ಬೇಸಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪೂರ್ವ ಸಿದ್ಧತೆ


Team Udayavani, Apr 10, 2020, 6:26 AM IST

ಬೇಸಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪೂರ್ವ ಸಿದ್ಧತೆ

ಉಡುಪಿ: ನಗರಸಭೆ ಹಾಗೂ ಆಸುಪಾಸಿನ ಗ್ರಾ.ಪಂ. ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಜಿಲ್ಲಾಡಳಿತ, ನಗರಸಭೆ ಮುನ್ನೆಚ್ಚರಿಕೆ ವಹಿಸಿದ್ದು, ಬಜೆ ಡ್ಯಾಂಗೆ ಪಂಪಿಂಗ್‌ ಆರಂಭಿಸಿದೆ.

ಪಂಚನಬೆಟ್ಟು ಪರಿಸರದಿಂದ ನೀರನ್ನು ಪಂಪ್‌ ಮೂಲಕ ಮೇಲಕ್ಕೆತ್ತಿ ಬಜೆ ಡ್ಯಾಮ್‌ಗೆ ಹರಿಸುವ ಕಾರ್ಯ ಗುರುವಾರದಿಂದ ಆರಂಭಗೊಂಡಿದೆ.ಹಿರಿಯಡ್ಕ ಗ್ರಾ.ಪಂ. ವ್ಯಾಪ್ತಿಯ ಪಂಚನಬೆಟ್ಟುವಿನಲ್ಲಿ ಐದು ಪಂಪ್‌ಗ್ಳ ಮೂಲಕ ಶಿರೂರು ಡ್ಯಾಮ್‌ ವರೆಗೆ ನೀರು ಹರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಶಾಸಕ ರಘುಪತಿ ಭಟ್‌, ನಗರಸಭೆಯ ಆಯುಕ್ತರು ಹಾಗೂ ಅಭಿಯಂತರು ಉಪಸ್ಥಿತರಿದ್ದರು. ಈಗ ಮೂರು ಪಂಪು ಅಳವಡಿಸಿ ನೀರನ್ನು ಮೇಲಕ್ಕೆತ್ತಿ ಶಿರೂರು ಡ್ಯಾಮಿಗೆ ಹರಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಶಿರೂರು ಡ್ಯಾಮ್‌ ಬಳಿ ಮತ್ತೆರಡು ಪಂಪ್‌ ಅಳವಡಿಸಿ ಒಟ್ಟು ಐದು ಪಂಪ್‌ಗ್ಳನ್ನು ಬಳಸಿನೀರು ಮೇಲಕ್ಕೆತ್ತಿ, ಡ್ಯಾಂಗೆ ಹರಿಸಲಾಗು ತ್ತದೆ. ಇದರಿಂದ ಬಜೆಯಲ್ಲಿಯೇ ನೀರಿನ ಸಂಗ್ರಹ ಹೆಚ್ಚಾಗಲಿದೆ. ಇಲ್ಲಿಂದ ಎಂದಿನಂತೆ ಪಂಪಿಂಗ್‌ ಮಾಡಿ ನೀರು ಸರಬರಾಜು ಆಗಲಿದೆ.

ನೀರಿನ ಲಭ್ಯತೆ ಬಗ್ಗೆ ಪರಿಶೀಲನೆ
ಬೇಸಗೆಯಲ್ಲಿ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಾಗಲೇ ಸಭೆ ನಡೆಸಿ ಮುಂದಿನ ಯೋಜನೆಯ ಬಗ್ಗೆ ಚರ್ಚಿಸಲಾಗಿದೆ. ಜನವರಿಯಲ್ಲಿ ಡ್ಯಾಂ ಇರುವ ಪ್ರದೇಶಕ್ಕೆ ಶಾಸಕ ರಘುಪತಿ ಭಟ್‌ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳುವಂತೆ ಸೂಚಿಸಿದ್ದರು.

ಬಜೆಯಲ್ಲಿ ಪ್ರಸ್ತುತ 4.49 ಮೀಟರ್‌ ನೀರಿದೆ. ಶಿರೂರಿನಲ್ಲಿ ನೀರು ಬಹುತೇಕ ಖಾಲಿಯಾಗಿದೆ. ಆದರೆ ಅಕ್ಕಪಕ್ಕದ 4-5
ಹೊಂಡಗಳಲ್ಲಿ ನೀರಿದೆ. ಇಲ್ಲಿಂದ ಪಂಪಿಂಗ್‌ ಮಾಡಲಾಗುತ್ತದೆ. ಇಲ್ಲವಾದರೆ ಈ ನೀರು ಬೇಸಗೆಯ ಬಿಸಿಗೆ ಬತ್ತಿ ಹೋಗಿ ಉಪಯೋಗಕ್ಕೆ ಸಿಗುವುದಿಲ್ಲ ಎಂದು ಈಗಲೇ ಪಂಪಿಂಗ್‌ ಮಾಡಿ ಇದನ್ನು ಡ್ಯಾಂನಲ್ಲಿ ಶೇಖರಿಸಿಡ ಲಾಗುತ್ತದೆ. ಸದ್ಯ ನೀರಿನ ಸಮಸ್ಯೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮಸ್ಯೆ ಎದುರಾಗುವ ಮೊದಲೇ ಪರಿಹಾರ
ನಗರ ಸಭೆಗೆ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಬರಬಾರದು ಅನ್ನುವ ಕಾರಣಕ್ಕೆ ಪೂರ್ವ ತಯಾರಿಗಳನ್ನು ಮಾಡಿಕೊಂಡಿದ್ದೇವೆ. ಕಳೆದ ವರ್ಷ ಮೇ ತಿಂಗಳ ಆರಂಭದಲ್ಲಿಯೇ ಸಂಪೂರ್ಣ ನೀರು ಖಾಲಿಯಾಗಿತ್ತು. ಈ ಬಾರಿ ಎಪ್ರಿಲ್‌ನಲ್ಲಿಯೇ ಬತ್ತಿ ಹೋಗುವ ಗುಂಡಿಗಳ ನೀರು ಶೇಖರಿಸಿ ನಿರಂತರ ನೀರು ಕೊಡುವ ವ್ಯವಸ್ಥೆ ಆಗಲಿದೆ. ಇಲ್ಲಿರುವ ನೀರು ಒಂದು ಬಾರಿ ಸಂಪರ್ಕ ಕಡಿತಗೊಂಡರೆ ಮತ್ತೆ ಬಜೆಗೆ ಹರಿಸಲು ಸಾಧ್ಯವಾಗುವುದಿಲ್ಲ. ಸಂಪರ್ಕ ಕಡಿತವಾಗುವ ಮೊದಲೇ ನೀರನ್ನು ಪಂಪಿಂಗ್‌ ಮಾಡಿ ಶಿರೂರಿಗೆ ಹರಿಸಬೇಕಿದೆ. ನೀರು ಖಾಲಿ ಆದ ಮೇಲೆ ಮಾಡಿದರೆ ಪ್ರಯೋಜನ ಆಗುವುದಿಲ್ಲ. ಸಮಸ್ಯೆ ಎದುರಾಗುವ ಮೊದಲೇ ಪರಿಹಾರ ಮಾರ್ಗಗಳನ್ನು ಕಂಡುಕೊಂಡಿದ್ದೇವೆ.
ರಘುಪತಿ ಭಟ್‌ , ಶಾಸಕರು, ಉಡುಪಿ

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.