ರುದ್ರಭೂಮಿ ಕಾರ್ಮಿಕನಿಂದ ಪಿಎಂ ನಿಧಿಗೆ ದೇಣಿಗೆ!
Team Udayavani, Apr 10, 2020, 5:58 AM IST
ಕೆ.ಆರ್.ಪುರ: ರುದ್ರಭೂಮಿಯಲ್ಲಿ ಶವಗಳನ್ನು ಸುಡುವ ಕಾಯಕಯೋಗಿ ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ತಮ್ಮ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಕೂಡಿಟ್ಟ 60 ಸಾವಿರ ರೂ.ಗಳನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ.
ಕೆ.ಆರ್.ಪುರ ಬಳಿ ಕಲ್ಪಳ್ಳಿಯ ಶ್ಮಶಾನದಲ್ಲಿ 32 ವರ್ಷಗಳಿಂದ ಶವಗಳನ್ನು ಸುಡುವ ಕಾಯಕ ಮಾಡುವ ಅಂತೋನಿ ಸ್ವಾಮಿ, ನಾಲ್ವರು ಮಕ್ಕಳು, ಪತ್ನಿ ಮತ್ತು ತಾಯಿಯೊಂದಿಗೆ ಜೀವನ ಸಾಗಿಸುತ್ತಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಪಿಯುಸಿ, ಮತ್ತೂಬ್ಬ ಹೆಣ್ಣು ಮಗಳು 9ನೇ ತರಗತಿ ಮತ್ತು ಪುತ್ರ ಹತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದ ವೆಚ್ಚಕ್ಕಾಗಿ ಶುಲ್ಕ ಭರಿಸಲು ಕೂಡಿಟ್ಟಿದ್ದ ಹಣವನ್ನು ಕೋವಿಡ್ 19 ವೈರಸ್ನಿಂದ ತತ್ತರಿಸುತ್ತಿರುವ ಜನರಿಗೆ ಸಹಾಯ ಮಾಡಲು ಪ್ರಧಾನಿ ಮಂತ್ರಿ ಪರಿಹಾರ ನಿ ಧಿಗೆ 60 ಸಾವಿರ ರೂ. ನೆರವು ನೀಡಿದ್ದಾರೆ. ಸರಕಾರದಿಂದ ತಮಗೆ ಬರುವ 10,000 ರೂ. ಗೌರವ ಧನದಲ್ಲಿ ಕುಟುಂಬ ನಿರ್ವಹಣೆ ನಡೆಸುತ್ತಿದ್ದು, ಕೋವಿಡ್ 19 ರೋಗಿಗಳಿಗಾಗಿ ಸಹಾಯ ಮಾಡಬೇಕೆಂದು ಮಕ್ಕಳು ಆಸೆ ವ್ಯಕ್ತಪಡಿಸಿ ಸಹಾಯ ಹಸ್ತ ಚಾಚೋಣ ಎಂದು ಹೇಳಿದ್ದರಿಂದ ದೇಣಿಗೆ ನೀಡಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ