ಪೊಲೀಸ್ ಸರ್ಪಗಾವಲಲ್ಲಿ ಜನಜೀವನ
Team Udayavani, Apr 9, 2020, 5:06 PM IST
ಸಾಂದರ್ಭಿಕ ಚಿತ್ರ
ಮಳವಳ್ಳಿ: ಪಟ್ಟಣದಲ್ಲಿ ಕೋವಿಡ್ 19 ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಮೂರು ಕಿಲೋ ಮೀಟರ್ ವ್ಯಾಪ್ತಿ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಬಿಗಿ ಭದ್ರತೆಯಲ್ಲಿ ಜನಜೀವನ ಸಾಗಿದೆ.
ತಾಲೂಕಿನಲ್ಲಿ ಒಟ್ಟು 4 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪಟ್ಟಣದ ಮೂರು ಕಿ.ಮೀ. ವ್ಯಾಪ್ತಿಯನ್ನು “ನಿಯಂತ್ರಿತ ವಲಯ’ವಾಗಿ ಘೋಷಿಸಿದೆ. ಹೀಗಾಗಿ ಹೆಚ್ಚಿನ ಬಿಗಿ ಭದ್ರತೆ ಕಲ್ಪಿಸಿದ್ದು, ಯಾವುದೇ ವ್ಯಕ್ತಿಯೂ ಅನಗತ್ಯವಾಗಿ ಓಡಾಟ ನಡೆಸುವಂತಿಲ್ಲ. ಆದರೂ ಕೆಲವರು ರಸ್ತೆಗಿಳಿದಿದ್ದರಿಂದ ಅನಿರ್ವಾಯವಾಗಿ ಡಿವೈಎಸ್ಪಿ ಎಂ.ಜೆ.ಪೃಥ್ವಿ ಹಾಗೂ ಸಿಪಿಐ ರಮೇಶ್ ಜಂಟಿ ಕಾರ್ಯಾಚರಣೆ ನಡೆಸಿ ಲಾಠಿ ರುಚಿ ತೋರಿಸಬೇಕಾಯಿತು.
6 ಝೋನ್: ಅಗತ್ಯ ಸೇವೆಗಳನ್ನು ಜನರ ಮನೆ ಬಳಿಗೆ ತಲುಪಿಸಲು ಪುರಸಭೆ ಪಟ್ಟಣವನ್ನು 6 ಝೊàನ್ಗಳಾಗಿ ವಿಂಗಡಿಸಿ 38 ಅಂಗಡಿಗಳ ಮೂಲಕ ದಿನಸಿ ಸಾಮಗ್ರಿ ದೂರವಾಣಿ ಕರೆ ಮೂಲಕ ಸಾರ್ವಜನಿಕರು ಪಡೆದುಕೊಳ್ಳಬಹುದು. ತರಕಾರಿ ಜನರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಲು 11 ಮಂದಿಗೆ ಅನುಮತಿ ನೀಡಲಾಗಿದೆ. ಪಟ್ಟಣದ ಜನರು ಮನೆಯಿಂದ ಹೊರ ಬರದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಚೆಕ್ ಪೋಸ್ಟ್ಗಳು ಬಿಗಿ:ಪಟ್ಟಣದ ಈದ್ಗಾ ಮೊಹಲ್ಲಾ ಪ್ರದೇಶದ ಸುತ್ತಮುತ್ತಲಿನ 3 ಕಿ.ಮೀ.ವ್ಯಾಪ್ತಿಯನ್ನು ಪಟ್ಟಣದ ಪೊಲೀಸರು ಬ್ಯಾರಿಕೇಟ್ಗಳನ್ನು ಅಳವಡಿಸಿ ಯಾವುದೇ ವಾಹನ ಮತ್ತು ವ್ಯಕ್ತಿಯು ಓಡಾಟ ನಡೆಸದಂತೆ ಭದ್ರತೆ ಕಲ್ಪಿಸಿದೆ. ಚೆಕ್ಪೋಸ್ಟ್ ಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಿದ್ದು, ಅನು ಮತಿ ಪಡೆದಂತಹವವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ