ಸೋಂಕು ನಿವಾರಕ ಮಾರ್ಗಕ್ಕೆ ಚಾಲನೆ

ಇಂಜಿನಿಯರಿಂದ ಅತ್ಯಂತ ಕಡಿಮೆ ವೆಚ್ಚದಲ್ಲಿ ನಿರ್ಮಾಣಎರಡು ಭಾಗದಲ್ಲಿ ಕಾರ್ಯನಿರ್ವಹಣೆ

Team Udayavani, Apr 10, 2020, 11:19 AM IST

10-April-03

ಚಿತ್ರದುರ್ಗ: ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ರಚಿಸಿರುವ ಸೋಂಕು ನಿವಾರಕ ಮಾರ್ಗದಲ್ಲಿ ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹಾಗೂ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಸಂಚರಿಸಿದರು.

ಚಿತ್ರದುರ್ಗ: ನಗರದಲ್ಲಿ ಹೆಚ್ಚು ಜನ ಸೇರುವ ಜಾಗಗಳನ್ನು ಗುರುತಿಸಿ ಸೋಂಕು ನಿವಾರಕ ಮಾರ್ಗಗಳನ್ನು ನಿರ್ಮಿಸುತ್ತಿದ್ದು, ಈಗ ಎರಡು ಮಾರ್ಗಗಳು ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಿದ್ಧಪಡಿಸಿರುವ ಸೋಂಕು ನಿವಾರಕ ಮಾರ್ಗಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು. ಕೋವಿಡ್‌-19 ವೈರಸ್‌ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ತಮಿಳುನಾಡು ಹಾಗೂ ಮೈಸೂರುಗಳಲ್ಲಿ ಮಾಡಿರುವ ಪ್ರಯೋಗವನ್ನು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಡಿದ್ದು, ನಗರಸಭೆಯ ಇಂಜಿನಿಯರಗಳೇ ಸೇರಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಈ ಮಾರ್ಗ ನಿರ್ಮಿಸಿದ್ದಾರೆ ಎಂದರು.

ಈಗಾಗಲೇ ನಗರದ ಮುರುಘರಾಜೇಂದ್ರ ಮೈದಾನದಲ್ಲಿ ಸ್ಟೆ çನ್‌ಲೆಸ್‌ ಸ್ಟೀಲ್‌ ಬಳಸಿ 87 ಸಾವಿರ ವೆಚ್ಚದಲ್ಲಿ ಸೋಂಕು ನಿವಾರಕ ಮಾರ್ಗ ರಚಿಸಲಾಗಿತ್ತು. ಈಗ ಪ್ಲಾಸ್ಟಿಕ್‌ ಪೈಪ್‌ಗ್ಳನ್ನು ಬಳಸಿಕೊಂಡು 5 ಸಾವಿರ ವೆಚ್ಚದಲ್ಲೇ ಮತ್ತೂಂದು ಮಾರ್ಗವನ್ನು ಇಂಜಿನಿಯರುಗಳು ಸಿದ್ಧಪಡಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲೂ ಎರಡು ಸೋಂಕು ನಿವಾರಕ ಮಾರ್ಗ ಮಾಡಿಕೊಡಲು ಬೇಡಿಕೆ ಇದೆ. ಈ ಬಗ್ಗೆ ನಗರಸಭೆಯೊಂದಿಗೆ ಚರ್ಚಿಸಿದ್ದೇನೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ವೈರಸ್‌ ಪಾಸಿಟಿವ್‌ ಪ್ರಕರಣ ಪತ್ತೆಯಾಗಿಲ್ಲ. ಆದರೂ ಸಾರ್ವಜನಿಕರು ಸೋಂಕು ಹರಡದಂತೆ ತಡೆಯಲು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು. ಹೊರಗೆ ಬಂದರೂ ಸಾಮಾಜಿಕ ಅಂತರದ ಕಡೆ ಗಮನ ಇರಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಮಾತನಾಡಿ, ಕೋವಿಡ್‌-19 ಸಂಬಂಧಪಟ್ಟಂತೆ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಸೋಂಕು ನಿವಾರಕ ಮಾರ್ಗ ಮಾಡಲಾಗಿದೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿಗಾಗಿ ಕೆಲವರು ಮಾತ್ರ ಹೊರಗಡೆ ಬರುತ್ತಿದ್ದಾರೆ. ಸಾರ್ವಜನಿಕರು ಆದಷ್ಟು ಮನೆಯಲ್ಲಿ ಇರುವುದು ಉತ್ತಮ ಎಂದು ಹೇಳಿದರು. ಗ್ರಾಮೀಣ ಮತ್ತು ನಗರದ ಪ್ರದೇಶದ ವಾರ್ಡ್‌ ವ್ಯಾಪ್ತಿಗಳಲ್ಲಿ ಶಿಕ್ಷಕರನ್ನು ನಿಯೋಜನೆ ಮಾಡಿ, ಅಲ್ಲಿನ ಪ್ರದೇಶಗಳ ಕುಂದು ಕೊರತೆಗಳ ಮಾಹಿತಿ ಸಂಗ್ರಹಿಸಿ, ಸಮಸ್ಯೆಗಳ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದರು.

ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಮಾತನಾಡಿ, ಮಾರುಕಟ್ಟೆಗಳಲ್ಲಿ ಹೆಚ್ಚು ಜನಸಂದಣಿ ಇರುವುದರಿಂದ ಸೋಂಕು ನಿವಾರಕ ಮಾರ್ಗ ಅಳವಡಿಸಲಾಗಿದೆ. ಸಾರ್ವಜನಿಕರು ಇದೇ ಮಾರ್ಗದ ಮೂಲಕ ಸಂಚರಿಸಬೇಕು. ಈ ಮಾರ್ಗದಲ್ಲಿ ಸೋಡಿಯಂ ಹೈಪೊಕ್ಲೋರೈಡ್‌ ಹಾಗೂ ನೀರಿನಿಂದ ಸೋಂಕು ನಿವಾರಕ ದ್ರಾವಣವನ್ನು ಸಿದ್ಧಪಡಿಸಲಾಗಿದೆ. ಸೋಂಕು ನಿವಾರಕ ಮಾರ್ಗ ಬೆಳಗ್ಗೆ 4ರಿಂದ 9 ರವರೆಗೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ್‌ ಹಾಗೂ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.