆ ಕ್ರಮ ಜರುಗಿಸುವುದಾಗಿ ಸಚಿವರು ಎಚ್ಚರಿಸಿದರು.

ತೂಕ ಪರಿಶೀಲನೆ: ಬಡ ಜನತೆಯ ಆಹಾರ ಭದ್ರತೆಗಾಗಿ ಸರ್ಕಾರ ನೀಡುತ್ತಿರುವ ಪಡಿತರ ಧಾನ್ಯ ಬಡ ಜನರ ಉಪಯೋಗಕ್ಕೆ ಯೋಗ್ಯವಾಗಿರಬೇಕು. ಆ ನಿಟ್ಟಿನಲ್ಲಿ ಸಂಸ್ಕರಣೆ ಮತ್ತು ಚೀಲ ತುಂಬುವ ಕಾರ್ಯದ ಜೊತೆಗೆ ನಿಗದಿತ ತೂಕ ಪರಿಶೀಲಿಸುತ್ತಿರುವುದಾಗಿ ತಿಳಿಸಿದರು.

10 ಜಿಲ್ಲೆಗೆ ಗೋಧಿ ಪೂರೈಕೆ: ರಾಜ್ಯದ 10 ಜಿಲ್ಲೆಗಳಿಗೆ ಇಲ್ಲಿಂದಲೇ 8300 ಮೆಟ್ರಿಕ್‌ ಟನ್‌ ಸಂಸ್ಕರಿಸಿದ ಗೋಧಿ ಸರಬರಾಜು ಮಾಡುತ್ತಿದ್ದು, ಇದುವರೆಗೂ 5 ಸಾವಿರ ಮೆಟ್ರಿಕ್‌ ಟನ್‌ ಗೋಧಿ ಸರಬರಾಜು ಮಾಡಲಾಗಿದ್ದು, ಉಳಿದ 3300 ಮೇ. ಟನ್‌ ಗೋಧಿ ಒಂದು ದಿನದಲ್ಲಿ ಪೂರೈಕೆಯಾಗುತ್ತದೆ ಎಂದರು.

ಓಟಿಪಿ ಇಲ್ಲದೆ ಧಾನ್ಯ ವಿತರಿಸುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ನ್ಯಾಯಾಬೆಲೆ ಅಂಗಡಿಗಳಿಗೆ ಮಾಹಿತಿ ರವಾನೆಯಾಗಿದೆ. ಅದರಂತೆ ವಿತರಣೆ ಆಗಲಿದೆ. ಲಾಕ್‌ಡೌನ್‌ ಮುಂದುವರಿಯುತ್ತದೆಯೇ ಎಂಬ ಪ್ರಶ್ನೆಗೆ ಈ ಬಗ್ಗೆ ಪ್ರಧಾನಿ ಮತ್ತು ಮುಖ್ಯಮಂತ್ರಿಗಳು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಪರಿಸ್ಥಿತಿಯ ಅವಲೋಕನದ ನಂತರ ಸೂಕ್ತ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ವಿ.ಮಂಜುಳಾ, ಆಹಾರ ಇಲಾಖೆಯ ಆಯುಕ್ತರಾದ ಶಂಮ್ಲ ಇಕ್ಬಾಲ್‌, ಉಪನಿದೇರ್ಶಕ ನಾಗರಾಜು ಕೆಳಗಿನಮನೆ, ವ್ಯವಸ್ಥಾಪಕ ಶಿವಣ್ಣ, ತಹಶೀಲ್ದಾರ್‌ ಮಂಜುನಾಥ್‌, ಆಹಾರ ನಿರೀಕ್ಷಕ ಚಂದ್ರಶೇಖರ್‌ ಇದ್ದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.