ಚಿಕ್ಕಪಡಸಲಗಿ ಬ್ಯಾರೇಜ್ಗೆ ನೀರು ಬಿಡಲು ಆಗ್ರಹ
Team Udayavani, Apr 11, 2020, 6:11 PM IST
ಜಮಖಂಡಿ: ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್ಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಾಸಕ ಆನಂದ ನ್ಯಾಮಗೌಡ ಹಿಪ್ಪರಗಿ ನೀರಾವರಿ ಇಲಾಖೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಜಮಖಂಡಿ: ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್ಗೆ ನೀರು ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಹಿಪ್ಪರಗಿ ನೀರಾವರಿ ಇಲಾಖೆ ಕಚೇರಿ ಆವರಣದಲ್ಲಿ ಶಾಸಕ ಆನಂದ ನ್ಯಾಮಗೌಡ ಪ್ರತಿಭಟನೆ ನಡೆಸಿದರು.
ಶಾಸಕರು ಮಾತನಾಡಿ, ನೀರಾವರಿ ಇಲಾಖೆ ಬೆಳಗಾವಿ ವಿಭಾಗೀಯ ಆಯುಕ್ತರಿಗೆ ಏ. 4ರಂದು ಮಧ್ಯಾಹ್ನ 2 ಗಂಟೆಗೆ 0.03 ಟಿಎಂಸಿ ನೀರು ಬಿಡುವಂತೆ ನಿರ್ದೇಶನ ನೀಡಿತ್ತು. ಆದರೆ, ಇದುವರೆಗೆ ನೀರು ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು. ಹಿಪ್ಪರಗಿಯ ಸಹಾಯಕ ಅಭಿಯಂತರರು ನೀರು ಬಿಡಲು ಹಿಂದೇಟು ಹಾಕುತ್ತಿದ್ದಾರೆ. ಹಿಪ್ಪರಗಿ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ಶಾಸಕರು ಪೋನ್ ಮೂಲಕ ಡಿಸಿಎಂ ಗೋವಿಂದ ಕಾರಜೋಳ ಅವರೊಂದಿಗೆ ಚರ್ಚಿಸಿ ಅಧಿಕಾರಿಗಳ ಧೋರಣೆಗೆ ಅಸಮಾಧಾನ ವ್ಯಕ್ತಪಡಿಸಿದರು.
ನಾಲ್ಕು ದಿನದಲ್ಲಿ ಹಿಪ್ಪರಗಿ ಜಲಾಶಯದಿಂದ ಚಿಕ್ಕಪಡಸಲಗಿ ಬ್ಯಾರೇಜ್ಗೆ ನೀರು ಹರಿಯಲಿದೆ ಎಂದು ಡಿಸಿಎಂ ಕಾರಜೋಳ, ಶಾಸಕರಿಗೆ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ