ಕೋವಿಡ್ 19 ಕಾಲಿಡದಿರಲು ಕಟ್ಟೆಚ್ಚರವೇ ಕಾರಣ


Team Udayavani, Apr 11, 2020, 3:56 PM IST

kolar-tdy-2

ಕೋಲಾರ: ಲಾಕ್‌ಡೌನ್‌ ಆದ ಮೊದಲ ದಿನ ದಿಂದಲೂ ಕೊರೊನಾಗೆ ಕಡಿವಾಣ ಹಾಕುವಲ್ಲಿ ಸಫ‌ಲವಾಗಿರುವ ಜಿಲ್ಲಾಧಿಕಾರಿ ಸಿ.ಸತ್ಯ ಭಾಮ ಹಾಗೂ ಅಧಿಕಾರಿಗಳ ತಂಡದ ಚುರುಕಿನ ಕಾರ್ಯವೈಖರಿ ಕೋಲಾರಕ್ಕೆ ಇದುವರೆಗೂ ಕೋವಿಡ್ 19 ಕಾಲಿಡದಂತೆ ಮಾಡಿದೆ.

ಯಾವುದೇ ವಿಚಾರದಲ್ಲಿಯೂ ಲೋಪವಾಗದಂತೆ ಆರೋಗ್ಯ ಸಿಬ್ಬಂದಿ, ಕಂದಾಯ ಇಲಾಖೆ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಪೊಲೀಸ್‌ ಬಂದೋಬಸ್ತ್ ಕಟ್ಟೆಚ್ಚರ, ಇವುಗಳ ಮೇಲೆ ಉಸ್ತುವಾರಿ ನಿಗಾವಹಿಸಿರುವ ಡಿ.ಸಿ. ಸತ್ಯಭಾಮ ಕೊರೊನಾವನ್ನು ಕೋಲಾರ ಗಡಿ ದಾಟಿ ಬರಲು ಬಿಟ್ಟಿಲ್ಲ. ತುರ್ತು ಗಮನ: ಜಿಲ್ಲೆಯಲ್ಲಿ ಲಾಕ್‌ಡೌನ್‌ ಆದ ಮೊದಲ ದಿನದಿಂದಲೇ ಕೋವಿಡ್ 19 ಶಂಕಿತ ವ್ಯಕ್ತಿಗಳ ಬಗ್ಗೆ ತುರ್ತು ಗಮನ ಹರಿಸಲಾಗುತ್ತಿದೆ. ಶಂಕಿತರು ಹಾಗೂ ಅವರ ಸಂಪರ್ಕಕ್ಕೆ ಬಂದವರನ್ನು ಕಟ್ಟುನಿಟ್ಟಾಗಿ ಕ್ವಾರಂಟೈನ್‌ ಮಾಡಲಾಗುತ್ತಿದೆ.

ಇದರ ಜೊತೆಗೆ ಜಿಲ್ಲೆಯೊಳಕ್ಕೆ ಯಾವುದೇ ವ್ಯಕ್ತಿ ವಾಹನ ಅನಗತ್ಯವಾಗಿ ನುಸುಳದಂತೆ ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದೆ. ದಿನದ 24 ಗಂಟೆಯೂ ಈ ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಪೂರಕವಾಗಿ ಬಹುತೇಕ ಗ್ರಾಮಗಳಲ್ಲಿ ಹೊರಗಿನ ವ್ಯಕ್ತಿಗಳ ಪ್ರವೇಶ ನಿರಾಕರಿಸಲಾಗಿದೆ. ಸಾಮಾಜಿಕ ಅಂತರಕ್ಕೆ ಒತ್ತು ನೀಡಲಾಗುತ್ತಿದೆ.

ಶಂಕಿತರು ಮತ್ತವರ ಸಂಪರ್ಕದಲ್ಲಿರುವವರ ಗಂಟಲ ದ್ರಾವಣವನ್ನು ಕೊರೊನಾ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇಲ್ಲಿಯವರೆಗೂ 350ಕ್ಕೆ ಹೆಚ್ಚು ಮಂದಿಯ ಮೇಲೆ ನಿಗಾ ಇಟ್ಟು ಕ್ವಾರಂಟೈನ್‌ ಮಾಡಲಾಗಿದೆ. ಶಂಕಿತ 168 ಮಂದಿ ಗಂಟಲ ದ್ರವ ಜಿಲ್ಲೆಯಿಂದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದು ಪಾಸಿಟಿವ್‌ ಇಲ್ಲದ ಜಿಲ್ಲೆಗಳಲ್ಲಿ ಅತ್ಯಧಿಕ.

ಗಡಿಗಳಲ್ಲಿ ಕಟ್ಟೆಚ್ಚರ: ಕೋಲಾರ ಜಿಲ್ಲೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗೆ ಹೊಂದಿಕೊಂಡಿದೆ. ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿಗಳನ್ನು ಹೊಂದಿವೆ. ಕೋಲಾರ ಜಿಲ್ಲೆಯ ಗಡಿಯಾಚೆಗಿನ ಎಲ್ಲಾ ಜಿಲ್ಲೆಗಳಲ್ಲಿಯೂ ಕೋವಿಡ್ 19  ಸೋಂಕಿತರಿ ದ್ದಾರೆ. ಆದರೆ, ಕೋಲಾರ ಜಿಲ್ಲೆಗೆ ಇದುವರೆಗೂ ಕಾಲಿಡದಂತೆ ಮಾಡುವಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್‌, ಆರೋಗ್ಯ ಇಲಾಖೆಯ ಶ್ರಮ ಎದ್ದು ಕಾಣಿಸುತ್ತಿದೆ. ತಂಡವಾಗಿ ಕೆಲಸ: ಕೊರೊನಾಕ್ಕೆ ಕಡಿವಾಣ ಹಾಕುವ ವಿಚಾರದಲ್ಲಿ ಡಿ.ಸಿ. ವಿವಿಧ ಇಲಾಖೆ ಗಳ ಜಿಲ್ಲಾ ಅಧಿಕಾರಿಗಳ ನೇತೃತ್ವದ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳಿಗೆ ವಿವಿಧ ಪ್ರದೇಶಗಳ ಉಸ್ತುವಾರಿ ಹಾಗೂ ಸಕಲ ಜವಾಬ್ದಾರಿಯನ್ನು ನೀಡಲಾಗಿದೆ. ಪೊಲೀಸ್‌, ಆರೋಗ್ಯ ಇಲಾಖೆ, ಆಶಾ, ಅಂಗನವಾಡಿ ಕಾರ್ಯಕರ್ತೆಯವರು ಸಮರ ಯೋಧರಂತೆ ಕೊರೊನಾ ವಿರುದ್ಧದ ಸಮರಕ್ಕೆ ಸಜ್ಜಾಗಿ ಶ್ರಮಿಸುತ್ತಿದ್ದಾರೆ.  ಕೋವಿಡ್ 19  ವಿರುದ್ಧದ ಹೋರಾಟದಲ್ಲಿ ಇಷ್ಟೆಲ್ಲಾ ಶ್ರಮಿಸುತ್ತಿದ್ದರೂ, ದೇವರ ಆಶೀ ರ್ವಾದವೇ ಕೋಲಾರವನ್ನು ಕಾಪಾಡುತ್ತಿದೆಯೆಂದು ಡಿ.ಸಿ. ಸತ್ಯಭಾಮ ವಿನೀತರಾಗುತ್ತಾರೆ.

ಶಂಕಿತರ ಬಗ್ಗೆ ತುರ್ತು ಗಮನ, ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ, ಸಾಮಾಜಿಕ ಅಂತರ, ಹೊರಗಿನ ವ್ಯಕ್ತಿಗಳಿಗೆ ಜಿಲ್ಲೆ ಪ್ರವೇಶ ನಿಷೇಧ, ಶಂಕಿತರ ಬಗ್ಗೆ ಫಾಲೋಅಪ್‌, ಸರ್ವೇಕ್ಷಣಾಧಿಕಾರಿ ಡಾ. ಚಾರಣಿಯವರ ಪರಿಶ್ರಮ, ದೇವರ ಆಶೀರ್ವಾದದಿಂದ ಕೋಲಾರಕ್ಕೆ ಇದುವರೆಗೂ ಕೋವಿಡ್ 19 ಕಾಲಿಟ್ಟಿಲ್ಲ.- ಸಿ.ಸತ್ಯಭಾಮ, ಡಿ.ಸಿ, ಕೋಲಾರ.

 

ಕೋಲಾರ ಜಿಲ್ಲೆ ಸಂಪರ್ಕಿಸುವ ನೆರೆ ರಾಜ್ಯಗಳ ಗಡಿಗಳಲ್ಲಿ ಚೆಕ್‌ ಪೋಸ್ಟ್‌, ಅಗತ್ಯ ವಸ್ತುಗಳ ಹೊರತುಪಡಿಸಿ ಯಾವುದೇ ವಾಹನ, ವ್ಯಕ್ತಿ ಗಳ ಅನಗತ್ಯ ಓಡಾಟಕ್ಕೆ ಅವಕಾಶ ನಿರಾಕರಣೆ, ಸಾಮಾ ಜಿಕ ಅಂತರದ ಕಟ್ಟುನಿಟ್ಟಿನ ಸೂಚನೆ ಜಿಲ್ಲೆಗೆ ಇದು ವರೆಗೂ ಕೊರೊನಾ ಕಾಲಿಡದಂತೆ ಮಾಡಲು ಸಹಕಾರಿಯಾಗಿದೆ. ಸುಜೀತಾ ಮಹಮದ್‌, ಎಸ್ಪಿ, ಕೆಜಿಎಫ್

 

ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.