ಮಿತಿಮೀರುತ್ತಿದೆ covid-19: ಏ.14ರ ನಂತರ ಲಾಕ್ ಡೌನ್ ಮುಂದುವರಿಕೆ; ಪ್ರಧಾನಿ ಸುಳಿವು
ಕೋವಿಡ್ 19 ವೈರಸ್ ವೇಗವಾಗಿ ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಕುರಿತು ವಿರೋಧ ಪಕ್ಷಗಳ ಮುಖಂಡರ ಜತೆ ಚರ್ಚೆ
Team Udayavani, Apr 8, 2020, 5:37 PM IST
PM Narendra Modi
ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಮಾರಣಾಂತಿಕ ಕೋವಿಡ್ 19 ವೈರಸ್ ವೇಗವಾಗಿ ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಕುರಿತು ವಿರೋಧ ಪಕ್ಷಗಳ ಮುಖಂಡರ ಜತೆ ಚರ್ಚೆ ನಡೆಸಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ದೇಶಾದ್ಯಂತ ಏಪ್ರಿಲ್ 14ರ ನಂತರವೂ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿರುವುದಾಗಿ ವರದಿ ತಿಳಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಸಭೆ ನಡೆಸಿದ ವೇಳೆ, ಜನರಿಂದಲೂ ಬಹಳಷ್ಟು ಸಲಹೆಗಳು ಬಂದಿದೆ. ಅಲ್ಲದೇ ತಜ್ಞರು ಕೂಡಾ ಇನ್ನಷ್ಟು ದಿನ ಲಾಕ್ ಡೌನ್ ಮುಂದುವರಿಸುವಂತೆ ಸಲಹೆ ನೀಡಿರುವುದಾಗಿ ತಿಳಿಸಿದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್, ಎನ್ ಸಿಪಿಯ ಶರದ್ ಪವಾರ್ ಹೊರತುಪಡಿಸಿ ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಬಿಎಸ್ಪಿಯ ಸತೀಶ್ ಮಿಶ್ರಾ, ಲೋಕ್ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್, ಶಿರೋಮಣಿ ಅಕಾಲಿ ದಳದ ಸುಖ್ ಬೀರ್ ಸಿಂಗ್ ಬಾದಲ್, ಜನತಾದಳದ (ಯು) ರಾಜೀವ್ ರಾಜನಾಥ್ ಸಿಂಗ್, ಬಿಜು ಜನತಾ ದಳದ ಪಿನಾಕಿ ಮಿಶ್ರಾ, ಶಿವಸೇನಾದ ಸಂಜಯ್ ರಾವತ್, ಟಿಎಂಸಿ ಸುದೀಪ್ ಬಂಡೋಪಧ್ಯಾಯ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದರು.
ಈ ಎಲ್ಲಾ ನಾಯಕರಿಗೆ ವಿವಿಧ ಸಚಿವಾಲಯದ ಆರೋಗ್ಯ, ಗೃಹ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಟಕ್ಕೆ ಲಾಕ್ ಡೌನ್ ಎಷ್ಟು ಅಗತ್ಯ ಎಂಬ ಬಗ್ಗೆ ವಿವರ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್ಐಟಿಗೆ ಗೊತ್ತು: ಪರಮೇಶ್ವರ್
CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ
Prajwal Revanna ಗೆದ್ದರೆ ಎನ್ಡಿಎಯಿಂದ ಕ್ರಮ: ಆರ್. ಅಶೋಕ್
ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು