14,000 ನಾಡದೋಣಿಗಳನ್ನು ಮೀನುಗಾರಿಕೆಗೆ ಕಳಿಸಲು ತೀರ್ಮಾನ: ಕೋಟಾ ಶ್ರೀನಿವಾಸ ಪೂಜಾರಿ
Team Udayavani, Apr 11, 2020, 7:28 PM IST
ಮಂಗಳೂರು: ಕೇಂದ್ರ ಸರಕಾರ ಮೀನುಗಾರಿಕೆ ನಡೆಸಲು ಅನುಮತಿ ನೀಡಿದ್ದು ಸ್ವಾಗತಾರ್ಹ. ಕಡಲ ಮೀನುಗಾರಿಕೆ ಹಿತದೃಷ್ಟಿಯಿಂದ ಕೇಂದ್ರ ಈ ಆದೇಶ ನೀಡಿದೆ. 14,000 ನಾಡದೋಣಿಗಳನ್ನು ಮೀನುಗಾರಿಕೆಗೆ ಕಳಿಸಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಸಾಮಾಜಿಕ ಅಂತರಕ್ಕೆ ಧಕ್ಕೆಯಾಗದಂತೆ ಮೀನುಗಾರಿಕೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. 14,000 ನಾಡದೋಣಿಗಳನ್ನು ಮೀನುಗಾರಿಕೆಗೆ ಕಳಿಸಲು ತೀರ್ಮಾನ ಮಾಡಲಾಗಿದೆ. ನಾಡದೋಣಿಯಲ್ಲಿ ಕೇವಲ ಐದು ಮಂದಿಯೊಳಗಡೆ ಮಾತ್ರ ಹೋಗಬಹುದು. ಈ ನಾಡದೋಣಿಗಳು ಬೆಳಿಗ್ಗೆ ಹೋಗಿ ಸಂಜೆ ಹಿಂದೆ ಬರುತ್ತವೆ. ಮೀನುಗಾರಿಕೆ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯ ಎಂದರು.
ಈ ಕುರಿತಂತೆ ಶೀಘ್ರವೇ ನಿಯಮಾವಳಿಗಳನ್ನು ಪ್ರಕಟಿಸುತ್ತೇವೆ ಎಂದ ಅವರು, ಶುಕ್ರವಾರ ಕೇರಳದಿಂದ ದೋಣಿ ಮೂಲಕ ಮಂಗಳೂರಿಗೆ ಅಕ್ರಮ ಪ್ರವೇಶ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ