ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ ತಿಂಗಳ ವೇತನ ದೇಣಿಗೆ ನೀಡಿದ ಅರಣ್ಯಾಧಿಕಾರಿ
Team Udayavani, Apr 9, 2020, 9:16 PM IST
ಯಲಬುರ್ಗಾ: ಕೋವಿಡ್ ಮಹಾಮಾರಿಯ ವಿರುದ್ಧ ದೇಶ ಮತ್ತು ರಾಜ್ಯಗಳ ಆಡಳಿತ ಯಂತ್ರಗಳು ಸರ್ವಸನ್ನದ್ಧವಾಗಿ ಕಾರ್ಯಾಚರಣೆ ನಡೆಸುತ್ತಿರುವ ಈ ವೇಳೆಯಲ್ಲಿ ಜನತೆ ತಮ್ಮ ಶಕ್ತ್ಯಾನುಸಾರ ದೇಣಿಗೆಗಳನ್ನು ನೀಡುವ ಮೂಲಕ ಕೋವಿಡ್ ಪರಿಹಾರ ನಿಧಿಗೆ ತಮ್ಮ ಕೈಲಾದ ಕೊಡುಗೆಯನ್ನೇ ನೀಡುತ್ತಿದ್ದಾರೆ.
ಇದಕ್ಕೊಂದು ನಿದರ್ಶನವೆಂಬಂತೆ ಯಲಬುರ್ಗಾ ತಾಲೂಕಿನ ಉಪವಲಯ ಅರಣ್ಯಾಧಿಕಾರಿ ಅಂದಪ್ಪ ಕುರಿ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ವೇತನವಾದ 21 ಸಾವಿರ ರೂಪಾಯಿಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಸಾಮಾಜಿಕ ಕಳಕಳಿಯನ್ನು ಮೆರೆದು ಇತರರಿಗೆ ಮಾದರಿಯಾಗಿದ್ದಾರೆ.
ಯಲಬುರ್ಗಾ ತಾಲೂಕು ಮಟ್ಟದ ಅಧಿಕಾರಿಗಳು ಮುಖ್ಯಂತ್ರಿಗಳ ಪರಿಹಾರ ನಿಧಿಗೆ ತಮ್ಮ ವೇತನದ ಭಾಗವನ್ನು ದೇಣಿಗೆಯಾಗಿ ನೀಡುವ ಮೂಲಕ ರಾಜ್ಯಕ್ಕೇ ಮಾದರಿಯಾಗುತ್ತಿದ್ದಾರೆ.
ಕೋವಿಡ್ ವೈರಸ್ ನಿಯಂತ್ರಣಕ್ಕೆ ನಾವೆಲ್ಲರೂ ನಮ್ಮ ಕೈಲಾದ ಸಹಾಯವನ್ನು ಮಾಡಬೇಕಿದೆ. ರಾಜ್ಯ ಎದುರಿಸುತ್ತಿರುವ ವಿವಿಧ ರೀತಿಯ ತೊಂದರೆಗಳ ನಿವಾರಣೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಈ ದೇಣಿಗೆಯನ್ನು ನೀಡುತ್ತಿದ್ದೇನೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ನೌಕರರೂ ಸ್ಪಂದಿಸಬೇಕು.
– ಅಂದಪ್ಪ ಕುರಿ, ಉಪ ವಲಯ ಅರಣ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ