ಲಾಕ್‌ಡೌನ್‌ಗೆ ಡೋಂಟ್‌ ಕೇರ್‌!

ಆದೇಶಕ್ಕಿಲ್ಲ ಕಿಮ್ಮತ್ತು ಕೆಲವೆಡೆ ಜನರ ದೌಲತ್ತು ಪೊಲೀಸರು ಸುಸ್ತೋ ಸುಸ್ತು

Team Udayavani, Apr 10, 2020, 1:39 PM IST

10-April-14

ಶಿವಮೊಗ್ಗ: ಕುವೆಂಪು ರಸ್ತೆಯಲ್ಲಿ ಕಂಡುಬಂದ ವಾಹನ, ಜನದಟ್ಟಣೆ

ಶಿವಮೊಗ್ಗ: ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಡೀ ದೇಶದಲ್ಲಿ ಲಾಕ್‌ಡೌನ್‌ ಘೋಷಿಸಲಾಗಿದ್ದರೂ ಶಿವಮೊಗ್ಗ ನಗರದಲ್ಲಿ ನಿಧಾನವಾಗಿ ಲಾಕ್‌ಡೌನ್‌ ತೆರವಾದಂತೆ ಕಾಣುತ್ತಿದೆ. ಲಾಕ್‌ಡೌನ್‌ ಘೋಷಣೆ ಮಾಡಿದ ದಿನದಿಂದಲೇ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಪ್ರತಿಯೊಬ್ಬರು ಆದೇಶವನ್ನು ಪಾಲಿಸಬೇಕು ತಪ್ಪಿದಲ್ಲಿ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿತ್ತು. ಈ ನಡುವೆ ಲಾಕ್‌ ಡೌನ್‌ ಉಲ್ಲಂಘಿಸಿ ರಸ್ತೆಗಿಳಿದ ದ್ವಿಚಕ್ರ ವಾಹನ ಸವಾರರಿಗೆ ಲಾಠಿ ಏಟು ಕೂಡ ಬಿದ್ದವು. ಒಂದೆರಡು ದಿನ ಈ ರೀತಿ ಪ್ರಯೋಗ ನಡೆದರೂ ಜನ ಇದಕ್ಕೂ ಬಗ್ಗಲಿಲ್ಲ.

ಎಲ್ಲ ಪ್ರಯತ್ನ ಮಾಡಿದ ಪೊಲೀಸರೂ ಕೊನೆಗೆ ಸುಮ್ಮನಾದರು. ಇದರ ಪರಿಣಾಮ ಎಂಬಂತೆ ಕ್ರಮೇಣ ನಗರದ ಬಿ.ಎಚ್‌. ರಸ್ತೆ, ನೆಹರು ರಸ್ತೆ, ದುರ್ಗಿಗುಡಿ, ಜೈಲ್‌ ರಸ್ತೆ, ವಿನೋಬನಗರ 100 ಅಡಿ ರಸ್ತೆ, ಸಾಗರ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗತೊಡಗಿದೆ. ಸಂಚಾರಿ ಪೊಲೀಸರು ಇದನ್ನು ನೋಡಿಯೂ ನೋಡದಂತೆ ಸುಮ್ಮನಾಗಿದ್ದಾರೆ. ಲಾಕ್‌ ಡೌನ್‌ ಜಾರಿಯಲ್ಲಿದ್ದರೂ ತರಕಾರಿ, ಹಾಲು, ಔಷಧ, ದಿನಸಿ ಸಾಮಗ್ರಿ ಮತ್ತಿತರ ಅಗತ್ಯ ವಸ್ತುಗಳ ಖರೀದಿಗೆ ಯಾವುದೇ ನಿರ್ಬಂಧ ಹೇರಿಲ್ಲ. ಆದರೆ ಸಾಮಾಜಿಕ ಅಂತರ ಕಾಯ್ದುಕೊಂಡು ಖರೀದಿ ಮಾಡಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ತರಕಾರಿ, ಹಾಲು, ದಿನಸಿ, ಔಷಧ ಖರೀದಿ ನೆಪದಲ್ಲಿ ಮನೆಯಿಂದ ಹೊರಬಂದು ರಾಜಾರೋಷವಾಗಿ ತಿರುಗಾಡುವುದು ಮುಂದುವರೆದಿದೆ.

ಇದಲ್ಲದೆ ಬೆಳಗ್ಗೆ ತಾಲೂಕಿನ ಯಾವುದೇ ಕೇಂದ್ರದಿಂದಲೂ ಸರಾಗವಾಗಿ ಓಡಾಡಬಹುದಾಗಿದೆ. ತಾಲೂಕು ಕೇಂದ್ರದಲ್ಲಿ ಚೆಕ್‌ಪೋಸ್ಟ್‌ ಇದ್ದರೂ ಅಲ್ಲಿ 24 ಗಂಟೆಯೂ ಸಿಬ್ಬಂದಿ ಇರುವುದಿಲ್ಲ. ಅಲ್ಲದೆ ಪ್ರಮುಖ ವ್ಯಾಪಾರ ಪ್ರದೇಶಗಳಲ್ಲಿ ಮಳಿಗೆಗಳು ನಿಧಾನಕ್ಕೆ ತೆರೆಯ ಲಾರಂಭಿಸಿದೆ. ಎಂದಿನಂತೆ ವ್ಯಾಪಾರ ವಹಿವಾಟು ನಡೆಸತೊಡಗಿದ್ದಾರೆ. ಇನ್ನು ಬ್ಯಾಂಕು, ಎಟಿಎಂ ಕೇಂದ್ರ, ಪಡಿತರ ಅಂಗಡಿಗಳ ಎದುರು ಜನಜಂಗುಳಿಯೇ ನೆರೆದಿರುತ್ತದೆ. ಹೆಚ್ಚಿನ ಕಡೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ನಿಯಮ ಧಿಕ್ಕರಿಸಲಾಗುತ್ತಿದೆ. ಜತೆಗೆ, ನಗರದ ಹೊರ ಭಾಗಗಳಲ್ಲಿ ಅಂಗಡಿ-ಮುಂಗಟ್ಟುಗಳು ಒಂದೊಂದಾಗಿ ತೆಗೆಯಲಾರಂಭಿಸಿವೆ.

ಕೊರೊನಾ ಎಂಬ ಮಾಹಾಮಾರಿ ಇನ್ನಿಲ್ಲದಂತೆ ಕಾಡುತ್ತಿದೆ. ರಾಜ್ಯದಲ್ಲೂ ಸೋಂಕು ಹೆಚ್ಚುತ್ತಿದ್ದು, ಎಲ್ಲೆಡೆ ಭೀತಿ ಮೂಡಿಸಿದೆ. ಇದನ್ನು ತಡೆಯಲೆಂದೇ ಲಾಕ್‌ಡೌನ್‌ ಇದ್ದರೂ ಜನ ಉದಾಸೀನತೆ ತೋರುತ್ತಿರುವುದು ಮಾತ್ರ ವಿಪರ್ಯಾಸ.

ಟಾಪ್ ನ್ಯೂಸ್

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.