ಇಂದಿರಾ ಕ್ಯಾಂಟೀನ್‌: ಜನರ ಇಳಿಮುಖ


Team Udayavani, Apr 11, 2020, 11:26 AM IST

ಇಂದಿರಾ ಕ್ಯಾಂಟೀನ್‌: ಜನರ ಇಳಿಮುಖ

ಬೆಂಗಳೂರು: ನಗರದ ಇಂದಿರಾ ಕ್ಯಾಂಟೀನ್‌ ಗಳು ಈಗ ಬಡವರಿಗೆ ಇನ್ನಷ್ಟು ಹತ್ತಿರವಾಗಿವೆ. ಆದರೆ, ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ ನೀಡಿದಾಗ ಇದ್ದ ಗ್ರಾಹಕರ ಸಂಖ್ಯೆ ಸದ್ಯ ಶೇ. 80ರಷ್ಟು ಕುಸಿದಿದೆ.

ಲಾಕ್‌ಡೌನ್‌ನಿಂದಾಗಿ ನಿಜವಾದ ಬಡ ಮತ್ತು ಕೂಲಿ ಕಾರ್ಮಿಕರು ತಿಂಡಿ ಹಾಗೂ ಊಟಕ್ಕೆ ಇಂದಿರಾ ಕ್ಯಾಂಟೀನ್‌ ಮೇಲೆ ಅವಲಂಬನೆಯಾಗುತ್ತಿದ್ದಾರೆ. ಉಚಿತ ಊಟ ನೀಡುತ್ತಿದ್ದ ಸಂದರ್ಭದಲ್ಲಿ ಪ್ರತಿ ಇಂದಿರಾ ಕ್ಯಾಂಟೀನ್‌ನಲ್ಲಿ 1.200  ರಿಂದ 1,500 ಜನ ಊಟಮಾಡುತ್ತಿದ್ದರು. ಸದ್ಯ ಈ ಸಂಖ್ಯೆ 200ರಿಂದ 300ಜನರಿಗೆ ಕುಸಿದಿದೆ.

ಆದರೆ, ಎನ್ನುತ್ತಾರೆ ಇಂದಿರಾ ಕ್ಯಾಂಟೀನ್‌ನ ಸಿಬ್ಬಂದಿ. ಇನ್ನು ಒಟ್ಟಾರೆ ಸಂಖ್ಯೆಯನ್ನು ನೋಡುವುದಾದರೆ, ಮಾ.23 ರಂದು ಉಚಿತ ಊಟ ನೀಡಲು ಪ್ರಾರಂಭಿಸಿದಾಗ 55, ಸಾವಿರ ಜನ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಮಾಡಿದ್ದು, 1,61,680 ಆಹಾರ ಪೊಟ್ಟಣಗಳನ್ನು ಹಂಚಲಾಗಿದೆ. ಏ.3ಕ್ಕೆ ಅಂದಾಜು 92 ಸಾವಿರ ಜನ ಇಂದಿರಾ ಕ್ಯಾಂಟೀನಲ್ಲಿ ಊಟ ಮಾಡಿದ್ದು, 2,78,985 ಆಹಾರ ಪೊಟ್ಟಣ ವಿತರಣೆ ಮಾಡಲಾಗಿದೆ.

ಆದರೆ, ದರ ನಿಗದಿ ಮಾಡಿದ ನಂತರ ಇಂದಿರಾ ಕ್ಯಾಂಟೀನ್‌ ನತ್ತ ಸಾರ್ವಜನಿಕರು ಹೆಜ್ಜೆ ಹಾಕುವುದು ಕಡಿಮೆಯಾಗಿದೆ. ಏ. 9ಕ್ಕೆ ಇಂದಿರಾ ಕ್ಯಾಂಟೀನ್‌ನಲ್ಲಿ 22,194 ಜನ ಊಟ ಮಾಡಿದ್ದು, 66,582 ಆಹಾರ ಪೊಟ್ಟಣಗಳನ್ನು ನೀಡಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋವಿಡ್ 19 ಸೋಂಕು ಹರಡುವುದನ್ನು ತಪ್ಪಿಸುವ ಉದ್ದೇಶದಿಂದ ಆಹಾರ ಪೊಟ್ಟಣ ನೀಡಲಾಗುತ್ತಿದೆ. ಸರ್ಕಾರ ಲಾಕ್‌ಡೌನ್‌ ಆದೇಶ ಹೊರಡಿಸಿದ ಮೇಲೆ ನಗರದಲ್ಲಿನ ಸಾವಿರಾರು ಬಡವರು, ನಿರಾಶ್ರಿತರು ಹಾಗೂ ಕೂಲಿ ಕಾರ್ಮಿಕರಿಗೆ ಕೂಡಲೇ ಊಟದ ವ್ಯವಸ್ಥೆ ಮಾಡುವಲ್ಲಿ ಇಂದಿರಾ ಕ್ಯಾಂಟೀನ್‌ ಪ್ರಮುಖ ಪಾತ್ರ ವಹಿಸಿತ್ತು. ಸ್ವಯಂ ಸೇವಕರು ಹಾಗೂ ಜನಪ್ರತಿನಿಧಿಗಳ ಉಚಿತ ಊಟ ನೀಡುವ ಮುನ್ನ ಇಂದಿರಾ ಕ್ಯಾಂಟೀನ್‌ ನೆರವಿಗೆ ಬಂದಿತ್ತು. ಈಗಾಗಲೇ ವ್ಯವಸ್ಥಿತ ಯೋಜನೆ ಇರುವುದರಿಂದಲೂ ಊಟ ನೀಡುವುದಕ್ಕೆ ಸಹಕಾರಿಯಾಯಿತು ಎನ್ನುತ್ತಾರೆ ಬಿಬಿಎಂಪಿ ಅಧಿಕಾರಿಗಳು. ಗುಣಮಟ್ಟದಲ್ಲಿ ಬದಲಾವಣೆ: ಇಂದಿರಾ ಕ್ಯಾಂಟೀನ್‌ನಲ್ಲಿ ನೀಡುತ್ತಿರುವ ಊಟದ ಪ್ರಮಾಣ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ ಮೇಲೆ ಇಂದಿರಾ ಕ್ಯಾಂಟೀನ್‌ ಊಟದ ಗುಣಮಟ್ಟದಲ್ಲೂ ಸಾಕಷ್ಟು ಬದಲಾವಣೆಯಾಗಿದೆ. ಸದ್ಯ ಊಟದಲ್ಲಿ ಬಟಾಣಿ, ತರಕಾರಿಗಳು ಸಿಗುತ್ತಿವೆ. ರುಚಿ ಮತ್ತು ಆಹಾರ ಪ್ರಮಾಣದಲ್ಲೂ ಬದಲಾವಣೆಯಾಗಿದೆ.

ಸಂಖ್ಯೆ ಕುಸಿಯಲು ಕಾರಣವೇನು? :  ಇಂದಿರಾ ಕ್ಯಾಂಟೀನ್‌ನಲ್ಲಿ ಸಾರ್ವಜನಿಕರು ಉಪಹಾರ ಮತ್ತು ಊಟ ಮಾಡದೆ ಇರುವುದಕ್ಕೆ ದರ ನಿಗದಿ ಮಾಡಿರುವುದರ ಜೊತೆಗೆ ಸ್ವಯಂ ಸೇವಾ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗೂ ಹಲವು ಸ್ವಯಂ ಸೇವಕರು ಸದ್ಯ ಉಚಿತ ಊಟ ನೀಡಲು ಪ್ರಾರಂಭಿಸಿರುವುದು ಇಂದಿರಾ ಕ್ಯಾಂಟೀನ್‌ನತ್ತ ಬರುವ ಗ್ರಾಹಕರ ಸಂಖ್ಯೆ ಕುಸಿಯಲು ಕಾರಣವಾಗಿರುವ ಸಾಧ್ಯತೆ ಇದೆ. ಈ ಮಧ್ಯೆ ನಗರದ ಹಲವೆಡೆ ಸಾರ್ವಜನಿಕರು ಇಂದಿರಾ ಕ್ಯಾಂಟೀನ್‌ನಿಂದ ಆಹಾರ ಖರೀದಿಸಿ ಬಡವರಿಗೆ ಹಂಚುತ್ತಿದ್ದಾರೆ. ಹೊಂಬೇಗೌಡ ನಗರ ವಾರ್ಡ್‌ನ ಸ್ಥಳೀಯರಾದ ರಾಜು ಎಂಬವರು ಮತ್ತು ಅವರ ಸ್ನೇಹಿತರು ಐದಾರು ಜನ ಬಡವರಿಗೆ ನಿತ್ಯ ಇಂದಿರಾ ಕ್ಯಾಂಟೀನ್‌ನಲ್ಲಿ ಹಣ ನೀಡಿ ಆಹಾರ ಪೊಟ್ಟಣ ಖರೀದಿಸಿ ಹಂಚುತ್ತಿದ್ದಾರೆ.

ಇಂದಿರಾ ಕ್ಯಾಂಟೀನ್‌ನಲ್ಲಿ ದರ ನಿಗದಿ ಮಾಡಿದ ಮೇಲೆ ರಸ್ತೆ ಬದಿಯಲ್ಲಿದ್ದ ಹಲವು ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗುತ್ತಿರುವುದು ಗೊತ್ತಾಗಿ, ಸ್ವಂತ ಖರ್ಚಿನಲ್ಲಿ ಖರೀದಿಸಿ ಹಂಚುತ್ತಿದ್ದೇನೆ. –  ರಾಜು, ಹೊಂಬೇಗೌಡ ವಾರ್ಡ್‌, ಸ್ಥಳೀಯ ನಿವಾಸಿ

 

-ಹಿತೇಶ್‌ ವೈ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.