ನಗರದ ಕಾಮಗಾರಿಗಳ ಹಣ ಪಾವತಿಗೆ ಬ್ರೇಕ್‌

ಮಾ. 28ರಿಂದ ಏ.2ರವರೆಗೆ ಸುಮಾರು 450 ಕೋಟಿ ಬಿಡುಗಡೆ

Team Udayavani, Apr 11, 2020, 11:48 AM IST

ನಗರದ ಕಾಮಗಾರಿಗಳ ಹಣ ಪಾವತಿಗೆ ಬ್ರೇಕ್‌

ಸಾಂದರ್ಭಿಕ ಚಿತ್ರ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಆಹಾರ ವಿತರಣೆ ಸ್ಥಗಿತಗೊಳಿಸಿದ ಬೆನ್ನಲ್ಲೇ ನಿಯಮ  ಬಾಹಿರ ಹಣ ಬಿಡುಗಡೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆ ಅಡಿ ಕೈಗೆತ್ತಿಕೊಂಡ ಕಾಮಗಾರಿಗಳಿಗೆ ಪಾವತಿಸಬೇಕಾದ ಹಣಕ್ಕೆ ಸರ್ಕಾರ ಬ್ರೇಕ್‌ ಹಾಕಿದೆ.

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್‌)ದ ಮೂಲಕ ನಿರ್ವಹಿಸುತ್ತಿರುವ ಬಿಬಿಎಂಪಿ ಕಾಮಗಾರಿಗಳಿಗೆ ಪಾವತಿಸಬೇಕಾದ ಹಣಕ್ಕೆ ತಡೆ ನೀಡಲಾಗಿದೆ. ನವ ನಗರೋತ್ಥಾನ ಯೋಜನೆ ಅಡಿ ಸುಮಾರು 1,800 ಕೋಟಿ ಮೊತ್ತದ ವಿವಿಧ ಪ್ರಕಾರದ ಕಾಮಗಾರಿಗಳನ್ನು ಬಿಬಿಎಂಪಿಯು ಕೆಆರ್‌ಐಡಿಎಲ್‌ಗೆ ನೀಡಿದೆ. ಆದರೆ, ಸದ್ಯದ ಮಟ್ಟಿಗೆ ಈ ಮೊತ್ತದಲ್ಲಿ ಕೈಗೆತ್ತಿಕೊಂಡ ಎಲ್ಲ ಕಾಮಗಾರಿಗಳಿಗೆ ಪಾವತಿಸಬೇಕಾದ ಹಣವನ್ನು ಕೂಡಲೇ ನಿಲ್ಲಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಸಂಬಂಧ ಈಚೆಗೆ ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಕೋವಿಡ್ 19 ವೈರಸ್‌ ಹಾವಳಿಯಿಂದ ಇಡೀ ನಗರವೇ ಮಾರ್ಚ್‌ 23ರಿಂದ ಈಚೆಗೆ ಲಾಕ್‌ಡೌನ್‌ ಆಗಿದೆ. ಎಲ್ಲ ಕಾಮಗಾರಿಗಳೂ ಸ್ಥಗಿತಗೊಂಡಿವೆ. ಇದರ ನಡುವೆಯೂ ಮಾರ್ಚ್‌ ಕೊನೆಯ ವಾರದಿಂದ ಈವರೆಗೆ ಕೆಆರ್‌ಐಡಿಎಲ್‌ಗೆ ಪಾಲಿಕೆಯು ಅಂದಾಜು 450 ಕೋಟಿ ರೂ. ಪಾವತಿ ಮಾಡಿದೆ. ಈ ಪೈಕಿ ಏಪ್ರಿಲ್‌ 1ರಿಂದ ಈಚೆಗೆ 200 ಕೋಟಿಗೂ ಅಧಿಕ ಹಣವನ್ನು ಪಾವತಿಸಲಾಗಿದೆ. ಬಜೆಟ್‌ ಅನುಮೋದನೆಯಾಗದೆ ನಿಯಮಗಳನ್ನು ಉಲ್ಲಂ ಸಿ ಸುಮಾರು 200 ಕೋಟಿ ರೂ.ಗಳಷ್ಟು ಪಾವತಿಯನ್ನೂ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹಣ ಪಾವತಿಗೆ ತಡೆ ನೀಡುವಂತೆ ಸೂಚಿಸಲಾಗಿದೆ ಎಂದು ಮೂಲಗಳು “ಉದಯವಾಣಿ’ಗೆ ಸ್ಪಷ್ಟಪಡಿಸಿವೆ.

ನವ ನಗರೋತ್ಥಾನದಡಿ 2019-20ನೇ ಸಾಲಿನಲ್ಲಿ ರಸ್ತೆಗಳ ಅಭಿವೃದ್ಧಿ, ಘನತ್ಯಾಜ್ಯ ನಿರ್ವಹಣೆ, 110 ಹಳ್ಳಿಗಳ ಅಭಿವೃದ್ಧಿ ಸೇರಿದಂತೆ ಕೆಆರ್‌ಐಡಿಎಲ್‌ನಿಂದ ಸುಮಾರು 300ಕ್ಕೂ ಅಧಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ನಿಯಮದ ಪ್ರಕಾರ ಏ. 1ರ ನಂತರದಿಂದ ಯಾವುದೇ ಪಾವತಿಯನ್ನು ಮಾಡುವಂತಿಲ್ಲ. ಆದಾಗ್ಯೂ ನಿಯಮ ಉಲ್ಲಂ ಸಿ 200 ಕೋಟಿಗೂ ಅಧಿಕ ಹಣ ಪಾವತಿ ಮಾಡಲಾಗಿದೆ.

ಕಾಮಗಾರಿಗಳೂ ಸ್ತಬ್ದ: ನಗರಾದ್ಯಂತ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಬಾಕಿ ಉಳಿದ, ಈ ವರ್ಷ ಕೈಗೊಂಡಿರುವವು ಸೇರಿದಂತೆ ಸುಮಾರು ಎಂಟು ಸಾವಿರ ಕೋಟಿಗೂ ಅಧಿಕ ಮೊತ್ತದ ಯೋಜನೆಗಳು ವಿವಿಧ ಹಂತದಲ್ಲಿದ್ದವು. ರಸ್ತೆ ವಿಸ್ತರಣೆ, ವೈಟ್‌ಟಾಪಿಂಗ್‌, ಮೇಲ್ಸೇತುವೆ, ಗ್ರೇಡ್‌ ಸಪರೇಟರ್‌ಗಳು, ಕೆರೆ ಅಭಿವೃದ್ಧಿ, ತ್ಯಾಜ್ಯನಿರ್ವಹಣೆ ಒಳಗೊಂಡಂತೆ ಲಾಕ್‌ಡೌನ್‌ ಬೆನ್ನಲ್ಲೇ ಸ್ತಬ್ದಗೊಂಡಿವೆ.ಇದರಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಅವರಲ್ಲಿ ಕೆಲವರಿಗೆ ಕಾಮಗಾರಿಗಳು ನಡೆಯುತ್ತಿರುವ ಜಾಗದ ಬಳಿಯೇ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಕೆಲವರು ಸ್ವಂತ ಊರುಗಳಿಗೆ ತೆರಳಿದ್ದಾರೆ. ನೆಲವನ್ನು ಬಗೆಯುತ್ತಿರುವ ಜೆಸಿಬಿಗಳು, ಟಿಪ್ಪರ್‌ಗಳು ಆಯಾ ಜಾಗದಲ್ಲೇ ನಿಂತಿರುವುದನ್ನು ನಗರದಲ್ಲಿ ಕಾಣಬಹುದು.

ಮೆಟ್ರೋ ಅಭಿವೃದ್ಧಿ ಕಾಮಗಾರಿಯೂ ಸಗಿತ್ಥ : “ನಮ್ಮ ಮೆಟ್ರೋ’ ಎರಡನೇ ಹಂತದ ಸುಮಾರು 26 ಸಾವಿರ ಕೋಟಿ ಮೊತ್ತದ ಯೋಜನೆ ಕೂಡ ಪ್ರಗತಿಯಲ್ಲಿತ್ತು. ಗೊಟ್ಟಿಗೆರೆ-ನಾಗವಾರದ ನಡುವೆ ಸುರಂಗ ಮಾರ್ಗದ ನಾಲ್ಕು ಪ್ಯಾಕೇಜ್‌ಗಳ ಪೈಕಿ ಎರಡಕ್ಕೆ ಟೆಂಡರ್‌ ಅವಾರ್ಡ್‌ ಆಗಿದ್ದು, ಇನ್ನೇನು ಕಾಮಗಾರಿ ಕೈಗೆತ್ತಿಕೊಳ್ಳಬೇಕಿತ್ತು. ಅದೇ ರೀತಿ, ಆರ್‌.ವಿ. ರಸ್ತೆ-ಎಲೆಕ್ಟ್ರಾನಿಕ್‌ ಸಿಟಿ-ಬೊಮ್ಮಸಂದ್ರ ಮೆಟ್ರೋ ನಿರ್ಮಾಣ ಕಾರ್ಯ ನಡೆದಿತ್ತು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.