ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 216ಕ್ಕೆ ಏರಿಕೆ
ಶನಿವಾರ ಎಂಟು ಮಂದಿಯಲ್ಲಿ ಸೋಂಕು ದೃಢ
Team Udayavani, Apr 12, 2020, 6:30 AM IST
ಬೆಂಗಳೂರು: ಬೆಂಗಳೂರಿನ ವೈದ್ಯ ಸಹಿತ ರಾಜ್ಯದಲ್ಲಿ ಶನಿವಾರ ಹೊಸ ದಾಗಿ 8 ಮಂದಿಯಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 216ಕ್ಕೆ ಏರಿಕೆಯಾಗಿದೆ.
ಒಟ್ಟು 216 ಮಂದಿಯಲ್ಲಿ 6 ಮಂದಿ ಸಾವಿಗೀಡಾಗಿದ್ದು, 39 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಬಾಕಿ 171 ಮಂದಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆಯಲ್ಲಿರುವ ಸೋಂಕಿತರ ಪೈಕಿ ಬೆಂಗಳೂರಿನ ನಾಲ್ಕು ಮಂದಿ ಹಿರಿಯ ನಾಗರಿಕರು ತುರ್ತು ನಿಗಾ ಘಟಕ ದಲಿ ದ್ದಾರೆ. ಒಬ್ಬರು ಗರ್ಭಿಣಿ ಬಗ್ಗೆ ಪ್ರತ್ಯೇಕ ಆಸ್ಪತ್ರೆಯಲ್ಲಿ ನಿಗಾ ವಹಿಸಲಾಗಿದೆ. ಬಹುತೇಕರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಶನಿವಾರ ಸೋಂಕು ದೃಢಪಟ್ಟವರ ಪೈಕಿ 5 ಮಂದಿ ಮೈಸೂರಿನವರು, ಇಬ್ಬರು ಬೆಂಗಳೂರಿನವರು ಹಾಗೂ ಒಬ್ಬರು ಬೀದರ್ನವರಾಗಿದ್ದಾರೆ. ಈ ಎಲ್ಲ ಸೋಂಕು ದೃಢವಾದ ವ್ಯಕ್ತಿಗಳೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಪತ್ತೆಗೆ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ. ಅವರೆಲ್ಲರನ್ನೂ ಶಂಕಿತರು ಎಂದು ಗುರುತಿಸಿ ಮನೆ ಹಾಗೂ ಆಸ್ಪತ್ರೆಯಲ್ಲಿ ನಿಗಾ ವಹಿಸಲಿದ್ದು, ಕಡ್ಡಾಯವಾಗಿ ಎಲ್ಲರಿಗೂ ಸೋಂಕು ಪರೀಕ್ಷೆ ಮಾಡಲಿದೆ.
ವೈದ್ಯನಿಗೂ ಕೋವಿಡ್ 19 ಸೋಂಕು
ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 32 ವರ್ಷದ ವೈದ್ಯನಿಗೂ ಕೋವಿಡ್ 19 ಸೋಂಕು ತಗಲಿದೆ. ಈ ಹಿಂದೆ ಯಾವುದೇ ವಿದೇಶ ಪ್ರವಾಸ ಹಿನ್ನೆಲೆ ಇಲ್ಲದ, ಉಸಿರಾಟ ತೊಂದರೆ ಯಿಂದ ಬಳಲುತ್ತಿದ್ದ ಬೆಂಗಳೂರು ಮೂಲದ ವ್ಯಕ್ತಿ ಯಲ್ಲಿ ಕೋವಿಡ್ 19 ಸೋಂಕು ದೃಢ ಪಟ್ಟಿತ್ತು. ಬಳಿಕ ಆ ವ್ಯಕ್ತಿಯ ಸೋಂಕು ದೃಢವಾಗುವುದಕ್ಕೂ ಮುಂಚೆ ಯಾವ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆಗೊಳಗಾಗಿದ್ದ ಎಂದು ಪತ್ತೆಹಚ್ಚಿ ಆ ವೈದ್ಯರನ್ನೂ ಪರೀಕ್ಷೆ ಗೊಳಪಡಿಸಿದ್ದು, ಒಬ್ಬ ವೈದ್ಯನಲ್ಲಿ ಸೋಂಕು ದೃಢಪಟ್ಟಿದೆ. ಚಿಕಿತ್ಸೆ ಸಮಯ ಆ ವ್ಯಕ್ತಿ ಯೊಂದಿಗಿನ ನೇರ ಸಂಪರ್ಕವೇ ವೈದ್ಯ ನಿಗೆ ಸೋಂಕು ತಗಲಿರುವುದಕ್ಕೆ ಕಾರಣ. ಆ ವೈದ್ಯನಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ ಕಲ ಬುರಗಿಯಲ್ಲಿಯೂ ತಪಾಸಣೆ ಮಾಡಿದ ವೈದ್ಯರೊಬ್ಬರಿಗೆ ಸೋಂಕು ತಗಲಿತ್ತು. ಬಳಿಕ ಅವರ ಹೆಂಡತಿಗೂ ಸೋಂಕು ಹರಡಿತ್ತು.
ಐದು ಮಂದಿ ಗುಣಮುಖ
ಶನಿವಾರ ಬೆಂಗಳೂರಿನಲ್ಲಿ ನಾಲ್ಕು ಮಂದಿ, ಮೈಸೂರಿನಲ್ಲಿ ಒಬ್ಬ ಕೋವಿಡ್ 19 ಸೋಂಕಿತ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಮುಂದಿನ 14 ದಿನ ಮನೆಯಲ್ಲಿ ಕ್ವಾರಂಟೈನ್ ಇರಲು ವೈದ್ಯರು ಸೂಚಿಸಿದ್ದಾರೆ. ಇಲ್ಲಿಯವರೆಗೂ ರಾಜ್ಯದಲ್ಲಿ 39 ಮಂದಿ ಸೋಂಕಿತರು ಗುಣಮುಖರಾದಂತಾಗಿದೆ.
– ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಪರ್ಕದಿಂದ ಅವಲೋಕನದಲ್ಲಿರುವ ವರು-20,997. ಈ ಪೈಕಿ ಸೋಂಕಿತನ ಪ್ರಾಥಮಿಕ ಸಂಪರ್ಕಿತರು -2,175, ದ್ವಿತೀಯ ಸಂಪರ್ಕಿತರು – 7,070.
– ಆಸ್ಪತ್ರೆಗೆ ಶನಿವಾರ ದಾಖಲಾದ ಶಂಕಿತರು – 129, ಬಿಡುಗಡೆಯಾದವರು – 50, ಸದ್ಯ ಆಸ್ಪತ್ರೆಯಲ್ಲಿರುವ ಶಂಕಿತರು
– 571.
– ಶನಿವಾರ ನೆಗೆಟಿವ್ ಬಂದ ವರದಿ ಗಳು – 558, ಪಾಸಿಟಿವ್ ಬಂದ ವರದಿ ಗಳು – 08 ( ಈ ವರೆಗೂ ಒಟ್ಟಾರೆ ನೆಗೆಟಿವ್ -8,231 , ಪಾಸಿಟಿವ್ – 215).
– ಶಂಕಿತರ ಪೈಕಿ ಶನಿವಾರ ಸೋಂಕು ಪರೀಕ್ಷೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿಗಳು – 585.
– ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ 19 ಸೋಂಕಿತರು – 170
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ