ಶಬೇಬರಾತ್ ಹಬ್ಬವನ್ನು ಮನೆಯಲ್ಲಿ ಆಚರಣೆಗೆ ಮುಸ್ಲಿಂ ಮುಖಂಡರ ಮನವಿ
Team Udayavani, Apr 8, 2020, 7:27 PM IST
ಗಂಗಾವತಿ: ಶೇಬೆ-ಎ-ಬರಾತ್ ಹಬ್ಬವನ್ನು ಮನೆಯಲ್ಲಿ ಸರಳವಾಗಿ ಆಚರಣೆ ಮಾಡುವಂತೆ ಜಮೀಯಾ ಮಸೀಯಾ ಮಸೀದಿ ಅಂದ್ರೂನ್ ಕಮೀಟಿ ಅಧ್ಯಕ್ಷ ನೂರುದ್ದೀನ್ ನವಾಬಸಾಬ ಮನವಿ ಮಾಡಿದ್ದಾರೆ.
ಉದಯವಾಣಿ ಜೊತೆ ಮಾತನಾಡಿದ ಅವರು, ಕೋವಿಡ್-19 ವೈರಸ್ ಹರಡದಂತೆ ಸರಕಾರ ವಿಧಿಸಿರುವ ಕರ್ಪ್ಯೂ ಹಿನ್ನಲೆಯಲ್ಲಿ ಗುಂಪು ಸೇರಿ ನಮಾಜ್ ಪ್ರಾರ್ಥನೆ ಮಾಡಲು ಅವಕಾಶವಿರುವುದಿಲ್ಲ. ಕೋವಿಡ್-19 ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು ಯಾರು ಸಹ ಮನೆಯಿಂದ ಹೊರಗೆ ಹೋಗದೇ ಮನೆಯಲ್ಲಿರಬೇಕಿದೆ ಎಂದರು.
ಶಬೇ ಎ ಬರಾತ್ ಹಬ್ಬ ಬಡಿರಾತ್ ದಿನದಂದು ಇಡೀ ರಾತ್ರಿ ಜಾಗರಣೆ ಮಾಡಿ ಆಚರಣೆಗೆ ಮಾಡಬೇಕು. ಯಾರೂ ಸಹ ಮಸೀದಿಗೆ ಬರಬಾರದು. ಮಸೀದಿಯಲ್ಲಿ ಮೂರರಿಂದ ನಾಲ್ಕು ಜನ ಭೌತಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಮಾಡಲಾಗುತ್ತದೆ ಎಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಅಕ್ತರ್ ಅನ್ಸಾರಿ, ಫಕೃದ್ದಿನ್ ಸಾಬ,ಸೈಯದಾಲಿ, ಶಾಮೀದ್ ಮನಿಯಾರ್,ಅನು ಜಿನ್ನಾ,ಶೇಖನಬಿ,ಅಯೂಬ್ ಖಾನ್ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !