ಹಾಲು ಉತ್ಪಾದಕರ ಮಹಾ ಮಂಡಳಿಯಿಂದ 5 ಕೋ. ರೂ.
Team Udayavani, Apr 9, 2020, 5:14 AM IST
ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ಮುಖ್ಯಮಂತ್ರಿ ಪರಿಹಾರ ನಿಧಿಗೆ 5 ಕೋ. ರೂ. ದೇಣಿಗೆ ನೀಡಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬುಧವಾರ ಭೇಟಿ ಮಾಡಿದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ನಿ. ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿ, 5 ಕೋ. ರೂ. ಗಳ ಚೆಕ್ ಹಸ್ತಾಂತರಿಸಿತು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಹಾಲು ಸಂಗ್ರಹ ಮತ್ತು ಮಾರಾಟದಲ್ಲಿ ತೊಡಗಿರುವ ಎಲ್ಲರಿಗೂ ಥರ್ಮಲ್ ಸ್ಕಿ$›àನಿಂಗ್ ಮಾಡಲಾಗುತ್ತಿದ್ದು, ಕೋವಿಡ್ 19 ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಗುತ್ತಿಗೆ ನೌಕರರನ್ನು ಉತ್ತೇಜಿಸುವ ಉದ್ದೇಶದಿಂದ ಹೆಚ್ಚುವರಿ ವೇತನ ನೀಡಲಾಗುತ್ತಿದೆ. ಚಾಲಕರಿಗೆ 500 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಅಲ್ಲದೆ ಪಶು ಆಹಾರ ಮಾರಾಟ ದರಕ್ಕೆ ಪ್ರತಿ ಟನ್ಗೆ ನೀಡುತ್ತಿರುವ 500 ರೂ. ರಿಯಾಯಿತಿಯನ್ನು ಎಪ್ರಿಲ್ವರೆಗೂ ವಿಸ್ತರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ