ಸೌಲಭ್ಯಗಳ ಮಾಹಿತಿ ಕೊಡಿ: ಹೈಕೋರ್ಟ್
Team Udayavani, Apr 9, 2020, 5:25 AM IST
ಬೆಂಗಳೂರು: ಕೋವಿಡ್ 19 ವೈರಸ್ ಸೋಂಕು ತಡೆಯಲು ಮತ್ತು ಸೋಂಕಿ ತರಿಗೆ ಚಿಕಿತ್ಸೆ ಕಲ್ಪಿಸಲು ಶ್ರಮಿಸುತ್ತಿರುವ ವೈದ್ಯರು, ನೌಕರರು ಮತ್ತು ಆಶಾ ಕಾರ್ಯಕರ್ತರ ಜೀವಕ್ಕೆ ರಕ್ಷಣೆ ಒದಗಿಸಲು ಹಾಗೂ ಅವರಿಗೆ ನೀಡಲಾಗುತ್ತಿರುವ ವೇತನ ಸಹಿತ ನ್ಯಾಯಯುತವಾಗಿ ದೊರೆಯಬೇಕಾದ ಇತರ ಸೌಲಭ್ಯ ಕಲ್ಪಿಸಲು ಕೈಗೊಂಡ ಕ್ರಮಗಳ ಕುರಿತು ವಿವರಣೆ ನೀಡುವಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಬುಧವಾರ ಧಾರವಾಡದ ವೈದ್ಯ ಡಾ|ರಾಜೀವ್ ರಮೇಶ್ ಗೋಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಎ. 9ಕ್ಕೆ ಮುಂದೂಡಿತು.