ಕೋವಿಡ್ ವೈರಸ್ ಭೀತಿ: ಜಮ್ಮು-ಕಾಶ್ಮೀರದಲ್ಲಿ 65 ಮಂದಿ ಕೈದಿಗಳ ಬಿಡುಗಡೆ, ಹೈಕೋರ್ಟ್ ಗೆ ವರದಿ
ಹೈಕೋರ್ಟ್ ಪೀಠದ ಜಸ್ಟೀಸ್ ಗೀತಾ ಮಿತ್ತಲ್ ಮತ್ತು ಜಸ್ಟೀಸ್ ರಜನೀಶ್ ಓಸ್ವಾಲ್ ನೇತೃತ್ವದ ಪೀಠ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ
Team Udayavani, Apr 12, 2020, 11:31 AM IST
ಹೈಕೋರ್ಟ್ ಪೀಠದ ಜಸ್ಟೀಸ್ ಗೀತಾ ಮಿತ್ತಲ್ ಮತ್ತು ಜಸ್ಟೀಸ್ ರಜನೀಶ್ ಓಸ್ವಾಲ್ ನೇತೃತ್ವದ ಪೀಠ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ
ಜಮ್ಮು-ಕಾಶ್ಮೀರ:ಮಾರಣಾಂತಿಕ ಕೋವಿಡ್ 19 ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿನ ಇಕ್ಕಟ್ಟಾದ ಜೈಲುಗಳಿಂದ ಸುಮಾರು 65 ಮಂದಿ ಕೈದಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ. ಇದರಲ್ಲಿ ಸಾರ್ವಜನಿಕ ಸುರಕ್ಷಾ ಕಾಯ್ದೆ(ಪಿಎಸ್ ಎ)ಯಡಿ ಬಂಧಿಸಲ್ಪಟ್ಟಿದ್ದ 22 ಮಂದಿ ಸೇರಿದ್ದಾರೆ.
ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಜೈಲಿನ ಮಹಾ ನಿರ್ದೇಶಕ ಹೈಕೋರ್ಟ್ ಗೆ ಲಿಖಿತ ವರದಿಯನ್ನು ಸಲ್ಲಿಸುವ ಮೂಲಕ ಮಾಹಿತಿ ನೀಡಿದ್ದಾರೆ. ಕೋವಿಡ್ 19 ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಅನ್ನು ಹೈಕೋರ್ಟ್ ಪೀಠದ ಜಸ್ಟೀಸ್ ಗೀತಾ ಮಿತ್ತಲ್ ಮತ್ತು ಜಸ್ಟೀಸ್ ರಜನೀಶ್ ಓಸ್ವಾಲ್ ನೇತೃತ್ವದ ಪೀಠ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಿದೆ.
ಕೈದಿಗಳ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ಏ.7ರಂದು ಜೈಲಿನ ಮಹಾ ನಿರ್ದೇಶಕರಿಗೆ ಸೂಚನೆ ನೀಡಿತ್ತು. ಈ ನಿಟ್ಟಿನಲ್ಲಿ ಉನ್ನತ ಮಟ್ಟದ ಸಮಿತಿ ಪರಿಶೀಲನೆ ನಡೆಸಿ, ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ ಬಂಧಿಸಲ್ಪಟ್ಟ 22 ಮಂದಿ, ವಿಚಾರಣಾಧೀನ 32 ಕೈದಿಗಳು, ಅಪರಾಧ ದಂಡ ಸಂಹಿತೆ 107, 109, 151 ಅಡಿ ವಿಚಾರಣೆ ಎದುರಿಸುತ್ತಿದ್ದ 9 ಮಂದಿಯನ್ನು ಬಿಡುಗಡೆಗೊಳಿಸಲು ಶಿಫಾರಸು ಮಾಡಿದೆ. ಅಲ್ಲದೇ 19 ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲು ಅನುಮತಿ ನೀಡಿದೆ ಎಂದು ವರದಿ ತಿಳಿಸಿದೆ.
ಕೋವಿಡ್ 19 ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಾದ್ಯಂತ ಇರುವ ಇಕ್ಕಟ್ಟಾದ ಜೈಲುಗಳಿಂದ ವಿಚಾರಣಾಧೀನ ಕೈದಿಗಳನ್ನು ತಾತ್ಕಾಲಿಕವಾಗಿ ಬಿಡುಗಡೆಗೊಳಿಸಲು ಜಮ್ಮು-ಕಾಶ್ಮೀರ ಸರ್ಕಾರ ಮಾರ್ಚ್ 30ರಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ನಿರ್ಧರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ