ಸರಕಾರಿ ಅಧಿಕಾರಿ, ಸಿಬಂದಿಗೆ ನಿತ್ಯ ಆಹಾರ ಪೂರೈಕೆ
Team Udayavani, Apr 11, 2020, 5:04 PM IST
ಕಾರ್ಕಳ: ಲಾಕ್ಡೌನ್ ಘೋಷಣೆ ಯಾದ ಬಳಿಕ ಕಾರ್ಕಳದ ಪಡುತಿರುಪತಿ ಕ್ರಿಕೆಟರ್ ತಂಡವು ಪೊಲೀಸರು, ಗೃಹ ರಕ್ಷಕ ದಳ, ಸರಕಾರಿ ಆಸ್ಪತ್ರೆ, ಕಂದಾಯ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತರು, ಪುರಸಭಾ ನೌಕರರು ಹಾಗೂ ಪೌರಕಾರ್ಮಿಕರು, ತಾಲೂಕು ಕಚೇರಿ ಸಿಬಂದಿಗೆ ನಿತ್ಯ ಆಹಾರ ಪೂರೈಸುತ್ತಿದೆ.
ಇಲ್ಲಿನ ಉದಯವಾಣಿ ಪತ್ರಿಕೆ ವಿತರಕ ಗೋವಿಂದರಾಯ ಪೈ ಅವರ ಮನೆಯಲ್ಲಿ ಅಡುಗೆ ತಯಾರಿಸಿ, ವಿತರಣೆ ಮಾಡಲಾಗುತ್ತಿದೆ.
ಈ ಕಾರ್ಯದಲ್ಲಿ ಜೈನ್ ಗೇಮ್ಸ್ ಕ್ಲಬ್, ಜೈ ಹಿಂದ್ ಗೇಮ್ಸ್ ಕ್ಲಬ್ ಸದಸ್ಯರು, ದಾನಿಗಳೂ ಸಾಥ್ ನೀಡುತ್ತಿದ್ದಾರೆ.
ಈ ಮೂಲಕ ಸರಕಾರಿ ನೌಕರರ ಕಾರ್ಯ ನಿರ್ವಹಣೆಗೆ ನೆರವಾಗುವುದಕ್ಕೆ ತಹಶೀಲ್ದಾರ್ ಪುರಂದರ ಹೆಗ್ಡೆ ಮೆಚ್ಚುಗೆ ಸೂಚಿಸಿದ್ದಾರೆ.
ಮಾನವೀಯ ಕಾರ್ಯ
ಸರಕಾರಿ ನೌಕರರೊಂದಿಗೆ ನಿರ್ಗತಿಕರು, ಅಗತ್ಯವಿದ್ದವರಿಗೂ ಊಟ ನೀಡಲಾಗುತ್ತಿದೆ. 150 ಉಪಾಹಾರ ನೀಡಲಾಗುತ್ತಿದೆ. ಸರಕಾರಿ ಆಸ್ಪತ್ರೆ ರೋಗಿಗಳಿಗೆ ಊಟದೊಂದಿಗೆ ಹಣ್ಣೂ ನೀಡಲಾಗುತ್ತಿದೆ. ವಿವಿಧೆಡೆ ಸೇವೆ ಸಲ್ಲಿಸುತ್ತಿರುವವರಿಗೆ ಅನ್ನ ನೀಡುವ ಮೂಲಕ ಸಂಸ್ಥೆ ಮಾನವೀಯ ಕಾರ್ಯ ಮಾಡುತ್ತಿದೆ ಎಂದು ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ